ಸಾಮಾಜಿಕ ಅಂತರ ಕಾಯ್ದುಕೊಂಡರೆ ಸಾವಿನ ಅಂತರವೂ ಕಡಿಮೆ


Team Udayavani, Apr 3, 2020, 3:00 PM IST

ಸಾಮಾಜಿಕ ಅಂತರ ಕಾಯ್ದುಕೊಂಡರೆ ಸಾವಿನ ಅಂತರವೂ ಕಡಿಮೆ

ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದೆಂದರೆ ಅದೇನೂ ಕೋವಿಡ್ ಗೆಂದು ರೂಪಿತವಾದ ಸೂತ್ರವಲ್ಲ. ಅದು ಬಹಳ ವರ್ಷಗಳಿಂದ ಅನುಸರಿಸುತ್ತಾ ಬಂದಿದ್ದ ಕ್ರಮ. ಹಿಂದೆಯೂ ಸಾಂಕ್ರಾಮಿಕ ರೋಗ ಕಾಡಿದಾಗಲೆಲ್ಲಾ ಹೀಗೆಯೇ ಮಾಡಿದ್ದು. ಅದರರ್ಥ ಹೀಗೆಯೇ ಲಾಕ್‌ಡೌನ್‌. ಯಾವುದೂ ಇಲ್ಲ, ಎಲ್ಲ ಬಂದ್‌ !

ನ್ಯೂಯಾರ್ಕ್‌: ಸಾಮಾಜಿಕ ಅಂತರ ನಿಯಮದಿಂದ ಆಗುವ ಲಾಭವೇನು? ಅದೇನು ಕೋವಿಡ್ವನ್ನು ಕಟ್ಟಿ ಹಾಕುತ್ತದೆಯೇ ಎಂದೆಲ್ಲಾ ಕೆಲವರು ಪ್ರಶ್ನಿಸುತ್ತಿದ್ದರು.

ವಿವಿಧ ದೇಶಗಳ ಸರಕಾರಗಳು ಈ ಬಗ್ಗೆ ಹೆಚ್ಚು ಗಮನಹರಿಸುತ್ತಿದ್ದರೆ, ಇನ್ನು ಕೆಲವು ರಾಷ್ಟ್ರಗಳು ಗಂಭೀರವಾಗಿ ತೆಗೆದುಕೊಂಡಿಲ್ಲ.

ಎಲ್ಲದರ ಪರಿಣಾಮ ಅಮೆರಿಕ, ಬ್ರಿಟನ್‌ ತತ್ತರಿಸುತ್ತಿರುವುದನ್ನು ಕಂಡರೆ ಅನುಭವಕ್ಕೆ ಬರುತ್ತದೆ. ಇಟಲಿಯಂತೂ ಸಾವಿನ ಬಿಸಿಗೆ ಹೆಚ್ಚು ಕಡಿಮೆ ಕರಗಿಯೇ ಹೋಗಿದೆ. ಈ ಮಧ್ಯೆಯೇ ಹಲವು ಪರಿಣಿತರು ಸಾಮಾಜಿಕ ಅಂತರದ ಮಹತ್ವವನ್ನು ವಿವರಿಸುತ್ತಿದ್ದಾರೆ.

ಈಗ ಮತ್ತೆ ಅಮೇರಿಕದ ಸಂಶೋಧಕರು ಮತ್ತೆ ಹೇಳಿರುವುದೇನು ಗೊತ್ತೇ?   -ಸಾಮಾಜಿಕ ಅಂತರ ಕಾಯ್ದುಕೊಂಡರೆ ಸಾವಿನ ಸಂಖ್ಯೆಯನ್ನು ತಡೆಯಬಹುದು.

ಜೀವ ಉಳಿಸುತ್ತಿರುವ ಸಾಮಾಜಿಕ ಅಂತರ
ವೈದ್ಯಕೀಯ ತಂತ್ರಜ್ಞಾನ ಸಂಸ್ಥೆಯೊಂದು ಹಂಚಿಕೊಂಡಿರುವ ಮಾಹಿತಿ ಪ್ರಕಾರ, ಅಮೆರಿಕವು 29 ರಾಜ್ಯಗಳಲ್ಲಿ ಹೇರಿರುವ ಲಾಕ್‌ಡೌನ್‌ ಹಾಗೂ ಸಾಮಾಜಿಕ ಅಂತರ ಪಾಲನೆ ನಿಯಮ ಫ‌ಲ ಕೊಡುತ್ತಿವೆ. ಸೋಂಕು ಹರಡುವ ವೇಗಕ್ಕೆ ಕೊಂಚ ಹಿನ್ನಡೆಯಾಗಿದ್ದು, ಜನರ ಜೀವ ಉಳಿಯುತ್ತಿದೆ ಎಂದಿದೆ.

