ವಿದೇಶೀಯರಿಗೂ ಪೌರತ್ವ ನೀಡಲು ಮುಂದಾದ ಸೌದಿ

ಸೌದಿಯಿಂದ ಹಿಂದೆಂದೂ ಕಂಡು ಕೇಳರಿಯದ ಕ್ರಮ!

Team Udayavani, Dec 5, 2019, 7:55 PM IST

saudi

ರಿಯಾದ್‌: ಸೌದಿ ಅರೇಬಿಯಾದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ವಿದೇಶೀಯರಿಗೂ ಪೌರತ್ವ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ವಿವಿಧ ವಲಯಗಳಲ್ಲಿನ ವೃತ್ತಿಪರರು, ತಜ್ಞರಿಗೆ ಪೌರತ್ವವನ್ನು ನೀಡುವುದಾಗಿ ಅಲ್ಲಿನ ಸರಕಾರ ಘೋಷಿಸಿದೆ.

ಭವಿಷ್ಯದ ದಿನಗಳಲ್ಲಿ ತೈಲ ಉತ್ಪಾದನೆ, ಮಾರಾಟ ಹೊರತಾದ ಆರ್ಥಿಕತೆಯನ್ನು ರೂಪಿಸಲು ಸೌದಿ ಅರೇಬಿಯಾ ಹವಣಿಸುತ್ತಿದ್ದು, ತನ್ನ ಆರ್ಥಿಕತೆಯನ್ನು ಗಟ್ಟಿಮಾಡಿಕೊಳ್ಳುವ ಉದ್ದೇಶದಿಂದ ಅದು ಈ ತೀರ್ಮಾನಕ್ಕೆ ಬಂದಿದೆ.

“ವಿಜ್ಞಾನಿಗಳು, ವೈದ್ಯರು, ಕೃಷಿ ತಜ್ಞರು, ನ್ಯೂಕ್ಲಿಯರ್‌-ಮರುಬಳಕೆ ಇಂಧನ ತಜ್ಞರು, ಕೃತಕ ಬುದ್ಧಿಮತ್ತೆ ಪರಿಣತರು ಸೇರಿದಂತೆ ವಿವಿಧ ವಲಯದ ಅತ್ಯುನ್ನತ ಪರಿಣತರಿಗೆ ಪೌರತ್ವ ನೀಡಲಾಗುವುದು. ಈ ಮೂಲಕ ಸೌದಿಯನ್ನು ಸಮೃದ್ಧಿ ಮತ್ತು ವೈವಿಧ್ಯ ದೇಶವನ್ನಾಗಿ ರೂಪಿಸಲಾಗುತ್ತದೆ. ಈ ಬಗ್ಗೆ ಅರಬ್‌ ಜಗತ್ತು ಹೆಮ್ಮೆ ಪಡುತ್ತದೆ’ ಎಂದು ಸರಕಾರದ ನಿರ್ಧಾರಗಳನ್ನು ಪ್ರಕಟಿಸುವ ವೇದಿಕೆ ಸೌದಿ ಪ್ರಾಜೆಕ್ಟ್ ಟ್ವೀಟ್‌ ಮಾಡಿದೆ. ಇದರೊಂದಿಗೆ ಯೆಮೆನ್‌ನ ಪರಿಣತರಿಗೂ ಪೌರತ್ವವನ್ನು ನೀಡುವುದಾಗಿ ಸೌದಿ ಹೇಳಿಕೊಂಡಿದೆ.

ಪರಿಣತರಿಗೆ ಪೌರತ್ವವನ್ನು ನೀಡುವ ಯೋಜನೆಯನ್ನು ಸುಮಾರು ಎರಡು ತಿಂಗಳ ಹಿಂದೆಯೇ, ಸೌದಿ ಸರಕಾರ ಪ್ರಸ್ತಾವಿಸಿತ್ತು. ವಿಷನ್‌ 2030 ಅನ್ವಯ ಸೌದಿಯ°ನು ಇನ್ನಷ್ಟು ಬಲಪಡಿಸಲು ಸೌದಿ ಅರಸರ ದೂರದೃಷ್ಟಿಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧಿಕೃತ ಪ್ರಕಟನೆ ಹೇಳಿತ್ತು.

