ಕ್ಷಿಪ್ರ ದಂಗೆಯಿಂದ ಆಂತರಿಕ ಭದ್ರತೆಗೆ ಧಕ್ಕೆ: ರಷ್ಯಾ ಪ್ರಧಾನಿ
Team Udayavani, Jun 27, 2023, 7:00 AM IST
ಮಾಸ್ಕೋ: ವ್ಯಾಗ್ನರ್ ಪಡೆಯ ಕ್ಷಿಪ್ರ ದಂಗೆಯಿಂದ ದೇಶದ ಆಂತರಿಕ ಭದ್ರತೆಗೆ ಸವಾಲಾಗಿ ಪರಿಣಮಿಸಿದೆ ಎಂದು ರಷ್ಯಾದ ಪ್ರಧಾನಮಂತ್ರಿ ಮಿಖಾಯಿಲ್ ಮಿಶುಸ್ಟಿನ್ ಒಪ್ಪಿಕೊಂಡಿದ್ದಾರೆ.
ದಂಗೆಯ ಬಳಿಕ ನಡೆದಿದ್ದ ಮೊದಲ ಸಂಪುಟ ಸಭೆಯಲ್ಲಿ ಅಂಶವನ್ನು ಮೊದಲ ಬಾರಿಗೆ ಒಪ್ಪಿಕೊಳ್ಳಲಾಗಿದೆ ಎಂದು ಹಲವು ಮಾಧ್ಯಮ ವರದಿಗಳಲ್ಲಿ ಉಲ್ಲೇಖೀಸಲಾಗಿದೆ. ಸರ್ಕಾರದ ಎಲ್ಲಾ ಕೆಲಸಗಳು ಸುಸೂತ್ರವಾಗಿ ನಡೆಯುತ್ತಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಇದೇ ವೇಳೆ, ರಷ್ಯಾ ರಕ್ಷಣಾ ಸಚಿವ ಸರ್ಗೆ ಶಿಗೋ ಕೂಡ ಸಾರ್ವಜನಿಕವಾಗಿ ಕಾಣಿಸಿಕೊಂಡು ಪರಿಸ್ಥಿತಿ ನಿಯಂತ್ರಣದಲ್ಲಿ ಎಂದು ಹೇಳುವ ಪ್ರಯತ್ನ ಮಾಡಿದ್ದಾರೆ.
ಕತಾರ್ ದೊರೆ ಜತೆ ಚರ್ಚೆ:
ಈ ನಡುವೆ, ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಕತಾರ್ ದೊರೆ ಶೇಕ್ ತಮೀಮ್ ಬಿನ್ ಹಮ್ಮದ್ ಅಲ್ ತಹಾನಿ ಜತೆಗೆ ಫೋನ್ನಲ್ಲಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ದಂಗೆಯನ್ನು ಹತ್ತಿಕ್ಕುವಲ್ಲಿ ಕೈಗೊಂಡ ಕ್ರಮಗಳನ್ನು ಪುಟಿನ್ ವಿವರಿಸಿದಾಗ ಅದಕ್ಕೆ ದೊರೆ ಸಮರ್ಥನೆ ನೀಡಿದರು ಎಂದು ರಷ್ಯಾ ಸರ್ಕಾರ ಪ್ರಕಟಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್ಗೆ 48 ಗಂಟೆ ಪ್ರಚಾರ ನಿಷೇಧ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?