ರಷ್ಯಾದ Covid-19 ಲಸಿಕೆ ಫೇಕ್ ? ಸುರಕ್ಷೆಯ ಕುರಿತು ಬಹುದೊಡ್ಡ ಪ್ರಶ್ನೆ

ಲಸಿಕೆಯ ಕುರಿತು ಸ್ಪಷ್ಟನೆ ನೀಡಿರುವ ರಷ್ಯಾ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದಿದೆ. ಆದರೆ ಪರೀಕ್ಷೆ ನಡೆಸಲಾದ 38 ಜನರಲ್ಲಿ 144 ರೀತಿಯ ಅಡ್ಡಪರಿಣಾಮಗಳು ಕಂಡುಬಂದಿವೆ. ಪರೀಕ್ಷೆ ಏರ್ಪಟ್ಟ 42ನೇ ದಿನದಂದು 38ಮಂದಿಯಲ್ಲಿ ಇವುಗಳ ಈ ಅಡ್ಡಪರಿಣಾಮಗಳು ಕಾಣಿಸಿಕೊಂಡಿದ್ದವು.

Team Udayavani, Aug 13, 2020, 6:36 PM IST

Covid

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಮಣಿಪಾಲ: ರಷ್ಯಾದ ಲಸಿಕೆ ಸ್ಫುಟ್ನಿಕ್‌-ವಿ ಅನ್ನು ಜಗತ್ತಿನಾದ್ಯಂತ ಪ್ರಶ್ನಿಸಲಾಗುತ್ತಿದೆ.

ಆಗಸ್ಟ್‌ 11ರಂದು ವಿಶ್ವದ ಮೊದಲ ಕೋವಿಡ್‌-19 ಲಸಿಕೆ ನೋಂದಣಿಯ ಸಂದರ್ಭದಲ್ಲಿ ನೀಡಲಾದ ದಾಖಲೆಗಳೇ ಈಗ ಅನೇಕ ಅನುಮಾನಗಳು ಕಾರಣವಾಗಿವೆ.

ಲಸಿಕೆ ಎಷ್ಟು ಸುರಕ್ಷಿತವಾಗಿದೆ ಎಂದು ತಿಳಿಯಲು ಸಂಪೂರ್ಣ ಕ್ಲಿನಿಕಲ್‌ ಅಧ್ಯಯನ ನಡೆದಿಲ್ಲ ಎಂದು ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ.

ಡೈಲಿ ಮೇಲ್‌ನ ಸುದ್ದಿಯನ್ನು ಆಧರಿಸಿ ವರದಿ ಮಾಡಿರುವ ಹಲವು ಮಾಧ್ಯಮಗಳು ಇದರ ಕುರಿತು ಸ್ಪಷ್ಟವಾದ ಚಿತ್ರಣ ಇಲ್ಲ ಎಂದು ಹೇಳಿದೆ. ಕೇವಲ 38 ಜನರಿಗೆ ಲಸಿಕೆಯ ಟ್ರಯಲ್‌ ನೀಡಲಾಗಿದೆ. ಆದರೆ ಟ್ರಯಲ್‌ನ ಮುಂದಿನ ಫ‌ಲಿತಾಂಶಗಳ ಕುರಿತು ಯಾವುದೇ ಮಾಹಿತಿ ಬಹಿರಂಗಗೊಂಡಿಲ್ಲ.

ಆದರೆ ಲಸಿಕೆಯ ಕುರಿತು ಸ್ಪಷ್ಟನೆ ನೀಡಿರುವ ರಷ್ಯಾ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದಿದೆ. ಆದರೆ ಪರೀಕ್ಷೆ ನಡೆಸಲಾದ 38 ಜನರಲ್ಲಿ 144 ರೀತಿಯ ಅಡ್ಡಪರಿಣಾಮಗಳು ಕಂಡುಬಂದಿವೆ ಎಂದು ವರದಿಯೊಂದು ಹೇಳಿದೆ. ಪರೀಕ್ಷೆ ಏರ್ಪಟ್ಟ 42ನೇ ದಿನದಂದು 38ಮಂದಿಯಲ್ಲಿ ಇವುಗಳ ಈ ಅಡ್ಡಪರಿಣಾಮಗಳು ಕಾಣಿಸಿಕೊಂಡಿದ್ದವು. ಈ ಹೊಸ ಡೋಸ್‌ ತೆಗೆದುಕೊಂಡ ಬಳಿಕ ಅನೇಕ ಸಮಸ್ಯೆಗಳಿದ್ದವು. ಇದನ್ನು ಡಬ್ಲ್ಯುಎಚ್‌ಒ ಕಳೆದ ಕೆಲವು ದಿನಗಳಿಂದ ಪ್ರಶ್ನಿಸುತ್ತಾ ಬಂದಿದೆ.

