ಕೋವಿಡ್ 19 ಸೋಂಕು; ಕೇಜ್ರಿವಾಲ್ ಹೇಳಿಕೆಗೆ ಸಿಂಗಾಪುರ್ ಆಕ್ಷೇಪ, ಏನಿದು ಆರೋಪ?
ರೂಪಾಂತರಿ ಸೋಂಕು ಭಾರತದಲ್ಲಿ ಹುಟ್ಟಿಕೊಂಡಿರುವುದಾಗಿದೆ ಎಂದು ಸಿಂಗಾಪುರ್ ಸಚಿವಾಲಯ ತಿರುಗೇಟು ನೀಡಿದೆ.
Team Udayavani, May 19, 2021, 12:16 PM IST
ನವದೆಹಲಿ: ಸಿಂಗಾಪುರದಲ್ಲಿ ನೂತನ ಕೋವಿಡ್ ಸೋಂಕು ಪತ್ತೆಯಾಗಿದ್ದು, ಇದು ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂಬ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆರೋಪವನ್ನು ಸಿಂಗಾಪುರ್ ಬುಧವಾರ(ಮೇ 19) ನಿರಾಕರಿಸಿದೆ. ಕೇಜ್ರಿವಾಲ್ ಅವರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಸಿಂಗಾಪುರ್ ಆರೋಗ್ಯ ಸಚಿವಾಲಯ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.
ಇದನ್ನೂ ಓದಿ:ಕಾರವಾರ: ದೇವರ ಮುಂದೆ ಮಗುವಿನ ಶವ ಕೊಂಡೊಯ್ದ ಅಜ್ಜಿ ; ಬದುಕಿಸು ಎಂದು ಪ್ರಾರ್ಥಿಸಿದಳು
ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ ಆರೋಪಕ್ಕೆ ಸಿಂಗಾಪುರ್ ಖಡಕ್ ಪ್ರತಿಕ್ರಿಯೆ ನೀಡಿರುವ ಹಿನ್ನೆಲೆಯಲ್ಲಿ, ದೆಹಲಿ ಸಿಎಂ ಭಾರತದ ವಿಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಚಿವ ಡಾ.ಎಸ್.ಜೈಶಂಕರ್ ಸ್ಪಷ್ಟನೆ ನೀಡಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಮಂಗಳವಾರ, ಸಿಂಗಾಪುರದಲ್ಲಿ ಪತ್ತೆಯಾಗಿರುವ ಕೋವಿಡ್ ಹೊಸ ತಳಿಯ ಸೋಂಕು ಮಕ್ಕಳಿಗೆ ಹೆಚ್ಚು ಅಪಾಯಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದಿಂದ ಆಗಮಿಸುವ ಎಲ್ಲಾ ವಿಮಾನ ಸಂಚಾರವನ್ನು ನಿರ್ಬಂಧಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದರು.
There is no truth in the assertion that there is a new COVID strain in Singapore. Phylogenetic testing has shown that the B.1.617.2 variant is the prevalent strain in many of the COVID cases, including in children, in recent weeks in Singapore.https://t.co/uz0mNPNxlE https://t.co/Vyj7gyyzvJ
— Singapore in India (@SGinIndia) May 18, 2021
ಕೇಜ್ರಿವಾಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಿಂಗಾಪುರ್ ಆರೋಗ್ಯ ಸಚಿವಾಲಯ, ಸಿಂಗಾಪುರ್ ಕೋವಿಡ್ ತಳಿ ಇಲ್ಲ, ಅಲ್ಲದೇ ಕೇಜ್ರಿವಾಲ್ ಅವರ ಹೇಳಿಕೆಯಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಹೇಳಿದೆ. ಇತ್ತೀಚೆಗಿನ ಕೆಲವು ವಾರಗಳಲ್ಲಿ ಪತ್ತೆಯಾಗಿರುವ ಕೋವಿಡ್ 19 ಪ್ರಕರಣಗಳಲ್ಲಿನ ಬಿ.1.617.2 ರೂಪಾಂತರಿ ಸೋಂಕು ಭಾರತದಲ್ಲಿ ಹುಟ್ಟಿಕೊಂಡಿರುವುದಾಗಿದೆ ಎಂದು ಸಿಂಗಾಪುರ್ ಸಚಿವಾಲಯ ತಿರುಗೇಟು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