ರಷ್ಯಾಕ್ಕೆ ಆಘಾತ ನೀಡಿದ ಉಕ್ರೇನ್‌; ಒಂದು ಸಾವಿರ ಯೋಧರ ಸಾವು


Team Udayavani, Nov 3, 2022, 7:55 AM IST

ರಷ್ಯಾಕ್ಕೆ ಆಘಾತ ನೀಡಿದ ಉಕ್ರೇನ್‌; ಒಂದು ಸಾವಿರ ಯೋಧರ ಸಾವು

ಕೀವ್‌/ಮಾಸ್ಕೋ: ಒಂದೇ ದಿನದಲ್ಲಿ ರಷ್ಯಾದ ಒಂದು ಸಾವಿರ ಮಂದಿ ಸೈನಿಕರನ್ನು ಕೊಲ್ಲಲಾಗಿದೆ. ಫೆ.24ರಿಂದ ಇದುವರೆಗೆ 71,200 ಮಂದಿ ರಷ್ಯಾ ಸೈನಿಕರು ಅಸುನೀಗಿದ್ದಾರೆ ಎಂದು ಉಕ್ರೇನ್‌ನ ರಕ್ಷಣಾ ಸಚಿವಾಲಯ ಬುಧವಾರ ಹೇಳಿಕೊಂಡಿದೆ.

ಉಕ್ರೇನ್‌ ರಾಜಧಾನಿ ಕೀವ್‌ ಒಂದರಲ್ಲಿಯೇ ಭಾನುವಾರ 950 ಮಂದಿ ಸೈನಿಕರು ಜೀವ ಕಳೆದುಕೊಂಡಿದ್ದಾರೆ. ಯುದ್ಧ ಸಿದ್ಧತೆ ನಡೆಸದೇ ಇದ್ದ ಸೈನಿಕರ ಮೇಲೆ ಉಕ್ರೇನ್‌ ದಾಳಿ ಎಸಗಿದ್ದರಿಂದ ಈ ಬೆಳವಣಿಗೆಯಾಗಿದೆ ಎಂದು ಹೇಳಲಾಗುತ್ತಿದೆ.

ಫೆ.24ರಂದು ರಷ್ಯಾ ದಾಳಿ ಶುರು ಮಾಡಿದ ಬಳಿಕ ಇದೇ ಮೊದಲ ಬಾರಿಗೆ ಉಕ್ರೇನ್‌ ಯೋಧರು ಅತ್ಯಂತ ಆಕ್ರಮಣಕಾರಿ ದಾಳಿ ನಡೆಸಿದ್ದಾರೆ ಎಂಬ ವಿಶ್ಲೇಷಣೆಗಳು ನಡೆದಿವೆ. ಪ್ರತಿ ದಾಳಿ ನಡೆಸಲು ಇತ್ತೀಚಿನ ದಿನಗಳಲ್ಲಿ ರಷ್ಯಾ ಸೇನೆಗೆ ಆಯ್ಕೆ ಮಾಡಿರುವ ಯೋಧರಿಗೆ ಕಠಿಣ ಸಂದರ್ಭಗಳಲ್ಲಿ ಯುದ್ಧ ನಡೆಸಲು ತರಬೇತಿಯೇ ಇಲ್ಲ.

ಹೀಗಾಗಿಯೇ, ಕ್ಷಿಪ್ರವಾಗಿ ಅವರು ಅಸುನೀಗುತ್ತಿದ್ದಾರೆ. ಕಳೆದ ತಿಂಗಳ ಮಧ್ಯಭಾಗದಿಂದಲೇ ಯುದ್ಧಭೂಮಿಯಲ್ಲಿ ಕಾರ್ಯಾಚರಣೆ ನಡೆಸಿ ಅನುಭವ ಇಲ್ಲದವರನ್ನು ನೇಮಕ ಮಾಡಿಕೊಳ್ಳುತ್ತಿದೆ ಎಂದು ಉಕ್ರೇನ್‌ ಸರ್ಕಾರ ಹೇಳಿಕೊಂಡಿದೆ.

ಮತ್ತೆ ಸೇರ್ಪಡೆ:
ಮತ್ತೂಂದು ಕುತೂಹಲಕಾರಿ ಬೆಳವಣಿಗೆಯಲ್ಲಿ ಯುದ್ಧ ಕಾಲದಲ್ಲಿ ಧಾನ್ಯ ಮತ್ತು ಆಹಾರ ವಸ್ತುಗಳನ್ನು ಸಾಗಿಸುವ ಒಪ್ಪಂದಕ್ಕೆ ಟರ್ಕಿ ಮತ್ತು ರಷ್ಯಾಗಳು ಸೇರ್ಪಡೆಯಾಗುವುದಾಗಿ ಹೇಳಿಕೊಂಡಿವೆ. ಕಪ್ಪು ಸಮುದ್ರ ಪ್ರದೇಶದಲ್ಲಿ ಆಹಾರ ವಸ್ತುಗಳನ್ನು ಸಾಗಿಸುವ ಕಂಟೈನರ್‌ ಹಡುಗಳ ಮೇಲೆ ಉಕ್ರೇನ್‌ ಪಡೆಗಳು ದಾಳಿ ನಡೆಸಲಾರವು ಎಂಬ ಬಗ್ಗೆ ಖಾತರಿ ಸಿಗುತ್ತಿದ್ದಂತೆಯೇ ಈ ಒಪ್ಪಂದಕ್ಕೆ ಮರು ಪ್ರವೇಶ ಮಾಡುವುದಾಗಿ ರಷ್ಯಾ ಹೇಳಿದೆ.