ಲಸಿಕೆಗಾಗಿ ನಿಗದಿಪಡಿಸಿದ ಮಾರ್ಗಸೂಚಿಗಳನ್ನು ರಷ್ಯಾ ಅನುಸರಿಸಲಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ಆದ್ದರಿಂದ ಈ ಲಸಿಕೆ ಸರಿಯಾಗಿ ಕೆಲಸ ನಿರ್ವಹಿಸುವುದನ್ನು ನಂಬುವುದು ಕಷ್ಟ ಎಂದು ವಿಶ್ವಸಂಸ್ಥೆ ಸ್ಪಷ್ಟವಾಗಿ ಹೇಳಿದೆ.

ಸರಕಾರ ಹೇಳುವುದೇನು?
ರಷ್ಯಾದ ರಕ್ಷಣಾ ಸಚಿವಾಲಯದ ಪ್ರಕಾರ, ಲಸಿಕೆ ಪ್ರಯೋಗದ ಫ‌ಲಿತಾಂಶಗಳು ಉತ್ತಮ ರೋಗನಿರೋಧಕ ಶಕ್ತಿಯನ್ನು ಸಾಭೀತುಪಡಿಸಿವೆ. ಯಾವುದೇ ಸ್ವಯಂಸೇವಕರಲ್ಲಿ ನಕಾರಾತ್ಮಕ ಅಡ್ಡಪರಿಣಾಮಗಳು ಕಂಡುಬಂದಿಲ್ಲ ಎಂದು ಹೇಳಿತ್ತು. ಆದರೆ, ಲಸಿಕೆ ನೀಡಿದ ಸ್ವಯಂಸೇವಕರಿಗೆ ಜ್ವರ, ದೇಹದ ನೋವು, ದೇಹದ ಉಷ್ಣತೆ ಹೆಚ್ಚಾಗುವುದು, ಚುಚ್ಚುಮದ್ದಿನ ಸ್ಥಳದಲ್ಲಿ ತುರಿಕೆ, ಊತ ಮೊದಲಾದ ಅಡ್ಡಪರಿಣಾಮಗಳು ಕಂಡುಬಂದಿವೆಯಂತೆ. ಇಷ್ಟು ಮಾತ್ರವಲ್ಲದೇ ದೇಹದಲ್ಲಿನ ಶಕ್ತಿಯ ನಷ್ಟವಾಗಿದ್ದು, ನಿತ್ರಾಣಗಳು ಹೆಚ್ಚಾಗಿವೆ. ಹಸಿವು ಕಡಿಮೆಯಾಗಿದ್ದು, ತಲೆನೋವು, ಅತಿಸಾರ, ನೋಯುತ್ತಿರುವ ಗಂಟಲು, ಶೀತ ಮೊದಲಾದಅಡ್ಡಪರಿಣಾಮಗಳು ಸಾಮಾನ್ಯವಾಗಿವೆ.

ಲಸಿಕೆಯನ್ನು ಮೊದಲು ರಷ್ಯಾ ಅಧ್ಯಕ್ಷ ಪುಟಿನ್‌ ಮಗಳಿಗೆ ನೀಡಿದಾಗ, ದೇಹದ ಉಷ್ಣತೆಯಲ್ಲಿ ಬದಲಾವಣೆಗಳು ಕಂಡಿವೆಯಂತೆ. ಮೊದಲು ಒಂದು ಡಿಗ್ರಿ ಹೆಚ್ಚಾಗಿದ್ದು, ಅನಂತರ ಕಡಿಮೆಯಾಗಿತ್ತು. ಆದರೆ ನನ್ನ ಮಗಳ ದೇಹದಲ್ಲಿ ಪ್ರತಿಕಾಯಗಳ ಪ್ರಮಾನ ಹೆಚ್ಚಿವೆ ಎಂದು ಅಧ್ಯಕ್ಷ ಪುಟಿನ್‌ ಹೇಳಿದ್ದಾರೆ.

