ರಷ್ಯಾಕ್ಕೆ ಆಘಾತ ನೀಡಿದ ಉಕ್ರೇನ್‌; ಒಂದು ಸಾವಿರ ಯೋಧರ ಸಾವು


Team Udayavani, Nov 3, 2022, 7:55 AM IST

ರಷ್ಯಾಕ್ಕೆ ಆಘಾತ ನೀಡಿದ ಉಕ್ರೇನ್‌; ಒಂದು ಸಾವಿರ ಯೋಧರ ಸಾವು

ಕೀವ್‌/ಮಾಸ್ಕೋ: ಒಂದೇ ದಿನದಲ್ಲಿ ರಷ್ಯಾದ ಒಂದು ಸಾವಿರ ಮಂದಿ ಸೈನಿಕರನ್ನು ಕೊಲ್ಲಲಾಗಿದೆ. ಫೆ.24ರಿಂದ ಇದುವರೆಗೆ 71,200 ಮಂದಿ ರಷ್ಯಾ ಸೈನಿಕರು ಅಸುನೀಗಿದ್ದಾರೆ ಎಂದು ಉಕ್ರೇನ್‌ನ ರಕ್ಷಣಾ ಸಚಿವಾಲಯ ಬುಧವಾರ ಹೇಳಿಕೊಂಡಿದೆ.

ಉಕ್ರೇನ್‌ ರಾಜಧಾನಿ ಕೀವ್‌ ಒಂದರಲ್ಲಿಯೇ ಭಾನುವಾರ 950 ಮಂದಿ ಸೈನಿಕರು ಜೀವ ಕಳೆದುಕೊಂಡಿದ್ದಾರೆ. ಯುದ್ಧ ಸಿದ್ಧತೆ ನಡೆಸದೇ ಇದ್ದ ಸೈನಿಕರ ಮೇಲೆ ಉಕ್ರೇನ್‌ ದಾಳಿ ಎಸಗಿದ್ದರಿಂದ ಈ ಬೆಳವಣಿಗೆಯಾಗಿದೆ ಎಂದು ಹೇಳಲಾಗುತ್ತಿದೆ.

ಫೆ.24ರಂದು ರಷ್ಯಾ ದಾಳಿ ಶುರು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‌ ಯೋಧರು ಅತ್ಯಂತ ಆಕ್ರಮಣಕಾರಿ ದಾಳಿ ನಡೆಸಿದ್ದಾರೆ ಎಂಬ ವಿಶ್ಲೇಷಣೆಗಳು ನಡೆದಿವೆ. ಪ್ರತಿ ದಾಳಿ ನಡೆಸಲು ಇತ್ತೀಚಿನ ದಿನಗಳಲ್ಲಿ ರಷ್ಯಾ ಸೇನೆಗೆ ಆಯ್ಕೆ ಮಾಡಿರುವ ಯೋಧರಿಗೆ ಕಠಿಣ ಸಂದರ್ಭಗಳಲ್ಲಿ ಯುದ್ಧ ನಡೆಸಲು ತರಬೇತಿಯೇ ಇಲ್ಲ.

ಹೀಗಾಗಿಯೇ, ಕ್ಷಿಪ್ರವಾಗಿ ಅವರು ಅಸುನೀಗುತ್ತಿದ್ದಾರೆ. ಕಳೆದ ತಿಂಗಳ ಮಧ್ಯಭಾಗದಿಂದಲೇ ಯುದ್ಧಭೂಮಿಯಲ್ಲಿ ಕಾರ್ಯಾಚರಣೆ ನಡೆಸಿ ಅನುಭವ ಇಲ್ಲದವರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಉಕ್ರೇನ್‌ ಸರ್ಕಾರ ಹೇಳಿಕೊಂಡಿದೆ.

