ಪಾಕ್‌ಗೆ ಮತ್ತೆ ಮುಖಭಂಗ


Team Udayavani, Sep 17, 2017, 6:05 AM IST

pak.jpg

ವಿಶ್ವಸಂಸ್ಥೆ: ತನ್ನ ನೆಲದಲ್ಲಿ ರಕ್ತಪಿಪಾಸುಗಳನ್ನು ಪೋಷಿಸಿ ಬೆಳೆಸುತ್ತಿದ್ದರೂ ಮತ್ತೂಂದು ದೇಶದ ವಿಚಾರದಲ್ಲಿ ಸುಖಾಸುಮ್ಮನೆ ಮೂಗು ತೂರಿಸುವ ಪಾಕಿಸ್ಥಾನಕ್ಕೆ ಶನಿವಾರ ಭಾರತವು ಕಟು ಪದಗಳ ಮೂಲಕವೇ ನೈತಿಕತೆಯ ಪಾಠ ಮಾಡಿದೆ. ವಿಶ್ವಸಂಸ್ಥೆಯಲ್ಲಿ ಕಾಶ್ಮೀರ ವಿವಾದವನ್ನು ಪ್ರಸ್ತಾವಿಸಿ, ಚಪ್ಪಾಳೆ ಗಿಟ್ಟಿಸಿಕೊಳ್ಳಲು ಯತ್ನಿಸಿದ್ದ ಪಾಕಿಸ್ಥಾನವನ್ನು ಭಾರತವು ಸರಿಯಾಗಿಯೇ ಝಾಡಿಸಿದೆ.

“ನಮ್ಮ ಆಂತರಿಕ ವಿಚಾರದಲ್ಲಿ ಎಳ್ಳಷ್ಟೂ ಹಸ್ತಕ್ಷೇಪ ಮಾಡುವ ಅಧಿಕಾರ ನಿಮಗಿಲ್ಲ. ಭವಿಷ್ಯದಲ್ಲಿ ಇಂಥ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಿ’ ಎಂದು ಹೇಳಿ ವಿಶ್ವಸಮುದಾಯದ ಮುಂದೆಯೇ ಪಾಕಿಸ್ಥಾನಕ್ಕೆ ಭಾರತ ತೀವ್ರ ಮುಖಭಂಗ ಮಾಡಿದೆ.

ಇದು ನಡೆದದ್ದು ಜಿನೇವಾದ ವಿಶ್ವಸಂಸ್ಥೆ ಕಚೇರಿಯಲ್ಲಿ. ಮುಸ್ಲಿಂ ರಾಷ್ಟ್ರಗಳ ಒಕ್ಕೂಟವಾದ ಇಸ್ಲಾ ಮಿಕ್‌ ಸಹಕಾರ ಸಂಘ (ಒಐಸಿ)ದ ಪರ ಪಾಕ್‌ ವಿಶ್ವಸಂಸ್ಥೆಯಲ್ಲಿ ಕಾಶ್ಮೀರದ ಹಿಂಸಾಚಾರವನ್ನು ಪ್ರಸ್ತಾ ವಿಸಿತ್ತು. ಕಾಶ್ಮೀರದಲ್ಲಿನ ಸ್ವದೇಶಿ ಚಳವಳಿಗೆ ಭಾರತ ತೊಂದರೆ ಉಂಟುಮಾಡುತ್ತಿದೆ. ಅಲ್ಲಿ ನಿರಂತರ ಹಿಂಸಾಚಾರ ನಡೆಯುತ್ತಿದ್ದು, ಅದನ್ನು ತಡೆಯುವ ಅಗತ್ಯವಿದೆ ಎಂದೆಲ್ಲ  ಆರೋಪಗಳ ಪಟ್ಟಿ ಮುಂದಿಟ್ಟು ಭಾರತವನ್ನು ಹೀಗಳೆಯಲು ಯತ್ನಿಸಿತ್ತು.

ಇದಕ್ಕೆ “ಭಾರತದ ಪ್ರತಿಕ್ರಿಯಿಸುವ ಹಕ್ಕು’ ನಿಯಮದಡಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಖಾಯಂ ರಾಯಭಾರ ಕಚೇರಿಯ ಕಾರ್ಯದರ್ಶಿ ಸುಮಿತ್‌ ಸೇs…, “ಜಮ್ಮು ಮತ್ತು ಕಾಶ್ಮೀರ ಎನ್ನುವುದು ಭಾರತದ ಅವಿಭಾಜ್ಯ ಹಾಗೂ ಎಂದೂ ಪ್ರತ್ಯೇಕಿಸಲಾಗದ ಅಂಗ. ಹೀಗಾಗಿ, ಅಲ್ಲಿನ ಎಲ್ಲ ಸಂಗತಿಗಳೂ ನಮ್ಮ ಆಂತರಿಕ ವಿಚಾರ. ಅದರ ಬಗ್ಗೆ ಮಾತನಾಡಲು ನೀವ್ಯಾರು’ ಎಂದು ಕೇಳುವ ಮೂಲಕ ಪಾಕಿಸ್ಥಾನದ ಬಾಯಿ ಮುಚ್ಚಿಸಿದರು. ಅಲ್ಲದೆ, “ಒಐಸಿ ನೀಡಿರುವ ಹೇಳಿಕೆಯಲ್ಲಿ ಸತ್ಯಕ್ಕೆ ದೂರವಾದ ಅಂಶಗಳೇ ತುಂಬಿವೆ. ಜಮ್ಮು ಮತ್ತು ಕಾಶ್ಮೀರದ ವಿಚಾರದಲ್ಲಿ ಹಾದಿ ತಪ್ಪಿಸುವಂಥ ಉಲ್ಲೇಖಗಳನ್ನು ಮಾಡಲಾಗಿದೆ. ಇವೆಲ್ಲವನ್ನೂ ಭಾರತವು ಖಂಡತುಂಡವಾಗಿ ನಿರಾಕರಿಸುತ್ತದೆ. ಅಷ್ಟಕ್ಕೂ, ನಮ್ಮ ದೇಶದ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಯಾವ ಅಧಿಕಾರವೂ ಒಐಸಿ ಗಿಲ್ಲ. ಈಗ ಮಾತ್ರವಲ್ಲ, ಭವಿಷ್ಯದಲ್ಲೂ ಇಂತಹ ಹೇಳಿಕೆ ನೀಡುವಾಗ ಎಚ್ಚರಿಕೆಯಿಂದಿರಿ ಎಂದು ನಾವು ಒಐಸಿಗೆ ಹೇಳಬಯಸುತ್ತೇವೆ’ ಎಂದರು.

