ಪಾಕಿಸ್ಥಾನದ ನೂತನ ಪ್ರಧಾನಿಯಾಗಿ ಶಹಬಾಜ್ ಷರೀಫ್ ಆಯ್ಕೆ
Team Udayavani, Apr 11, 2022, 4:58 PM IST
ಇಸ್ಲಮಾಬಾದ್: ಪಾಕಿಸ್ಥಾನದ ನೂತನ ಪ್ರಧಾನ ಮಂತ್ರಿಯಾಗಿ ಮಾಜಿ ಪ್ರಧಾನಿ ನವಾಜ್ ಷರೀಫ್ ಸಹೋದರ, ಪಾಕಿಸ್ಥಾನ ಮುಸ್ಲಿಂ ಲೀಗ್- ನವಾಜ್ ಪಕ್ಷದ ಮುಖಂಡ ಶಹಬಾಜ್ ಷರೀಫ್ ಆಯ್ಕೆಯಾಗಿದ್ದಾರೆ.
ಸದನದ ನೂತನ ನಾಯಕರ ಆಯ್ಕೆ ಪ್ರಕ್ರಿಯೆ ಭಾನುವಾರ ಆರಂಭವಾಗಿತ್ತು. ರವಿವಾರದ ಪ್ರಮುಖ ಬೆಳವಣಿಗೆಯಾಗಿ ಬಿಲಾವಲ್ ಭುಟ್ಟೋ ನೇತೃತ್ವದ ಪಾಕಿಸ್ಥಾನ ಪೀಪಲ್ಸ್ ಪಾರ್ಟಿ ಮತ್ತುವಿಪಕ್ಷಗಳ ಇತರ ಮುಖಂಡರೆಲ್ಲ ಸೇರಿ ಶಹಬಾಜ್ ಷರೀಫ್ ಅವರನ್ನು ಮೈತ್ರಿಕೂಟದ ಮುಖಂಡರನ್ನಾಗಿ ಆಯ್ಕೆ ಮಾಡಿದ್ದಾರೆ.
ಶನಿವಾರ ರಾತ್ರಿ ಪಾಕಿಸ್ಥಾನದ ನ್ಯಾಶನಲ್ ಅಸೆಂಬ್ಲಿಯಲ್ಲಿ ನಡೆದ ಅವಿಶ್ವಾಸ ಮತ ಮಂಡನೆ ಮತದಾನದಲ್ಲಿ ಇಮ್ರಾನ್ ಖಾನ್ ಸೋಲನುಭವಿಸಿದ್ದರು. ಹೀಗಾಗಿ ಅವರು ಪ್ರಧಾನಿ ಪಟ್ಟವನ್ನು ಕಳೆದುಕೊಂಡಿದ್ದರು.
ಇದನ್ನೂ ಓದಿ:ಬಿಜೆಪಿ ಬಂದ ನಂತರ ಕೊಲೆಗಳು ಹೆಚ್ಚಾಗಿವೆ, ತಲೆ ಒಡೆಯುವ ವಾತಾವರಣ ಸೃಷ್ಟಿಯಾಗಿದೆ: ಎಚ್ ಡಿಕೆ
“16 ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರದ ಕೇಸ್ ಮತ್ತು 8 ಸಾವಿರ ಕೋಟಿ ರೂಪಾಯಿಯ ಇನ್ನೊಂದು ಭ್ರಷ್ಟಾಚಾರದ ಕೇಸ್ ಹೊಂದಿರುವ ವ್ಯಕ್ತಿ… ಆ ವ್ಯಕ್ತಿಯನ್ನು ಪ್ರಧಾನಿಯನ್ನಾಗಿ ಆಯ್ಕೆ ಮಾಡಿದ್ದಾರೆ. ದೇಶಕ್ಕೆ ಅದಕ್ಕಿಂತ ದೊಡ್ಡ ಅವಮಾನ ಇರಲಾರದು. ರಾಷ್ಟ್ರೀಯ ಅಸೆಂಬ್ಲಿಗೆ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಇಮ್ರಾನ್ ಖಾನ್ ಅವರು ಪಿಟಿಐ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಯಾರು ಈ ಶಹಬಾಜ್ ಷರೀಫ್: ಮೂರು ಬಾರಿ ಪ್ರಧಾನಿಯಾಗಿದ್ದ ನವಾಜ್ ಷರೀಫ್ ಅವರ ಸಹೋದರನಾಗಿರುವ ಶೆಹಬಾಜ್, ದೇಶದ ಹೊರಗೆ ಅಷ್ಟೊಂದು ಪ್ರಸಿದ್ದರಲ್ಲದಿದ್ದರೂ, ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿದ್ದ ಪಾಕಿಸ್ಥಾನದಲ್ಲಿ ಉತ್ತಮ ಹೆಸರು ಗಳಿಸಿದ್ದಾರೆ.
1999 ರಲ್ಲಿ ಪಾಕಿಸ್ತಾನದಲ್ಲಿ ಮಿಲಿಟರಿ ದಂಗೆಯ ನಂತರ ಶಹಬಾಜ್ ಜೈಲಿನಲ್ಲಿದ್ದರು, ಬಳಿಕ ಸೌದಿ ಅರೇಬಿಯಾಕ್ಕೆ ಗಡಿಪಾರಾಗಿದ್ದರು. 2007 ರಲ್ಲಿ ದೇಶಕ್ಕೆ ಮರಳಿದ ಅವರು, ಪನಾಮ ಪೇಪರ್ಸ್ ಲೀಕ್ ಸಂಬಂಧಿಸಿದ ಆಸ್ತಿಯನ್ನು ಮರೆಮಾಚುವ ಆರೋಪದ ಮೇಲೆ 2017 ರಲ್ಲಿ ನವಾಜ್ ಷರೀಫ್ ತಪ್ಪಿತಸ್ಥರೆಂದು ಸಾಬೀತಾದ ನಂತರ ರಾಷ್ಟ್ರೀಯ ರಂಗಕ್ಕೆ ಪ್ರವೇಶಿಸಿದರು.
ನವಾಜ್ ಷರೀಫ್ಗಿಂತ ಭಿನ್ನವಾಗಿ, ಶಹಬಾಜ್ ಅವರು ಪಾಕಿಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ವಿದೇಶಿ ಮತ್ತು ರಕ್ಷಣಾ ನೀತಿಯನ್ನು ನಿಯಂತ್ರಿಸುವ ಪಾಕಿಸ್ತಾನದ ಮಿಲಿಟರಿಯೊಂದಿಗೆ ಸೌಹಾರ್ದಯುತ ಸಂಬಂಧವನ್ನು ಹೊಂದಿದ್ದಾರೆ ಎಂದು ವಿಶ್ಲೇಷಕರು ಹೇಳುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!