ಹಡಗು ದುರಂತ: 12 ಮಂದಿ ಮಾನವ ಕಳ್ಳಸಾಗಣೆದಾರರ ಸೆರೆ
ಗ್ರೀಸ್ ಹಡುಗು ದುರಂತದಿಂದ ಎಚ್ಚೆತ್ತ ಪಾಕ್ ಸರ್ಕಾರ
Team Udayavani, Jun 20, 2023, 8:20 AM IST
ಕರಾಚಿ: ಪಾಕಿಸ್ತಾನದ ವಿವಿಧ ಭಾಗಗಳಲ್ಲಿ ಮಾನವ ಕಳ್ಳಸಾಗಣೆಯಲ್ಲಿ ತೊಡಗಿದ್ದ ಕನಿಷ್ಠ 12 ಮಂದಿಯನ್ನು ಅಲ್ಲಿನ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಗ್ರೀಸ್ ಹಡುಗು ದುರಂತದಿಂದ ಎಚ್ಚೆತ್ತುಕೊಂಡ ಪಾಕಿಸ್ತಾನ ಸರ್ಕಾರ ಮಾನವ ಕಳ್ಳಸಾಗಣೆದಾರರ ಹೆಡೆಮುರಿ ಕಟ್ಟುವ ನಿಟ್ಟಿನಲ್ಲಿ ಭದ್ರತಾ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಿದೆ.
ಸುಮಾರು 750 ಮಂದಿ ಅಕ್ರಮ ವಲಸಿಗರನ್ನು ಹೊತ್ತು ಯೂರೋಪ್ನತ್ತ ತೆರಳುತ್ತಿದ್ದ ದೊಡ್ಡ ಮೀನುಗಾರಿಕೆ ದೋಣಿಯೊಂದು, ಅತಿ ಭಾರದಿಂದ ಗ್ರೀಸ್ನ ಸಮುದ್ರದಲ್ಲಿ ಜೂ.14ರ ಮಧ್ಯರಾತ್ರಿ ಮುಳುಗಿತು. ಈ ದುರಂತದಲ್ಲಿ 500ಕ್ಕೂ ಹೆಚ್ಚು ವಲಸಿಗರು ಮೃತಪಟ್ಟರು. ಅಕ್ರಮ ವಲಸಿಗರ ಪೈಕಿ ಪಾಕಿಸ್ತಾನಿಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ದುರಂತದಲ್ಲಿ ಪಾಕಿಸ್ತಾನದ 300ಕ್ಕೂ ಹೆಚ್ಚು ವಲಸಿಗರು ಮೃತಪಟ್ಟಿದ್ದಾರೆ. 12 ಮಂದಿ ಬದುಕುಳಿದಿದ್ದಾರೆ ಎಂದು ವರದಿಗಳು ತಿಳಿಸಿವೆ.
ದೋಣಿ ದುರಂತದಲ್ಲಿ ಮೃತಪಟ್ಟವರಿಗಾಗಿ ಭಾನುವಾರ ಪಾಕಿಸ್ತಾನದಲ್ಲಿ ಶೋಕಾಚರಣೆ ನಡೆಸಲಾಯಿತು. ಇನ್ನೊಂದೆಡೆ, ಕರಾಚಿಯ ವಿಮಾನ ನಿಲ್ದಾಣದಿಂದ ದುಬೈಗೆ ಪರಾರಿಯಾಗಲು ಮುಂದಾಗಿದ್ದ ಕನಿಷ್ಠ 12 ಮಂದಿ ಮಾನವ ಕಳ್ಳಸಾಗಣೆದಾರರನ್ನು ಪೊಲೀಸರು ಬಂಧಿಸಿದ್ದಾರೆ. ಇವರ ಪೈಕಿ ಯೂರೋಪ್ಗೆ ದೋಣಿಯಲ್ಲಿ ವಲಸಿಗರನ್ನು ಸಾಗಿಸುತ್ತಿದ್ದವರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು