ಒಡೆಶಾ ಮೇಲೆ ರಷ್ಯಾ ಕ್ಷಿಪಣಿ ಸುರಿಮಳೆ


Team Udayavani, Apr 4, 2022, 8:10 AM IST

ಒಡೆಶಾ ಮೇಲೆ ರಷ್ಯಾ ಕ್ಷಿಪಣಿ ಸುರಿಮಳೆ

ಕೀವ್‌: ಉಕ್ರೇನ್‌ನ ಮೇಲೆ ರಷ್ಯಾದ ದಾಳಿ ಮುಂದುವರಿದಿದ್ದು, ರಾಜಧಾನಿ ಕೀವ್‌ ಹಾಗೂ ಅದರ ಹೊರವಲಯಗಳಲ್ಲಿ ವಿಧ್ವಂಸಕಾರಿಯಾಗಿ ಶಕ್ತಿಪ್ರದರ್ಶನ ಮಾಡುತ್ತಿದ್ದ ರಷ್ಯಾದ ಪಡೆಗಳು, ಆ ಜಾಗವನ್ನು ತೆರವುಗೊಳಿಸಿ, ಉಕ್ರೇನ್‌ನ ಬೇರೊಂದು ಪಾರ್ಶ್ವದ ಮೇಲೆ ದಾಳಿ ನಡೆಸಲಾರಂಭಿಸಿವೆ. ಅದರ ಪರಿಣಾಮ, ಕಪ್ಪು ಸಮುದ್ರಕ್ಕೆ ಅಂಟಿಕೊಂಡಿರುವ ಉಕ್ರೇನ್‌ನ ದಕ್ಷಿಣ ಭಾಗದಲ್ಲಿರುವ “ಬಂದರು ನಗರ’ ಒಡೆಶಾದ ಮೇಲೆ ರಷ್ಯಾದ ಪಡೆಗಳು ರವಿವಾರ ಹೇರಳವಾಗಿ ಕ್ಷಿಪಣಿ ದಾಳಿ ನಡೆಸಿವೆ.

ಒಡೆಶಾದ ಹಲವಾರು ಕಡೆ ಸ್ಫೋಟದ ಸದ್ದು ಕೇಳಿಬಂದ ಬೆನ್ನಲ್ಲೇ ಅಲ್ಲಲ್ಲಿ ದಟ್ಟ ಹೊಗೆಯು ಮುಗಿಲೆತ್ತರಕ್ಕೆ ಚಿಮ್ಮಿದ್ದು ಇಡೀ ನಗರದಾದ್ಯಾಂತ ದಟ್ಟ ಧೂಮ ಹರಡಿಕೊಂಡಿದೆ. ರವಿವಾರ ಮುಂಜಾನೆ, ಜನರಿನ್ನೂ ನಿದ್ರಾವಸ್ಥೆಯಲ್ಲಿದ್ದ ಸಮಯದಲ್ಲಿ ದಾಳಿ ನಡೆಸಲಾಗಿದ್ದು ಹಲವಾರು ಸಾವು ನೋವು ಸಂಭವಿಸಿರಬಹುದು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ. ನಗರದ ಪ್ರಮುಖ ಕಟ್ಟಡಗಳು ಹಾಗೂ ಸ್ಥಳಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ಉಕ್ರೇನ್‌ನ ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಟೋ ಎಚ್ಚರಿಕೆ: ಕೀವ್‌ ನಗರದ ಹೊರವಲಯದಿಂದ ಹಿಂದಕ್ಕೆ ಸರಿಯುವ ಮೂಲಕ ತಾನು ಉಕ್ರೇನ್‌ ರಾಜಧಾನಿಯನ್ನು   ತೆರವುಗೊಳಿಸಿರುವುದಾಗಿ ರಷ್ಯಾ ಹೇಳಕೂಡದು. ಏಕೆಂದರೆ, ಕೀವ್‌ನಿಂದ ಹೊರಹೋದ ಮಾತ್ರಕ್ಕೆ ಯುದ್ಧದಿಂದ ಹೊರನಡೆದಂತಲ್ಲ ಎಂದು ನ್ಯಾಟೋ ಪಡೆಗಳ ಪ್ರಧಾನ ಕಾರ್ಯದರ್ಶಿ ಜೆನ್ಸ್‌ ಸ್ಟಾಲ್ಟನ್‌ಬರ್ಗ್‌ ತಿಳಿಸಿದ್ದಾರೆ.

ಬುಚಾದಲ್ಲಿ ನರಮೇಧ: ರಾಜಧಾನಿ ಕೀವ್‌ನಿಂದ ವಾಯವ್ಯ ಭಾಗಕ್ಕೆ ಸುಮಾರು 37 ಕಿ.ಮೀ. ದೂರವಿರುವ ಬುಚಾ ಪಟ್ಟಣದ ಮೇಲೆ ಕಳೆದೊಂದು ತಿಂಗಳಿನಿಂದ ರಷ್ಯಾ ಪಡೆಗಳು ನಡೆಸಿದ ದಾಳಿಗೆ ಸುಮಾರು 300 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಆ ನಗರದ ಮೇಯರ್‌ ಹೇಳಿದ್ದಾರೆ.

ಯುದ್ಧಾಪರಾಧಕ್ಕೆ ಹಲವಾರು ಸಾಕ್ಷ್ಯ: ಉಕ್ರೇನ್‌ನಲ್ಲಿ ರಷ್ಯಾದ ಯೋಧರು ನಡೆಸಿರುವ ಪೈಶಾಚಿಕ ದಾಳಿಯು ಐಸಿಸ್‌ ಉಗ್ರರ ಕುಕೃತ್ಯಗಳಿಗಿಂತ ದೊಡ್ಡಮಟ್ಟದ್ದು. ಅಲ್ಲದೆ, ರಷ್ಯಾದ ನಡೆಗಳು ಯಾವ ಯುದ್ಧಾಪರಾಧಕ್ಕಿಂತಲೂ ಕಮ್ಮಿಯೇನಿಲ್ಲ ಎಂದು ಐರೋಪ್ಯ ಒಕ್ಕೂಟ ರಾಷ್ಟ್ರಗಳು ಹೇಳಿವೆ. ಮತ್ತೂಂದೆಡೆ, ಜರ್ಮನಿ ಕೂಡ ರಷ್ಯಾದ ಯುದ್ಧಾಪರಾಧಿ ಮನೋಭಾವವನ್ನು ಖಂಡಿಸಿದ್ದು, ರಷ್ಯಾವು ಮುಂದೆ ಇದಕ್ಕೆ ತಕ್ಕ ಪ್ರತಿಫ‌ಲ ಅನುಭವಿಸಬೇಕಾಗುತ್ತದೆ ಎಂದಿದೆ.

5ನೇ ಸುತ್ತಿನ ನಿರ್ಬಂಧ?: ರಷ್ಯಾದ ಮೇಲೆ ಐದನೇ ಸುತ್ತಿನ ಆರ್ಥಿಕ ನಿರ್ಬಂಧಗಳನ್ನು ಹೇರಲು ಐರೋಪ್ಯ ಒಕ್ಕೂಟಗಳು ಚಿಂತನೆ ನಡೆಸಿವೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಷ್ಯಾ, “”ನಿರ್ಬಂಧಗಳ ಮೂಲಕ ರಷ್ಯಾವನ್ನು ಏಕಾಂಗಿಯಾಗಿ ಮಾಡಲು ಸಾಧ್ಯವಿಲ್ಲ” ಎಂದಿದೆ.

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.