24.8 ಕೋಟಿ ಜನರು ಪಾರು
ಅಮೆರಿಕ ಸರಕಾರ ಸೋಂಕು ನಿಯಂತ್ರಣ ಕ್ಕಾಗಿ ಜನರನ್ನು ಮನೆಯಲ್ಲಿಯೇ ಇರುವಂತೆ ಆದೇಶ ನೀಡಿತ್ತು. ಈ ವೇಳೆ ಅಲ್ಲಿನ ವೈದ್ಯಕೀಯ ಇಲಾಖೆ ಈ ನಿಯಮವನ್ನು ಜನರು ಉಲ್ಲಂಘಿಸುತ್ತಾರೆ. ಅವರನ್ನು ನಿಯಂತ್ರಿಸುವುದು ಕಷ್ಟ ಎಂದೂ ಅಭಿಫ್ರಾಯಿಸಿತ್ತು. ಆದರೆ ಈ ಅಭಿಪ್ರಾಯವನ್ನು ತಳ್ಳಿ ಹಾಕುವಂತಹ ಬೆಳವಣಿಗೆಗೆ ಅಮೆರಿಕ ಸಾಕ್ಷಿಯಾಗಿದ್ದು, 29 ರಾಜ್ಯಗಳ 24.8 ಕೋಟಿ ಜನರು ಮನೆಯಲ್ಲೇ ಇದ್ದಾರೆ. ಇದರಿಂದ ರಾಜ್ಯಗಳಲ್ಲಿ ದಾಖಲಾಗುತ್ತಿರುವ ಸೋಂಕು ಪೀಡಿತರ ಸಂಖ್ಯೆಯಲ್ಲಿ ಅಲ್ಪ ಮಟ್ಟಿಗೆ ಕಡಿಮೆಯಾಗಿದೆ ಎನ್ನುತ್ತಾರೆ ತಜ್ಞರು.

ಕಿನ್ಸಾ ಹೆಲ್ತ್ ಆಸ್ಪತ್ರೆ ಸಿದ್ಧಪಡಿಸಿದ ಇಂಟರ್‌ನೆಟ್‌ ಸಂಪರ್ಕಿತ ಥರ್ಮಾಮೀಟರ್‌ಗಳು ಯಾವ ಪ್ರದೇಶದಲ್ಲಿ ಎಷ್ಟು ಸೋಂಕಿತರಿದ್ದಾರೆ, ಶಂಕಿತರಿದ್ದಾರೆ ಎಂಬ ಮಾಹಿತಿ ಕಲೆ ಹಾಕಲಿದೆ. ಸೋಂಕು ನಿಯಂತ್ರಣಕ್ಕೆ ಇದರಿಂದ ಅನುಕೂಲವಾಗಲಿದೆ. ಇಲ್ಲಿ ಲಭ್ಯವಾಗುತ್ತಿರುವ ಅಂಕಿ-ಅಂಶವನ್ನು ಮತ್ತು ಸಾರ್ವಜನಿಕರ ದೇಹದ ತಾಪಮಾನ ಮಟ್ಟವನ್ನು ಕೇಂದ್ರೀಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸುತ್ತಿದ್ದು, ಈ ಮಾಹಿತಿಯಿಂದ ಸೋಂಕಿತರನ್ನು ಮತ್ತು ಶಂಕಿತರನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿದೆ ಎಂದು ಸಂಸ್ಥೆ ತಿಳಿಸಿದೆ.

ಭಾರತಕ್ಕೆ ಆಭಾರಿ ಎಂದ ಅಮೆರಿಕ
ನಾವು ತೋರಿದ ನಿರ್ಲಕ್ಷéದ ಪರಿಣಾಮ ಇಂದು ಅಮೆರಿಕದಲ್ಲಿ ಶ್ಮಶಾನ ಸದೃಶ ಸ್ಥಿತಿ ನಿರ್ಮಾಣವಾಗಿದೆ. ಗುರುವಾರ ಆರು ವಾರದ ನವಜಾತ ಶಿಶುಗಳ‌ನ್ನು ಕಳೆದುಕೊಂಡಿದ್ದೇವೆ. ಆದರೆ ಈ ವಿಷಯದಲ್ಲಿ ಭಾರತ ಸರಕಾರ ಬೇಗ ಎಚ್ಚೆತ್ತುಕೊಂಡಿದ್ದು, ಲಾಕ್‌ಡೌನ್‌ ಆದೇಶ ಹೊರಡಿಸಿದ್ದು ಉತ್ತಮ ನಿರ್ಧಾರ ಎಂದು ಅಮೆರಿಕದ ರಾಜತಾಂತ್ರಿಕ ಅಧಿಕಾರಿಯೊಬ್ಬರು ಹೇಳಿದ್ದಾರೆ. ನಮ್ಮ ಪ್ರಜೆಗಳನ್ನು ಕರೆಸಿಕೊಳ್ಳುವಲ್ಲಿ ಭಾರತ ಸರಕಾರ ನೀಡುತ್ತಿರುವ ಸಹಕಾರಕ್ಕೆ ನಾವು ಆಭಾರಿಗಳಾಗಿದ್ದೇವೆ ಎಂದು ರಾಯಭಾರ ವ್ಯವಹಾರಗಳ ಪ್ರಿನ್ಸಿಪಲ್‌ ಡೆಪ್ಯುಟಿ ಅಸಿಸ್ಟೆಂಟ್‌ ಸೆಕ್ರೆಟರಿ ಇಯಾನ್‌ ಬ್ರೌನ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.