ಶಶಿಯ ಒಡಲಲ್ಲಿ ‘ಚಂದ್ರ ಕಂಪನ’ : ಏನಂತಾರೆ ವಿಜ್ಞಾನಿಗಳು?

ಚಂದ್ರ ಕಂಪನ ದಾಖಲಿಸಿಕೊಳ್ಳಲು ಇರಿಸಲಾಗಿದೆ 4 ಕಂಪನ ಮಾಪಕಗಳು

Team Udayavani, May 14, 2019, 1:20 PM IST

Moon-726

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭೂಮಿಯ ಆಳದಲ್ಲಿರುವ ಶಿಲಾಪದರಗಳಲ್ಲಿ ಉಂಟಾಗುವ ಕಂಪನಗಳನ್ನು ನಾವು ‘ಭೂಕಂಪ’ ಎಂದು ಕರೆಯುತ್ತೇವೆ. ಅದೇ ರೀತಿಯಲ್ಲಿ ಭೂಮಿಯ ನೈಸರ್ಗಿಕ ಉಪಗ್ರಹವಾಗಿರುವ ಚಂದ್ರನ ಒಡಲಲ್ಲೂ ಕಂಪನಗಳುಂಟಾಗುತ್ತವೆಯೇ? ಹೌದೆಂದಾರೆ ಅದರ ಸ್ವರೂಪ ಹೇಗಿರುತ್ತದೆ? ಏನಿದು ‘ಚಂದ್ರ ಕಂಪನ’ದ ರಹಸ್ಯ? ಇಲ್ಲಿದೆ ನೋಡಿ ಉತ್ತರ.

ಚಂದ್ರ ಗ್ರಹದ ಒಡಲು ತಂಪಾಗುವ ಕಾರಣದಿಂದ ಚಂದ್ರ ಕುಗ್ಗುತ್ತಾನಂತೆ. ಕಳೆದ ಹಲವಾರು ಶತ ಮಿಲಿಯನ್ ವರ್ಷಗಳಿಂದ ಈ ಪ್ರಕ್ರಿಯೆ ನಡೆಯುತ್ತಿದ್ದು ಅಂದಿನಿಂದ ನಮ್ಮ ಚಂದ್ರನ ಗಾತ್ರ ಸುಮಾರು 50 ಮೀಟರ್ ಗಳಷ್ಟು ಅಂದರೆ ಬರೋಬ್ಬರಿ 150 ಅಡಿಗಳಷ್ಟು ಕುಗ್ಗಿದೆ.

ದ್ರಾಕ್ಷಿಯೊಂದು ಸುರುಟಿ ಹೋಗಿ ಯಾವ ರೀತಿಯಲ್ಲಿ ಒಣ ದ್ರಾಕ್ಷಿಯ ಸ್ವರೂಪವನ್ನು ಪಡೆದುಕೊಳ್ಳುತ್ತದೆಯೋ ಹಾಗೆ ಚಂದ್ರನೂ ಸಹ ಕುಗ್ಗುತ್ತಾ ಹೋದ ಸಂದರ್ಭದಲ್ಲಿ ಸುಕ್ಕುಗಳು ಉಂಟಾಗುತ್ತವೆ.

ಆದರೆ ದ್ರಾಕ್ಷಿ ಹಣ್ಣಿನ ಸಿಪ್ಪೆ ಯಾವ ಸ್ಥಿತಿಗೆ ಬೇಕಾದರೂ ಒಗ್ಗಿಕೊಳ್ಳುತ್ತದೆ ಆದರೆ ಚಂದ್ರನ ಮೆಲ್ಮ್ಯೆ ಗಟ್ಟಿಯಾಗಿ ಬಿರುಕು ಗುಣದಿಂದ ಕೂಡಿರುವುದರಿಂದ ಚಂದ್ರ ಕುಗ್ಗಿದಾಗ ಅದರ ಸಂರಚನೆಯಲ್ಲಿ ‘ಚಾಚು ಪದರ’ಗಳು ಉಂಟಾಗುತ್ತದೆ. ಇಲ್ಲಿ ಒಂದು ಪದರ ತನ್ನ ಸಮೀಪದ ಪದರದ ಮೇಲ್ಭಾಗಕ್ಕೆ ಚಾಚಿಕೊಳ್ಳುವ ಸ್ಥಿತಿ ಇದಾಗಿರುತ್ತದೆ.