ಮತ್ತೆ ಸೇರ್ಪಡೆ:
ಮತ್ತೂಂದು ಕುತೂಹಲಕಾರಿ ಬೆಳವಣಿಗೆಯಲ್ಲಿ ಯುದ್ಧ ಕಾಲದಲ್ಲಿ ಧಾನ್ಯ ಮತ್ತು ಆಹಾರ ವಸ್ತುಗಳನ್ನು ಸಾಗಿಸುವ ಒಪ್ಪಂದಕ್ಕೆ ಟರ್ಕಿ ಮತ್ತು ರಷ್ಯಾಗಳು ಸೇರ್ಪಡೆಯಾಗುವುದಾಗಿ ಹೇಳಿಕೊಂಡಿವೆ. ಕಪ್ಪು ಸಮುದ್ರ ಪ್ರದೇಶದಲ್ಲಿ ಆಹಾರ ವಸ್ತುಗಳನ್ನು ಸಾಗಿಸುವ ಕಂಟೈನರ್‌ ಹಡುಗಳ ಮೇಲೆ ಉಕ್ರೇನ್‌ ಪಡೆಗಳು ದಾಳಿ ನಡೆಸಲಾರವು ಎಂಬ ಬಗ್ಗೆ ಖಾತರಿ ಸಿಗುತ್ತಿದ್ದಂತೆಯೇ ಈ ಒಪ್ಪಂದಕ್ಕೆ ಮರು ಪ್ರವೇಶ ಮಾಡುವುದಾಗಿ ರಷ್ಯಾ ಹೇಳಿದೆ.

ಟರ್ಕಿ ಮತ್ತು ಉಕ್ರೇನ್‌ನ ದಕ್ಷಿಣ ಭಾಗದ ವ್ಯಾಪ್ತಿಯಲ್ಲಿ ಆಹಾರ ವಸ್ತುಗಳನ್ನು ಸಾಗಿಸುವ ಕಂಟೈನರ್‌ ಹಡಗುಗಳ ಮೇಲೆ ದಾಳಿ ನಡೆಸುವುದಿಲ್ಲ ಎಂದು ಉಕ್ರೇನ್‌ ಹೇಳಿದೆ. ಅದನ್ನು ಪಾಲಿಸುವ ಭರವಸೆ ನಮಗೆ ಇದೆ ಎಂದು ರಷ್ಯಾದ ರಕ್ಷಣಾ ಖಾತೆ ಮಾಸ್ಕೋದಲ್ಲಿ ತಿಳಿಸಿದೆ. ರಷ್ಯಾ ವಶದಲ್ಲಿ ಇರುವ ಕ್ರೀಮಿಯಾ ಪ್ರದೇಶದಲ್ಲಿ ಆಹಾರ ವಸ್ತುಗಳನ್ನು ಸಾಗಿಸುವ ವೇಳೆ ಡ್ರೋನ್‌ ದಾಳಿ ನಡೆಸಲಾಗಿತ್ತು ಎಂದು ಆರೋಪಿಸಲಾಗಿತ್ತು.

ಟರ್ಕಿ ಮಧ್ಯಸ್ಥಿಕೆ:
ಟರ್ಕಿಯ ಅಧ್ಯಕ್ಷ ರೀಪ್‌ ತಯ್ಯಿಪ್‌ ಎಡೋಗನ್‌ ಅವರು ರಷ್ಯಾ ರಕ್ಷಣಾ ಸಚಿವ ಸಗೇ ಶೋಗು ಜತೆಗೆ ಮಾತುಕತೆ ನಡೆಸಿದ್ದಾರೆ. ಅದರ ಫ‌ಲವಾಗಿಯೇ ಆಹಾರ ಕೊರತೆ ಉಂಟಾಗಿರುವ ಕೆಲವು ರಾಷ್ಟ್ರಗಳಿಗೆ ಅದನ್ನು ಪೂರೈಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ಶ್ರಮಿಸುತ್ತಿತ್ತು. ಅದಕ್ಕೆ ರಷ್ಯಾ ಒಪ್ಪಿದೆ. ಸೋಮವಾರವೇ ಕೆಲವು ರಾಷ್ಟ್ರಗಳಿಗೆ ಶೇ.23 ಆಹಾರ ಪೂರೈಕೆಯಾಗಿದೆ. ಆಹಾರ ಪೂರೈಕೆ ಸರಣಿಯಿಂದ ರಷ್ಯಾ ದೂರ ಉಳಿದಿದ್ದರೆ ಸೋಮಾಲಿಯಾ, ಡಿಜಿಬೌತಿ ಮತ್ತು ಸುಡಾನ್‌ ಸೇರಿದಂತೆ ಆಫ್ರಿಕಾ ಖಂಡದ ಹಲವು ರಾಷ್ಟ್ರಗಳಿಗೆ ತೊಂದರೆ ಉಂಟಾಗುತ್ತಿತ್ತು. ಉಕ್ರೇನ್‌ ಮತ್ತು ರಷ್ಯಾ ಜಗತ್ತಿಗೆ ಹೆಚ್ಚಿನ ಪ್ರಮಾಣದಲ್ಲಿ ಗೋಧಿ, ಬಾರ್ಲಿ, ಸೂರ್ಯಕಾಂತಿ ಎಣ್ಣೆ ಉತ್ಪಾದಿಸಿ ಜಗತ್ತಿನ ಮಾರುಕಟ್ಟೆಗೆ ನೀಡುತ್ತಿವೆ.

