ರಷ್ಯಾ-ಉಕ್ರೇನ್‌ ಯುದ್ಧ ಸನ್ನದ್ಧ


Team Udayavani, Feb 20, 2022, 6:55 AM IST

ರಷ್ಯಾ-ಉಕ್ರೇನ್‌ ಯುದ್ಧ ಸನ್ನದ್ಧ

ಮಾಸ್ಕೋ: ಉಕ್ರೇನ್‌ನಲ್ಲಿ ಯುದ್ಧದ ಕರಿಛಾಯೆ ಮೂಡತೊಡಗಿದೆ. ರಷ್ಯಾ ಮತ್ತು ಉಕ್ರೇನ್‌ ಪರಸ್ಪರ ಯುದ್ಧ ಸನ್ನದ್ಧವಾಗಿ ನಿಂತಿವೆ.

ಉರಿಯುವ ಬೆಂಕಿಗೆ ತುಪ್ಪ ಸುರಿದಂತೆ ರಷ್ಯಾ ಬೆಂಬಲಿತ ಪ್ರತ್ಯೇಕತವಾದಿಗಳು ರಷ್ಯಾ ಗಡಿಯಲ್ಲಿ ಉಕ್ರೇನ್‌ನ ಸೈನಿಕನೊಬ್ಬನನ್ನು ಹತ್ಯೆಗೈದಿದ್ದಾರೆ. ಪರಿಸ್ಥಿತಿ ಉದ್ವಿಗ್ನಗೊಂಡಿದೆ.

ಕದನ ವಿರಾಮ ಒಪ್ಪಂದದ ವೇಳೆ ನಿರ್ಬಂಧಿಸಲಾಗಿದ್ದ 82 ಮತ್ತು 120 ಮಿ.ಮೀ. ಕ್ಯಾಲಿಬರ್‌ ಮೋರ್ಟಾರ್‌ ಶೆಲ್‌ಗ‌ಳನ್ನು ಬಳಸಿ ಬಂಡುಕೋರರು ತಮ್ಮ ಸೈನಿಕನನ್ನು ಕೊಂದಿದ್ದಾರೆ ಎಂದು ಉಕ್ರೇನ್‌ ಆರೋಪಿಸಿದೆ. ಇದರ ನಡುವೆ ರಷ್ಯಾವು ಉಕ್ರೇನ್‌ ಗಡಿಭಾಗದಲ್ಲಿ ಮತ್ತಷ್ಟು ಜೆಟ್‌ಗಳನ್ನು ತಂದಿಳಿಸಿದೆ. ಅಲ್ಲದೆ ಶನಿವಾರ ಉಕ್ರೇನ್‌ ಗಡಿಯ ಸಮೀಪ ವ್ಯೂಹಾತ್ಮಕ ಅಣ್ವಸ್ತ್ರ ಕ್ಷಿಪಣಿಗಳ ಪರೀಕ್ಷೆ ನಡೆಸಿದೆ. ಅಧ್ಯಕ್ಷ ಪುಟಿನ್‌ ಸಮ್ಮುಖದಲ್ಲೇ ಈ ಪರೀಕ್ಷೆಗಳು ನಡೆದಿವೆ. ಇನ್ನೊಂದೆಡೆ ಬಂಡುಕೋರರ ಹಿಡಿತದಲ್ಲಿರುವ ಪ್ರಾಂತ್ಯದ ಮೂಲಕ ಸಾಗಿರುವ ಅಂತಾರಾಷ್ಟ್ರೀಯ ತೈಲ ಪೈಪ್‌ಲೈನ್‌ ಶನಿವಾರ ಸ್ಫೋಟಗೊಂಡಿದೆ. ಈ ಎಲ್ಲ ಬೆಳವಣಿಗೆಗಳು ಯುದ್ಧ ಭೀತಿಯನ್ನು ಉಲ್ಬಣ ಗೊಳಿಸಿದ್ದು, ಯಾವುದೇ ಕ್ಷಣದಲ್ಲಿ ಸಮರ ಆರಂಭವಾಗುವ ಸುಳಿವನ್ನು ನೀಡಿವೆ.

ಶನಿವಾರ ಪೂರ್ವ ಉಕ್ರೇನ್‌ನ ಬಂಡುಕೋರರು ತಮ್ಮ ಪಡೆಗಳನ್ನು ಒಗ್ಗೂಡಿಸಲು ಆರಂ ಭಿಸಿದ್ದಾರೆ. ಡೋನೆಸ್ಕ್ ಪ್ರದೇಶದಲ್ಲಿರುವ ರಷ್ಯಾ ಪರ ಪ್ರತ್ಯೇಕತವಾದಿ ಸರಕಾರದ ಮುಖ್ಯಸ್ಥ ಡೆನಿಸ್‌ ಪುಶಿಲಿನ್‌, ಎಲ್ಲ ಸೇನಾಪಡೆಗಳು ಸಜ್ಜಾಗುವಂತೆ ಸೂಚಿಸಿದ್ದಾರೆ.