ಈ ರೀತಿಯ ಸಂರಚನೆಗಳು ಚಂದ್ರನಲ್ಲಿ ಈಗಲೂ ಕ್ರಿಯಾಶೀಲವಾಗಿದ್ದು ಇದರಿಂದ ಚಂದ್ರ ತಂಪಾಗಿ ಸಂಕುಚಿತಗೊಳ್ಳುವ ಸಂದರ್ಭದಲ್ಲೆಲ್ಲಾ ಚಂದ್ರನ ಒಡಲಲ್ಲಿ ಕಂಪನಗಳು ಉಂಟಾಗುತ್ತಿರುತ್ತವೆ ಎಂಬುದನ್ನು ವಿಜ್ಞಾನಿಗಳು ಕಂಡುಕೊಂಡಿದ್ದಾರೆ. ಇಂತಹ ಕಂಪನಗಳು ಕೆಲವೊಮ್ಮೆ ತೀವ್ರ ಸ್ವರೂಪದಲ್ಲಿದ್ದು ರಿಕ್ಟರ್ ಮಾಪಕದಲ್ಲಿ 5ಕ್ಕಿಂತಲೂ ಹೆಚ್ಚಿರುತ್ತದೆ.

ಚಂದ್ರನ ಮೆಲ್ಭಾಗವನ್ನು ಸೂಕ್ಷ್ಮವಾಗಿ ಗಮನಿಸಿದಾಗ ಈ ಸಂರಚನೆಗಳು ಮಹಡಿಯ ಮೆಟ್ಟಿಲುಗಳಂತೆ ಕಾಣುತ್ತದೆ. ಇದು ಸಾಮಾನ್ಯವಾಗಿ ಹತ್ತು ಮೀಟರ್ ಗಳಷ್ಟು ಎತ್ತರವನ್ನು ಹೊಂದಿದ್ದು ಹಲವಾರು ಕಿಲೋಮೀಟರ್ ಗಳವರೆಗೆ ಇದು ಚಾಚಿಕೊಂಡಿರುತ್ತದೆ ಎಂಬುದು ವಿಜ್ಞಾನಿಗಳ ಅಭಿಪ್ರಾಯವಾಗಿದೆ.

ಅಪೋಲೋ ಖಗೋಳ ವಿಜ್ಞಾನಿಗಳು ಚಂದ್ರನ ಮೆಲ್ಮೈಯ ಮೇಲೆ ಇರಿಸಿರುವ ನಾಲ್ಕು ಕಂಪನ ಮಾಪಕಗಳ ಮೂಲಕ ವಿಶಿಷ್ಟ ಗಣಿತ ಲೆಕ್ಕಾಚಾರದಲ್ಲಿ ಈ ಕಂಪನಗಳನ್ನು ಅಳೆಯಲಾಗಿ ‘ಚಂದ್ರ ಕಂಪನ’ ಸಂಬಂಧಿತ ವಿಸ್ತೃತ ಅಧ್ಯಯನ ವರದಿಯನ್ನು ವಿಜ್ಞಾನಿಗಳು ಸಿದ್ಧಪಡಿಸಿದ್ದಾರೆ.

ಅಪೋಲೋ 11, 12, 14, 15 ಮತ್ತು 16 ಮಿಷನ್ ಉಡ್ಡಯನ ಸಂದರ್ಭದಲ್ಲಿ ಈ ಕಂಪನ ಮಾಪಕಗಳನ್ನು ಚಂದ್ರನ ಮೆಲೆ ಇರಿಸಲಾಗಿತ್ತು. ಇವುಗಳಲ್ಲಿ ಅಪೋಲೋ 11 ಇರಿಸಿದ್ದ ಕಂಪನ ಮಾಪಕ ಕೇವಲ ಮೂರು ವಾರಗಳವರೆಗೆ ಮಾತ್ರವೇ ಕೆಲಸ ಮಾಡಿತ್ತು.

ಇನ್ನುಳಿದ ನಾಲ್ಕು ಕಂಪನ ಮಾಪಕಗಳು ಒಟ್ಟಾರೆಯಾಗಿ 28 ಚಂದ್ರ ಕಂಪನಗಳನ್ನು ದಾಖಲಿಸಿಕೊಂಡಿದೆ. ಇವುಗಳಲ್ಲಿ ಕಂಪನ ಪ್ರಮಾಣ ರಿಕ್ಟರ್ ಮಾಪಕದಲ್ಲಿ 2 ರಿಂದ 5ರವರೆಗೂ ದಾಖಲಾಗಿತ್ತು.

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.