ಟರ್ಕಿ ಮತ್ತು ಉಕ್ರೇನ್‌ನ ದಕ್ಷಿಣ ಭಾಗದ ವ್ಯಾಪ್ತಿಯಲ್ಲಿ ಆಹಾರ ವಸ್ತುಗಳನ್ನು ಸಾಗಿಸುವ ಕಂಟೈನರ್‌ ಹಡಗುಗಳ ಮೇಲೆ ದಾಳಿ ನಡೆಸುವುದಿಲ್ಲ ಎಂದು ಉಕ್ರೇನ್‌ ಹೇಳಿದೆ. ಅದನ್ನು ಪಾಲಿಸುವ ಭರವಸೆ ನಮಗೆ ಇದೆ ಎಂದು ರಷ್ಯಾದ ರಕ್ಷಣಾ ಖಾತೆ ಮಾಸ್ಕೋದಲ್ಲಿ ತಿಳಿಸಿದೆ. ರಷ್ಯಾ ವಶದಲ್ಲಿ ಇರುವ ಕ್ರೀಮಿಯಾ ಪ್ರದೇಶದಲ್ಲಿ ಆಹಾರ ವಸ್ತುಗಳನ್ನು ಸಾಗಿಸುವ ವೇಳೆ ಡ್ರೋನ್‌ ದಾಳಿ ನಡೆಸಲಾಗಿತ್ತು ಎಂದು ಆರೋಪಿಸಲಾಗಿತ್ತು.

ಟರ್ಕಿ ಮಧ್ಯಸ್ಥಿಕೆ:
ಟರ್ಕಿಯ ಅಧ್ಯಕ್ಷ ರೀಪ್‌ ತಯ್ಯಿಪ್‌ ಎಡೋಗನ್‌ ಅವರು ರಷ್ಯಾ ರಕ್ಷಣಾ ಸಚಿವ ಸಗೇ ಶೋಗು ಜತೆಗೆ ಮಾತುಕತೆ ನಡೆಸಿದ್ದಾರೆ. ಅದರ ಫ‌ಲವಾಗಿಯೇ ಆಹಾರ ಕೊರತೆ ಉಂಟಾಗಿರುವ ಕೆಲವು ರಾಷ್ಟ್ರಗಳಿಗೆ ಅದನ್ನು ಪೂರೈಸುವ ನಿಟ್ಟಿನಲ್ಲಿ ವಿಶ್ವಸಂಸ್ಥೆ ಶ್ರಮಿಸುತ್ತಿತ್ತು. ಅದಕ್ಕೆ ರಷ್ಯಾ ಒಪ್ಪಿದೆ. ಸೋಮವಾರವೇ ಕೆಲವು ರಾಷ್ಟ್ರಗಳಿಗೆ ಶೇ.23 ಆಹಾರ ಪೂರೈಕೆಯಾಗಿದೆ. ಆಹಾರ ಪೂರೈಕೆ ಸರಣಿಯಿಂದ ರಷ್ಯಾ ದೂರ ಉಳಿದಿದ್ದರೆ ಸೋಮಾಲಿಯಾ, ಡಿಜಿಬೌತಿ ಮತ್ತು ಸುಡಾನ್‌ ಸೇರಿದಂತೆ ಆಫ್ರಿಕಾ ಖಂಡದ ಹಲವು ರಾಷ್ಟ್ರಗಳಿಗೆ ತೊಂದರೆ ಉಂಟಾಗುತ್ತಿತ್ತು. ಉಕ್ರೇನ್‌ ಮತ್ತು ರಷ್ಯಾ ಜಗತ್ತಿಗೆ ಹೆಚ್ಚಿನ ಪ್ರಮಾಣದಲ್ಲಿ ಗೋಧಿ, ಬಾರ್ಲಿ, ಸೂರ್ಯಕಾಂತಿ ಎಣ್ಣೆ ಉತ್ಪಾದಿಸಿ ಜಗತ್ತಿನ ಮಾರುಕಟ್ಟೆಗೆ ನೀಡುತ್ತಿವೆ.

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.