ಲುಹಾನ್ಸ್‌ಕ್‌ ಪ್ರದೇಶದ ಪ್ರತ್ಯೇಕತವಾದಿ ನಾಯಕ ಲಿಯೋನಿಡ್‌ ಪ್ಯಾಸೆನಿಕ್‌ರಿಂದಲೂ ಇದೇ ಮಾದರಿಯ ಆದೇಶ ಹೊರಬಿದ್ದಿದೆ. ಶಸ್ತ್ರಾಸ್ತ್ರಗಳನ್ನು ಬಳಸಲು ಬರುವ ಎಲ್ಲರೂ ತಮ್ಮ ತಮ್ಮ ಕುಟುಂಬಗಳು, ಪತ್ನಿ-ಮಕ್ಕಳನ್ನು ರಕ್ಷಿಸಲು ಸಜ್ಜಾಗಿ. ಒಗ್ಗಟ್ಟಾಗಿ ವಿಜಯ ಯಾತ್ರೆ ಮಾಡೋಣ ಎಂದು ಅವರು ಕರೆ ನೀಡಿದ್ದಾರೆ. ಈ ಪ್ರತ್ಯೇಕತವಾದಿಗಳು ಮತ್ತು ಉಕ್ರೇನ್‌ ಪಡೆಗಳ ನಡುವೆ 8 ವರ್ಷಗಳಿಂದ ಸಂಘರ್ಷ ನಡೆಯುತ್ತಲೇ ಇದೆ. ಆದರೆ ಇತ್ತೀಚೆಗೆ ಶೆಲ್‌ ದಾಳಿಗಳು, ಕಾರ್‌ ಬಾಂಬ್‌ ಸ್ಫೋಟ ಹೆಚ್ಚಾಗಿರುವುದು ಮತ್ತು ರಷ್ಯಾ ಕೂಡ ಉಕ್ರೇನ್‌ನ ಅತಿಕ್ರಮಣಕ್ಕೆ ಮುಂದಾಗಿರುವುದು ಈ ಸಂಘರ್ಷದ ಜ್ವಾಲೆಯನ್ನು ಹೆಚ್ಚಿಸಿದೆ.

ಅಮೆರಿಕದಿಂದ ದಿಗ್ಬಂಧನದ ಎಚ್ಚರಿಕೆ: ಉಕ್ರೇನ್‌ ಮೇಲೆ ರಷ್ಯಾ ದಾಳಿ ಮಾಡಿದ್ದೇ ಆದಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ. ಅದರ ವಿರುದ್ಧ ಆರ್ಥಿಕ ದಿಗ್ಬಂಧನ ಹೇರುವುದು ಖಚಿತ ಎಂದು ಅಮೆರಿಕ ಎಚ್ಚರಿಸಿದೆ. ಜರ್ಮನಿಯಲ್ಲಿ ನಡೆದ ಮ್ಯೂನಿಚ್‌ ಭದ್ರತ ಸಮಾವೇಶದಲ್ಲಿ ಮಾತನಾಡಿದ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌, ಈ ವಿಚಾರದಲ್ಲಿ ನಾವು ಸ್ಪಷ್ಟವಾಗಿದ್ದೇವೆ. ಉಕ್ರೇನ್‌ ಮೇಲೆ ರಷ್ಯಾ ದಾಳಿ ನಡೆಸಿದರೆ ಅಮೆರಿಕವು ತನ್ನ ಮಿತ್ರರಾಷ್ಟ್ರಗಳೊಂದಿಗೆ ಸೇರಿ ಹಿಂದೆಂದೂ ಕಂಡರಿಯದಂತಹ ಆರ್ಥಿಕ ದಿಗ್ಬಂಧನವನ್ನು ಹೇರಲಿವೆ ಎಂದಿದ್ದಾರೆ.

ಎರಡು ಸ್ಫೋಟ: ಪೂರ್ವ ಉಕ್ರೇನ್‌ನಲ್ಲಿ ಪ್ರತ್ಯೇಕತವಾದಿಗಳ ಬಾಹುಳ್ಯವಿರುವ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ತೈಲ ಪೈಪ್‌ಲೈನ್‌ ಶನಿವಾರ ಏಕಾಏಕಿ ಸ್ಫೋಟಗೊಂಡಿದೆ. ಡ್ರಜ್‌ಬಾ ಪೈಪ್‌ಲೈನ್‌ ರಷ್ಯಾದಿಂದ ಪೂರ್ವ ಮತ್ತು ಕೇಂದ್ರ ಯುರೋಪ್‌ನ ವಿವಿಧ ಭಾಗಗಳಿಗೆ ಸಂಪರ್ಕ ಹೊಂದಿದೆ. ಸ್ಫೋಟದ ತೀವ್ರತೆಗೆ ಆಗಸದಲ್ಲಿ ಬೆಂಕಿಯುಂಡೆ ಪಸರಿಸಿದ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. ಇದಾದ ಒಂದೇ ತಾಸಿನಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ. ಸಾವುನೋವಿನ ಮಾಹಿತಿ ಲಭ್ಯವಾಗಿಲ್ಲ ಎಂದು ರಷ್ಯಾದ ಮಾಧ್ಯಮಗಳು ವರದಿ ಮಾಡಿವೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.