ಟಾಪ್ ನ್ಯೂಸ್

p deekayya

ದಲಿತ ಮುಖಂಡ ಪಿ.ಡೀಕಯ್ಯ ಅಸಹಜ ಸಾವಿನ ತನಿಖೆ

police siren

ನ್ಯಾಯವಾದಿ,ಅವರ ಗರ್ಭಿಣಿ ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ

ಪಿಲ್ಯ: ಅಡಿಕೆ ತೋಟದಲ್ಲಿ ಅಕ್ರಮ ಮದ್ಯ ದಾಸ್ತಾನು; ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶ

death

ಯಡಮೊಗೆ: ಅಡಿಕೆ ಮರದಿಂದ ಬಿದ್ದು ಸಾವು

police siren

ದಾಖಲೆಗಳಿಲ್ಲದೆ ಅಕ್ಕಿ ಸಾಗಾಟ :13 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ

accuident

ಹಾಲಾಡಿ: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

missing

ಔಷಧ ಅಂಗಡಿಗೆಂದು ಹೋದ ವಿವಾಹಿತೆ ನಾಪತ್ತೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

eart

ನೇಪಾಳದಲ್ಲಿ 5.2 ತೀವ್ರತೆಯ ಭೂಕಂಪ; ಸಾವುನೋವಿನ ತತ್ ಕ್ಷಣದ ವರದಿಗಳಿಲ್ಲ

ಅತೀ ಕಿರಿಯ ವಯಸ್ಸಿನಲ್ಲಿ ಪುಸ್ತಕ ಬರೆದು ವಿಶ್ವ ದಾಖಲೆ ನಿರ್ಮಿಸಿದ 4ರ ಪೋರ

ಅತೀ ಕಿರಿಯ ವಯಸ್ಸಿನಲ್ಲಿ ಪುಸ್ತಕ ಬರೆದು ವಿಶ್ವ ದಾಖಲೆ ನಿರ್ಮಿಸಿದ 4ರ ಪೋರ

tdy-1

ದೋಣಿ ಮೂಲಕ ಅಮೆರಿಕಕ್ಕೆ ಅಕ್ರಮವಾಗಿ ಪ್ರವೇಶಕ್ಕೆ ಯತ್ನ: ಭಾರತೀಯರೂ ಸೇರಿ 8 ಮಂದಿ ಮೃತ್ಯು

ಆತ್ಮಹತ್ಯೆಗೆ ಕಾರಣವಾಯಿತಾ ಕೃತಕ ಬುದ್ಧಿಮತ್ತೆ?ಆತ್ಮಹತ್ಯೆಗೆ ಕಾರಣವಾಯಿತಾ ಕೃತಕ ಬುದ್ಧಿಮತ್ತೆ?

ಆತ್ಮಹತ್ಯೆಗೆ ಕಾರಣವಾಯಿತಾ ಕೃತಕ ಬುದ್ಧಿಮತ್ತೆ?

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

ಸ್ಥೈರ್ಯ ಪರೀಕ್ಷೆಗೆ ಹಿಮಾಗ್ನಿ ಪರ್ವತಾರೋಹಣ!

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

p deekayya

ದಲಿತ ಮುಖಂಡ ಪಿ.ಡೀಕಯ್ಯ ಅಸಹಜ ಸಾವಿನ ತನಿಖೆ

police siren

ನ್ಯಾಯವಾದಿ,ಅವರ ಗರ್ಭಿಣಿ ಪತ್ನಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ

ಪಿಲ್ಯ: ಅಡಿಕೆ ತೋಟದಲ್ಲಿ ಅಕ್ರಮ ಮದ್ಯ ದಾಸ್ತಾನು; ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶ

death

ಯಡಮೊಗೆ: ಅಡಿಕೆ ಮರದಿಂದ ಬಿದ್ದು ಸಾವು

police siren

ದಾಖಲೆಗಳಿಲ್ಲದೆ ಅಕ್ಕಿ ಸಾಗಾಟ :13 ಲಕ್ಷ ರೂ. ಮೌಲ್ಯದ ಸೊತ್ತುಗಳ ವಶ