ಪೌರತ್ವ ಪಡೆಯುವುದು ಸಾಧ್ಯವೇ ಇರಲಿಲ್ಲ
ವಿದೇಶೀಯರು ಸೌದಿಯ ಪೌರತ್ವ ಪಡೆಯುವುದು ಈವರೆಗೆ ಸಾಧ್ಯವೇ ಇರಲಿಲ್ಲ. ಸತತ ಐದು ವರ್ಷಗಳ ವರೆಗೆ ಸೌದಿಯಲ್ಲಿ ವಾಸವಿದ್ದವರಿಗೆ ತಾತ್ಕಾಲಿಕ ಪೌರತ್ವವನ್ನಷ್ಟೇ ಸೌದಿ ನೀಡುತ್ತಿತ್ತು. ಅದಕ್ಕೂ ಹಲವಾರು ಷರತ್ತುಗಳನ್ನು ವಿಧಿಸುತ್ತಿತ್ತು. ಇದು ಹೊರತಾಗಿ ಸೌದಿಯ ಪ್ರಜೆಯಿಂದ ಜನಿಸಿದ ವಿದೇಶೀಯರಿಗೆ ಮಾತ್ರ ಹಲವು ಕಾನೂನು ಕ್ರಮಗಳ ಬಳಿಕ ಪೌರತ್ವ ಪಡೆಯುವುದಕ್ಕೆ ಅವಕಾಶವಿತ್ತು.

ಬದಲಾಗುತ್ತಿದೆ ಸೌದಿ
ಪೆಟ್ರೋಲಿಯಂ ಉತ್ಪನ್ನಗಳ ಉತ್ಪಾದನೆ, ಮಾರಾಟದಿಂದಲೇ ದೇಶ ನಡೆಸುತ್ತಿದ್ದ ಸೌದಿಗೆ ಈಗ ಜಗತ್ತು ನಿಧಾನಕ್ಕೆ ಅದರಿಂದ ದೂರವಾಗುತ್ತಿರುವುದನ್ನು ಪತ್ತೆ ಹಚ್ಚಿದೆ. ಮುಂದಿನ ದಿನಗಳಲ್ಲಿ ತೈಲಗಳಿಗೆ ಬೇಡಿಕೆ ಕಡಿಮೆಯಾದರೆ ಆರ್ಥಿಕತೆ ಕುಸಿಯಲಿದೆ ಎಂಬುದನ್ನು ಅದು ಮನಗಂಡಿದ್ದು ಇದಕ್ಕೆ ಪೂರ್ವಭಾವಿಯಾಗಿ ತನ್ನ ಕಟ್ಟುನಿಟ್ಟಿನ ಕಾನೂನುಗಳನ್ನು ಒಂದೊಂದಾಗಿ ಸಡಿಲಿಸುತ್ತಿದೆ. ಇದಕ್ಕೆ ಪೂರಕವಾಗಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ, ಹೆಣ್ಮಕ್ಕಳಿಗೆ ಚಾಲನೆ ಪರವಾನಿಗೆ ಲಭ್ಯತೆ, ಪ್ರವಾಸಿಗರಿಗೆ ಶೀಘ್ರ ವೀಸಾದಂತಹ ಕ್ರಮಗಳು, ವಸ್ತ್ರ ಸಂಹಿತೆಯ ಕಾನೂನು ಬದಲಾವಣೆಯನ್ನು ಅದು ಮಾಡಿದ್ದು ಈಗ ಪೌರತ್ವ ವಿಚಾರದಲ್ಲೂ ಉದಾರತನ ತೋರಲು ಮುಂದಾಗಿದೆ.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.