ಸೂಪರ್‌ಮಾರ್ಕೆಟ್‌ಗಳಿಗೆ ಜನರ ಮುತ್ತಿಗೆ! ಶಾಂಘೈನಲ್ಲಿ ಲಾಕ್‌ಡೌನ್‌ ಸಡಿಲಿಕೆ

ಆಹಾರಕ್ಕಾಗಿ ಮುಗಿಬಿದ್ದ ನಾಗರಿಕರು

Team Udayavani, Apr 13, 2022, 7:45 AM IST

ಸೂಪರ್‌ಮಾರ್ಕೆಟ್‌ಗಳಿಗೆ ಜನರ ಮುತ್ತಿಗೆ! ಶಾಂಘೈನಲ್ಲಿ ಲಾಕ್‌ಡೌನ್‌ ಸಡಿಲಿಕೆ

ಬೀಜಿಂಗ್‌/ನವದೆಹಲಿ: ಕಳೆದ ಎರಡು ವಾರಗಳ ಲಾಕ್‌ಡೌನ್‌ನಿಂದ ಬೆಂದು ಬಸವಳಿದ ಶಾಂಘೈ ಜನತೆ ಮಂಗಳವಾರ ಸ್ವಲ್ಪ ನಿಟ್ಟುಸಿರು ಬಿಟ್ಟಿದ್ದಾರೆ.

ಜನಾಕ್ರೋಶಕ್ಕೆ ಮಣಿದ ಚೀನ ಸರ್ಕಾರ ಮಂಗಳವಾರ ನಿರ್ಬಂಧವನ್ನು ಸಡಿಲಿಕೆ ಮಾಡಿದ್ದು, ಈ ಘೋಷಣೆ ಹೊರಬೀಳುತ್ತಿದ್ದಂತೆ ಜನರು ಆಹಾರವಸ್ತುಗಳನ್ನು ಕೊಳ್ಳಲು ಸೂಪರ್‌ಮಾರ್ಕೆಟ್‌ಗಳಿಗೆ ಧಾವಿಸಿದ್ದಾರೆ. ಇನ್ನೂ ಕೆಲವರು “ನಮಗೆ ಸಹಾಯ ಮಾಡಿ’ ಎಂದು ಗೋಳಾಡಿದ್ದಾರೆ.

ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ. 14 ದಿನಗಳಿಂದ 2.50 ಕೋಟಿ ಜನ ಮನೆಗಳಲ್ಲೇ ಬಂಧಿಯಾಗಿದ್ದರು. ಈ ಪೈಕಿ ಎಷ್ಟು ಮಂದಿಗೆ ಹೊರಹೋಗಲು ಅವಕಾಶ ಕೊಡಲಾಗಿದೆ ಎಂಬ ಮಾಹಿತಿ ಬಹಿರಂಗವಾಗಿಲ್ಲ. ಆದರೆ, ಕೆಲವು ಸೂಪರ್‌ಮಾರ್ಕೆಟ್‌ ಹಾಗೂ ಔಷಧ ಮಳಿಗೆಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ.

ಚೀನ ತೊರೆಯಲು ಸೂಚನೆ:
ಈ ನಡುವೆ, ಅಮೆರಿಕ ಸರ್ಕಾರವು ಶಾಂಘೈನಲ್ಲಿರುವ ತನ್ನ ರಾಯಭಾರ ಕಚೇರಿಯ ಸಿಬ್ಬಂದಿಗೆ (ತುರ್ತು ಕೆಲಸವಿಲ್ಲದವರಿಗೆ) ಕೂಡಲೇ ಅಲ್ಲಿಂದ ತೆರಳುವಂತೆ ಸೂಚಿಸಿದೆ.

ಇದನ್ನೂ ಓದಿ:ಗೋವಾ: ಸರ್ಕಾರದ ಸಮಾಜ ಕಲ್ಯಾಣ ಯೋಜನೆಗಳನ್ನು ನಿಲ್ಲಿಸಿಲ್ಲ: ಸಿಎಂ ಸಾವಂತ್ ಸ್ಪಷ್ಟನೆ

ಬೂಸ್ಟರ್‌ 6 ತಿಂಗಳಿಗೆ ಇಳಿಸಿ
ಕೊರೊನಾ ಲಸಿಕೆಯ 2ನೇ ಡೋಸ್‌ ಪಡೆದ ಬಳಿಕ ಬೂಸ್ಟರ್‌ ಡೋಸ್‌ ಪಡೆಯಲು ಇರುವ 9 ತಿಂಗಳ ಅಂತರವನ್ನು 6 ತಿಂಗಳಿಗೆ ಇಳಿಸಿ ಎಂದು ಕೇಂದ್ರ ಸರ್ಕಾರ ಸೀರಂ ಇನ್‌ಸ್ಟಿಟ್ಯೂಟ್‌ ಸಿಇಒ ಅಡಾರ್‌ ಪೂನಾವಾಲ ಮನವಿ ಮಾಡಿದ್ದಾರೆ.

ಹೊಸ ಹೊಸ ರೂಪಾಂತರಿಗಳು ಸೃಷ್ಟಿಯಾಗುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತಾ ದೃಷ್ಟಿಯಿಂದ ಅವಧಿ ತಗ್ಗಿಸಬೇಕೆಂದು ಕೋರಿದ್ದಾರೆ. ಈ ನಡುವೆ, ಒಮಿಕ್ರಾನ್‌ನ ಎರಡು ಹೊಸ ಉಪ ತಳಿಗಳನ್ನು ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಪತ್ತೆಹಚ್ಚಿದ್ದಾರೆ. ಈ ತಳಿಗಳಿಗೆ ಬಿಎ.4 ಮತ್ತು ಬಿಎ.5 ಎಂದು ಹೆಸರಿಡಲಾಗಿದೆ.

ಎಚ್ಚರಿಕೆಯಿರಲಿ ಎಂದ ವೈದ್ಯರು
ದೆಹಲಿಯಲ್ಲಿ ಶೇ.0.5 ಇದ್ದ ಕೊರೊನಾ ಪಾಸಿಟಿವಿಟಿ ದರ ಕೇವಲ ಒಂದು ವಾರದಲ್ಲೇ ಶೇ.2.70ಗೆ ಏರಿಕೆಯಾಗಿದೆ. ಇದು ಮತ್ತೆ ದೇಶದಲ್ಲಿ ಸೋಂಕು ನಿಧಾನವಾಗಿ ಹೆಚ್ಚಳವಾಗುತ್ತಿದೆಯೇ ಎಂಬ ಅನುಮಾನಕ್ಕೆ ಕಾರಣವಾಗಿದೆ. ಆದರೆ, ಈ ಬಗ್ಗೆ ಹೆಚ್ಚೇನೂ ಆತಂಕ ಪಡಬೇಕಾಗಿಲ್ಲ ಎಂದು ವೈದ್ಯರು ಹೇಳಿದ್ದಾರೆ. ಜನರು ಸ್ವಲ್ಪ ಎಚ್ಚರಿಕೆಯಿಂದಿದ್ದು, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಉತ್ತಮ ಎಂಬ ಸಲಹೆಯನ್ನೂ ನೀಡಿದ್ದಾರೆ.

 

ಟಾಪ್ ನ್ಯೂಸ್

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Checkbounce case: ಆರೋಪಿ ಮಹಿಳೆ ಖುಲಾಸೆ

Checkbounce case: ಆರೋಪಿ ಮಹಿಳೆ ಖುಲಾಸೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.