ಲಸಿಕೆ ಪ್ರಯೋಗಗಳಿಗೆ ಸಂಬಂಧಿಸಿದ ವೈಜ್ಞಾನಿಕ ಮಾಹಿತಿಯನ್ನು ರಷ್ಯಾ ಇನ್ನೂ ಮಂಡಿಸಿಲ್ಲ. ಪರೀಕ್ಷೆಯ ಮೂರನೇ ಹಂತ ನಡೆದಿವೆಯೇ ಎಂಬ ಕುರಿತಾದ ಅನುಮಾನವೂ ಇದೆ. ಲಸಿಕೆಯ ಮೂರನೇ ಹಂತದ ಪ್ರಯೋಗವಿಲ್ಲದೆ ಉತ್ಪಾದನೆಗೆ ಪರವಾನಗಿ ನೀಡಿದರೆ ಅದನ್ನು ಅಪಾಯಕಾರಿ ಎಂದು ಪರಿಗಣಿಸಲಾಗುತ್ತದೆ ಎಂದು ಅಲ್ಲಿನ ವಿಜ್ಞಾನಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಈ ಎಲ್ಲ ಪ್ರಯೋಗಗಳು ಕೇವಲ 42 ದಿನಗಳಲ್ಲಿ ಪೂರ್ಣಗೊಂಡಿವೆ ಎಂದು ಅಲ್ಲಿನ ದಾಖಲೆಗಳು ಹೇಳುತ್ತವೆ.

ಎಲ್ಲ ಮಾಹಿತಿ ಮುಚ್ಚಿಟ್ಟ ರಷ್ಯಾ
ಜಗತ್ತಿನಲ್ಲಿ ಯಾವುದೇ ಮೂಲೆಯಲ್ಲಿ ಇಂತಹ ತುರ್ತು ಆರೋಗ್ಯದ ಸಂದರ್ಭ ಲಸಿಕೆ ಪ್ರಯೋಗಗಳು ನಡೆದಾಗ ಅದರ ಮಾಹಿತಿಯನ್ನು ಹಂಚಿಕೊಳ್ಳಲಾಗುತ್ತದೆ. ಪ್ರತಿಯೊಂದು ಮಾಹಿತಿಯನ್ನು ಡಬ್ಲ್ಯುಎಚ್‌ಒಗೆ ನೀಡಲಾಗುತ್ತದೆ.ಆದರೆ ರಷ್ಯಾ ಆ ರೀತಿ ಮಾಡಿಲ್ಲ. ಇದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಹೇಳಿಕೆಗಳಲ್ಲಿ ಮಾತ್ರ ಬಹಿರಂಗಪಡಿಸಲಾಗಿದೆ.

ವಿಶ್ವ ಸಂಸ್ಥೆ ಹೇಳಿದ್ದೇನು?
ಇದನ್ನು ಸೈಂಟಿಫಿಕ್‌ ಜರ್ನಲ್‌ ಅಥವಾ ಡಬ್ಲ್ಯುಎಚ್‌ಒ ಜತೆ ಹಂಚಿಕೊಳ್ಳಲಾಗಿಲ್ಲ. ಲಸಿಕೆ ತಯಾರಿಸಲು ರಷ್ಯಾ ಮಾರ್ಗಸೂಚಿಗಳನ್ನು ಅನುಸರಿಸಿಲ್ಲ ಎಂದು ಡಬ್ಲ್ಯುಎಚ್‌ಒ ಹೇಳಿದೆ. ಆದ್ದರಿಂದ ಈ ಲಸಿಕೆಯ ಯಶಸ್ಸು ಮತ್ತು ಸುರಕ್ಷತೆಯನ್ನು ನಂಬುವುದು ಕಷ್ಟ. ಲಸಿಕೆ ಉತ್ಪಾದನೆಗೆ ಹಲವು ಮಾರ್ಗಸೂಚಿಗಳನ್ನು ಮಾಡಲಾಗಿದೆ. ಇದನ್ನು ಇತರ ದೇಶಗಳು ಮಾಡುತ್ತಿವೆ. ರಷ್ಯಾವೂ ಅದನ್ನು ಅನುಸರಿಸಬೇಕು.

 

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.