ವಾಗ್ಧಂಡನೆ ಗೆದ್ದ ಟ್ರಂಪ್‌


Team Udayavani, Feb 14, 2021, 11:38 PM IST

ವಾಗ್ಧಂಡನೆ ಗೆದ್ದ ಟ್ರಂಪ್‌

ವಾಷಿಂಗ್ಟನ್‌: ಅಮೆರಿಕದ ಕ್ಯಾಪಿಟಲ್‌ ಹಿಲ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದಲ್ಲಿ ವಾಗ್ಧಂಡನೆಯ ಭೀತಿ ಎದುರಿಸುತ್ತಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನಿರಾಳರಾಗಿದ್ದಾರೆ. ನಿರೀಕ್ಷೆಯಂತೆಯೇ ಟ್ರಂಪ್‌ ಮಹಾಭಿಯೋಗಕ್ಕೆ ಸೆನೆಟ್‌ನಲ್ಲಿ ಅಗತ್ಯವಿದ್ದ ಮೂರನೇ ಎರಡರಷ್ಟು ಬಹುಮತ ಸಿಗದ ಕಾರಣ, ಡೆಮಾಕ್ರಾಟ್‌ ಸಂಸದರ ಪ್ರಯತ್ನ ವಿಫ‌ಲವಾಗಿ ಟ್ರಂಪ್‌ ದೋಷಮುಕ್ತರಾಗಿದ್ದಾರೆ.

ವಿಶೇಷವೆಂದರೆ, ಅಮೆರಿಕದಲ್ಲಿ ಎರಡು ಬಾರಿ ವಾಗ್ಧಂಡನೆಯ ವಿಚಾರಣೆಗೆ ಒಳಗಾದ ಏಕೈಕ ಅಧ್ಯಕ್ಷ ಟ್ರಂಪ್‌ ಆಗಿದ್ದು, ಎರಡು ಬಾರಿಯೂ ಅವರು ಖುಲಾಸೆಗೊಂಡಿದ್ದಾರೆ. ದೋಷಮುಕ್ತರಾಗುತ್ತಿದ್ದಂತೆ ಪ್ರತಿಕ್ರಿಯಿಸಿರುವ ಟ್ರಂಪ್‌, “ಅಮೆರಿಕವನ್ನು ಮತ್ತೆ ಶ್ರೇಷ್ಠಗೊಳಿಸುವ ನಮ್ಮ ಐತಿಹಾಸಿಕ, ದೇಶಭಕ್ತಿಯ ಹಾಗೂ ಸುಂದರ ಚಳವಳಿಯು ಈಗ ತಾನೇ ಆರಂಭವಾಗಿದೆ’ ಎಂದಿದ್ದಾರೆ.

ಬಹುಮತಕ್ಕೆ 10 ಮತಗಳ ಕೊರತೆ:

ಇತಿಹಾಸದಲ್ಲೇ ಮೊದಲ ಬಾರಿಗೆ ಟ್ರಂಪ್‌ ಅವರ ರಿಪಬ್ಲಿಕನ್‌ ಪಕ್ಷದ 7 ಸಂಸದರು ಕೂಡ ಡೆಮಾಕ್ರಾಟ್‌ಗಳೊಂದಿಗೆ ಕೈಜೋಡಿಸಿ ಟ್ರಂಪ್‌ ವಿರುದ್ಧದ ವಾಗ್ಧಂಡನೆಗೆ ಬೆಂಬಲ ಸೂಚಿಸಿದ್ದರು. ಅದರಂತೆ, ಭಾನುವಾರ ನಡೆದ ಮತದಾನದಲ್ಲಿ ಟ್ರಂಪ್‌ ವಿರುದ್ಧ 57 ಮತಗಳು ಬಿದ್ದರೆ, ಅವರ ಪರ 43 ಮತಗಳು ಬಿದ್ದವು. ಆದರೆ,  ಸೆನೆಟ್‌ನಲ್ಲಿ ರಿಪಬ್ಲಿಕನ್‌ ಸಂಸದರ ಸಂಖ್ಯೆ ಹೆಚ್ಚಿದ್ದ ಕಾರಣ ಡೆಮಾಕ್ರಾಟ್‌ಗಳು ಸೋಲಬೇಕಾಯಿತು. ಟ್ರಂಪ್‌ರನ್ನು ದೋಷಿ ಎಂದು ಘೋಷಿಸಬೇಕೆಂದರೆ, 67 ಮತಗಳು ಲಭ್ಯವಾಗಬೇಕಿತ್ತು. ಆದರೆ, ಮೂರನೇ ಎರಡರಷ್ಟು ಬಹುಮತಕ್ಕೆ ಕೇವಲ 10 ಮತಗಳ ಕೊರತೆ ಉಂಟಾದ ಕಾರಣ, ಮಹಾಭಿಯೋಗಕ್ಕೆ ಸೋಲಾಗಿ ಟ್ರಂಪ್‌ ಖುಲಾಸೆಗೊಂಡರು.

ಒಂದು ವೇಳೆ, ಟ್ರಂಪ್‌ ದೋಷಿ ಎಂದು ಸಾಬೀತಾಗಿದ್ದರೆ, ಮುಂದೆಂದೂ ಅವರು ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದಂತೆ ನಿಷೇಧ ಹೇರುವ ಅಧಿಕಾರ ಸೆನೆಟ್‌ಗೆ ಇರುತ್ತಿತ್ತು. ಆದರೆ, ಅವರು ಖುಲಾಸೆಗೊಂಡ ಕಾರಣ ಅಧ್ಯಕ್ಷ ಸ್ಥಾನಕ್ಕೇರುವ ಟ್ರಂಪ್‌ ಆಸೆ ಜೀವಂತವಾಗಿ ಉಳಿದಂತಾಗಿದೆ.

ಆಂದೋಲನ ಈಗಷ್ಟೇ ಶುರುವಾಗಿದೆ: ಟ್ರಂಪ್‌

ಅಮೆರಿಕವನ್ನು ಮತ್ತೆ ಶ್ರೇಷ್ಠಗೊಳಿಸುವ ಆಂದೋಲನ ಈಗ ಶುರುವಾಗಿದೆ. ಮುಂಬರುವ ದಿನಗಳಲ್ಲಿ ನನಗೆ ನಿಮ್ಮೊಂದಿಗೆ ಬಹಳಷ್ಟು ವಿಚಾರ ಹಂಚಿಕೊಳ್ಳಬೇಕಿದೆ. ಅಮೆರಿಕವನ್ನು ಮತ್ತಷ್ಟು ಉತ್ಕೃಷ್ಟಗೊಳಿಸುವ ಗುರಿ ಸಾಧಿಸಲು ನಮ್ಮ ವಿಶೇಷ ಪಯಣ ಮುಂದುವರಿಯಲಿ. ನಮ್ಮ ಮುಂದೆ ಸಾಕಷ್ಟು ಕೆಲಸಗಳಿವೆ. ಅಮೆರಿಕದ ಭವಿಷ್ಯವನ್ನು ಉಜ್ವಲಗೊಳಿಸುವಂತಹ ಹಲವು ಧ್ಯೇಯೋದ್ದೇಶಗಳೊಂದಿಗೆ ಸದ್ಯದಲ್ಲೇ ನಾನು ನಿಮ್ಮ ಮುಂದೆ ಬರುತ್ತೇನೆ ಎಂದು ಟ್ರಂಪ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.