ಹಿಮ ಬಾಂಬ್‌: 60 ಸಾವು: ಅಮೆರಿಕದಾದ್ಯಂತ ಜನ ಜೀವನ ಅಸ್ತವ್ಯಸ್ತ; ವಿದ್ಯುತ್‌ ವ್ಯತ್ಯಯ


Team Udayavani, Dec 28, 2022, 6:15 AM IST

ಹಿಮ ಬಾಂಬ್‌: 60 ಸಾವು: ಅಮೆರಿಕದಾದ್ಯಂತ ಜನ ಜೀವನ ಅಸ್ತವ್ಯಸ್ತ; ವಿದ್ಯುತ್‌ ವ್ಯತ್ಯಯ

ನ್ಯೂಯಾರ್ಕ್‌: ಕ್ರಿಸ್ಮಸ್‌ ಮತ್ತು ಹೊಸ ವರ್ಷದ ಈ ಸಂದರ್ಭದಲ್ಲಿ ಬಾಂಬ್‌ ಚಂಡಮಾರುತದಿಂದ ಅಮೆರಿಕ ತತ್ತರಿಸಿ ಹೋಗಿದೆ. ಚಂಡಮಾರುತದ ಪರಿಣಾಮ ಅಮೆರಿಕದಲ್ಲಿ ಕನಿಷ್ಠ 60 ಮಂದಿ ಮೃತಪಟ್ಟಿದ್ದಾರೆ.

ಈ ಪೈಕಿ ನ್ಯೂಯಾರ್ಕ್‌ ಒಂದರಲ್ಲೇ 27 ಮಂದಿ ಅಸುನೀಗಿದ್ದಾರೆ. ಅಮೆರಿಕ ಸರಕಾರದ ಪ್ರಕಾರ ಇದೊಂದು “ಶತಮಾನದ ಹಿಮ ದುರಂತ’ ಎಂದು ಬಣ್ಣಿಸಿದೆ.

ಹಿಮದ ಮಳೆಯಿಂದಾಗಿ ರಸ್ತೆಯಲ್ಲಿ ನಿಂತಿರುವ ಕಾರುಗಳು, ಟ್ರಕ್‌ಗಳು, ಬಸ್‌ಗಳ ಸಹಿತ ಇತರ ವಾಹನಗಳು ಹಿಮದಿಂದ ತುಂಬಿ ಹೋಗಿವೆ. ಮನೆಗಳು ಮತ್ತು ಕಟ್ಟಡಗಳ ಛಾವಣಿಗಳು ಹಿಮಚ್ಛಾದಿತವಾಗಿವೆ. ನ್ಯೂಯಾರ್ಕ್‌ ಮತ್ತು ಬಫೆಲೊ ನಗರಗಳಲ್ಲಿ ರಸ್ತೆಯಲ್ಲಿ ತುಂಬಿರುವ ಹಿಮವನ್ನು ತೆರವು ಮಾಡುವ ಕಾರ್ಯ ದಲ್ಲಿ ಸ್ಥಳೀಯ ಪಾಲಿಕೆ ಸಿಬಂದಿ ನಿರತರಾಗಿದ್ದಾರೆ.

ಕಡು ಚಳಿ: ಮೊನಟಾನಾ ಎಂಬಲ್ಲಿ ತಾಪಮಾನ ಮೈನಸ್‌ 45 ಡಿಗ್ರಿ ಸೆಲ್ಸಿಯಸ್‌, ಐಯೋವಾದ ಡೆಸ್‌ ಮಾನಿಸ್‌ನಲ್ಲಿ ತಾಪಮಾನ ಮೈನಸ್‌ 37 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ. ಶತಮಾನದ ಹಿಮ ದುರಂತದಿಂದಾಗಿ ಅಮೆರಿಕದ 20 ಕೋಟಿ ಮಂದಿಗೆ ತೊಂದರೆಯಾಗಿದೆ. ಹಲವು ಪ್ರಾಂತಗಳಲ್ಲಿ ಇನ್ನೂ ವಿದ್ಯುತ್‌ ಪೂರೈಕೆ ವ್ಯತ್ಯಯವಾಗಿದೆ.