ಏನಿದು ಒಐಸಿ?: ಇಸ್ಲಾಮಿಕ್‌ ಸಹಕಾರ ಸಂಸ್ಥೆ (ಆರ್ಗನೈಸೇಷನ್‌ ಆಫ್ ಇಸ್ಲಾಮಿಕ್‌ ಕೋ- ಆಪರೇಷನ್‌) ಎನ್ನುವುದು 57 ರಾಷ್ಟ್ರಗಳು ಸೇರಿ ರಚಿಸಿದ ಒಂದು ಗುಂಪು. ಇದರ ಸದಸ್ಯ ರಾಷ್ಟ್ರಗಳ ಪೈಕಿ ಪಾಕಿಸ್ಥಾನವೂ ಒಂದಾಗಿದೆ.

ಪಾಕಿಸ್ಥಾನದ ಆರೋಪ ಏನಾಗಿತ್ತು ?
– ಕಾಶ್ಮೀರದ ಸ್ವದೇಶಿ ಚಳವಳಿಗೆ ಕಪ್ಪು ಚುಕ್ಕೆ ತರಲು ಭಾರತ ಯತ್ನಿಸುತ್ತಿದೆ
– ಬಹುಸಂಖ್ಯಾತ ಕಾಶ್ಮೀರಿಗರನ್ನು ಅಲ್ಪಸಂಖ್ಯಾಕರಿರುವ ಪ್ರದೇಶಕ್ಕೆ ಬದಲಿಸುವ ಮೂಲಕ ಭಾರತ ಸರಕಾರವು ಕಾಶ್ಮೀರದ ಜನಸಂಖ್ಯಾ ಸ್ಥಿತಿಯನ್ನೇ ಬದಲಿಸಲು ಹೊರಟಿದೆ
– ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರಕ್ಕೆ ಕಡಿವಾಣ ಹಾಕಬೇಕು
– ಎಲ್‌ಒಸಿಯಲ್ಲಿ ಭಾರತೀಯ ಸೇನಾ ಪಡೆ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದನ್ನು ತಡೆಯಬೇಕು

ಭಾರತದ ಪ್ರತಿಕ್ರಿಯೆಯೇನು?
– ಜಮ್ಮು-ಕಾಶ್ಮೀರ ಭಾರತದ ಅವಿಭಾಜ್ಯ ಮತ್ತು ಪ್ರತ್ಯೇಕಿಸಲು ಅಸಾಧ್ಯವಾದ ಅಂಗ
– ನಮ್ಮ ಆಂತರಿಕ ವಿಚಾರದಲ್ಲಿ ಮೂಗು ತೂರಿಸುವ ಯಾವ ಅಧಿಕಾರವೂ ಒಐಸಿಗಿಲ್ಲ
– ಒಐಸಿ ಹೇಳಿಕೆಯಲ್ಲಿರುವುದು ಸುಳ್ಳು ಮತ್ತು ಹಾದಿ ತಪ್ಪಿಸುವ ಅಂಶಗಳೇ
– ಭವಿಷ್ಯದಲ್ಲಿ ಇಂತಹ ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸಿ

ಇಬ್ಬರು ಉಗ್ರರ ಹತ್ಯೆ
ಶ್ರೀನಗರ
: ಪಾಕ್‌ ಕಡೆಯಿಂದ ಕಾಶ್ಮೀರದೊಳಗೆ ನುಸುಳಲು ಯತ್ನಿಸಿದ ಇಬ್ಬರು ಉಗ್ರರನ್ನು ಹೊಡೆದುರುಳಿಸಿರುವ ಭಾರತೀಯ ಸೇನೆ, ಒಳನುಸುಳುವಿಕೆ ಪ್ರಯತ್ನವನ್ನು ತಡೆದಿದೆ.

ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಮಚ್ಚಿಲ್‌ ಪ್ರದೇಶದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡ ಲಾಗಿದೆ ಎಂದು ರಕ್ಷಣಾ ಇಲಾಖೆ ವಕ್ತಾರ ಕರ್ನಲ್‌ ರಾಜೇಶ್‌ ಕಾಲಿಯಾ ಹೇಳಿದ್ದಾರೆ.
 

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.