ಮುಂದುವರಿದ ರಕ್ಷಣ ಕಾರ್ಯಾಚರಣೆ: ಬಾಂಬ್‌ ಚಂಡಮಾರುತದಿಂದ ಹಾನಿಯಾದ ಪ್ರದೇಶಗಳಲ್ಲಿ ರಕ್ಷಣ ಕಾರ್ಯಾಚರಣೆ ಮುಂದುವರಿದಿದೆ. ನ್ಯೂಯಾರ್ಕ್‌ ಮತ್ತು ಬಫೆಲೊ ನಗರಗಳಲ್ಲಿ ಮೃತದೇಹಗಳನ್ನು ಕಾರಿನಿಂದ ಹೊರತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಶ್ಚಿಮ ನ್ಯೂಯಾರ್ಕ್‌ನ ಕೆಲವು ಪ್ರದೇ ಶಗಳಲ್ಲಿ 23 ಸೆ.ಮೀ. ಹಿಮ ಬಿದ್ದಿದೆ. ಬಫೆಲೊದ ನಯಾಗರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.25 ಮೀ. ಹಿಮ ಬಿದ್ದಿದೆ ಎಂದು ಅಮೆರಿಕ ಹವಾಮಾನ ಇಲಾಖೆ ವರದಿ ಮಾಡಿದೆ.

ವಿಮಾನ ಹಾರಾಟ ರದ್ದು
ಬಾಂಬ್‌ ಚಂಡಮಾರುತದ ಹಿನ್ನೆಲೆಯಲ್ಲಿ ಇತ್ತೀಚೆಗೆ ಅಮೆರಿಕದಲ್ಲಿ 15,000 ಹೆಚ್ಚು ವಿಮಾನಗಳ ಸಂಚಾರ ರದ್ದುಗೊಂಡಿದೆ. ಸೋಮವಾರ ಒಂದೇ ದಿನ 3,410 ದೇಶೀಯ ಮತ್ತು ಅಂತಾರಾಷ್ಟ್ರೀಯ ವಿಮಾನಗಳ ಸಂಚಾರ ರದ್ದಾಗಿದೆ. ಇದರಿಂದ ಪ್ರವಾಸಿಗರು ಸಂಕಷ್ಟ ಅನುಭವಿಸುತ್ತಿದ್ದು, ವಿಮಾನ ನಿಲ್ದಾಣಗಳಲ್ಲೇ ಠಿಕಾಣಿ ಹೂಡುವಂತಾಗಿದೆ. ಪ್ರಮುಖವಾಗಿ ಅಟ್ಲಾಂಟಾ, ಲಾಸ್‌ ವೇಗಸ್‌, ಸಿಯೇಟಲ್‌, ಬಾಲ್ಟಿಮೊರ್‌, ಡೆನ್ವರ್‌ ಮತ್ತು ಚಿಕಾಗೊ ನಗರಗಳ ದೇಶೀಯ ವಿಮಾನಗಳ ಹಾರಾಟ ರದ್ದುಗೊಂಡಿವೆ. ಚಂಡಮಾರುತದಿಂದ ಹಲವು ನಗರಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಮಲಾ ಹ್ಯಾರಿಸ್‌ ಮನೆಗೆ ವಲಸಿಗರು
ಟೆಕ್ಸಾಸ್‌ನ ನೈಋತ್ಯ ಭಾಗದಿಂದ ಆಗಮಿಸಿರುವ ವಲಸಿಗರು ಬಾಂಬ್‌ ಚಂಡಮಾರುತದ ಹಿನ್ನೆಲೆಯಲ್ಲಿ ಸುರಿಯುತ್ತಿರುವ ನಿರಂ ತರ ಹಿಮದ ಮಳೆಯಿಂದಾಗಿ ಸೂರಿನ ವ್ಯವಸ್ಥೆ ಇಲ್ಲದೇ ಚಳಿಯಲ್ಲಿ ನಡುಗುತ್ತಿದ್ದರು. ರಕ್ಷಣ ಕಾರ್ಯಪಡೆಯ ತಂಡ ಸುಮಾರು 130 ವಲಸಿಗರನ್ನು ಬಸ್‌ ಮೂಲಕ ವಾಷಿಂಗ್ಟನ್‌ನಲ್ಲಿರುವ ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್‌ ಮನೆಗೆ ತಂದು ಬಿಟ್ಟಿದ್ದಾರೆ. ಅವರ ಮನೆಯಲ್ಲೇ ವಲಸಿಗರಿಗೆ ವಾಸ್ತವ್ಯದ ವ್ಯವಸ್ಥೆ ಕಲ್ಪಿಸಲಾಗಿದೆ.

ಚಂಡಮಾರುತದಿಂದ ಸಾವಿಗೀಡಾದ ಕುಟುಂಬಗಳಿಗೆ ನನ್ನ ಸಂತಾಪಗಳು. ಶೀಘ್ರ ರಕ್ಷಣ ಕಾರ್ಯಾಚರಣೆ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.
-ಜೋ ಬೈಡೆನ್‌, ಅಮೆರಿಕ ಅಧ್ಯಕ್ಷ

ಟಾಪ್ ನ್ಯೂಸ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.