ಚೀನದಲ್ಲಿ ಸೇನಾ ದಂಗೆ? ಅಧ್ಯಕ್ಷ ಕ್ಸಿ ಗೃಹಬಂಧನ? ಬೀಜಿಂಗ್‌ ಸಂಪರ್ಕ ಕಡಿತ:

ಚೀನದಲ್ಲಿ ನಿಗೂಢ ಬೆಳವಣಿಗೆ; ವದಂತಿಗಳದ್ದೇ ಕಾರುಬಾರು!

Team Udayavani, Sep 25, 2022, 7:15 AM IST

ಚೀನದಲ್ಲಿ ಸೇನಾ ದಂಗೆ? ಅಧ್ಯಕ್ಷ ಕ್ಸಿ ಗೃಹಬಂಧನ? ಬೀಜಿಂಗ್‌ ಸಂಪರ್ಕ ಕಡಿತ:

ಬೀಜಿಂಗ್‌/ನವದೆಹಲಿ: ಜಗತ್ತಿನಲ್ಲೇ ಅತ್ಯಂತ ಪ್ರಬಲ ನಾಯಕನಾಗಬೇಕು ಎಂದು ಹೊರಟಿದ್ದ ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ವಿರುದ್ಧ ಕಮ್ಯೂನಿಸ್ಟ್‌ ಕ್ರಾಂತಿ ಆಗಿದೆಯೇ? ಇಂಥದ್ದೊಂದು ವದಂತಿಗಳು ಶನಿವಾರ ಹರಿದಾಡುತ್ತಿದ್ದು.

ಟ್ವಿಟರ್‌ನಲ್ಲೂ ವಿಶ್ವವ್ಯಾಪಿ ಟ್ರೆಂಡ್‌ ಆಗಿದ್ದು, ಚೀನ ಮೂಲದ ಮಾನವ ಹಕ್ಕುಗಳ ಹೋರಾಟರಾರ್ತಿಯೊಬ್ಬರು ಬೀಜಿಂಗ್‌ಗೆ ಸೇನಾ ವಾಹನಗಳು ತೆರಳುತ್ತಿರುವ ವಿಡಿಯೋವೊಂದನ್ನು ಟ್ವಿಟರ್‌ನಲ್ಲಿ ಹಾಕಿ ಇದೇ ಸಂಶಯ ವ್ಯಕ್ತಪಡಿಸಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಆಗುತ್ತಿರುವ ಚರ್ಚೆ ಪ್ರಕಾರ, ಈಗಾಗಲೇ ಸೇನೆಯು ಬೀಜಿಂಗ್‌ ಅನ್ನು ತನ್ನ ವಶಕ್ಕೆ ತೆಗೆದುಕೊಂಡಿದ್ದು, ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರನ್ನು ಗೃಹ ಬಂಧನದಲ್ಲಿ ಇರಿಸಿದೆಯಂತೆ. ಜನರಲ್‌ ಲಿ ಕ್ವಿಯಾಮಿಂಗ್‌ ಅವರನ್ನು ಕ್ಸಿ ಜಿನ್‌ಪಿಂಗ್‌ ಅವರ ಉತ್ತರಾಧಿಕಾರಿ ಮಾಡಲಾಗಿದೆಯಂತೆ. ಈ ಬಗ್ಗೆ ಸ್ವತಃ ಚೀನೀಯರೇ ಟ್ವಿಟರ್‌ನಲ್ಲಿ ನಾನಾ ರೀತಿಯ ಮಾಹಿತಿ ನೀಡುತ್ತಿದ್ದಾರೆ.

ವಿಚಿತ್ರವೆಂದರೆ, ಈ ಯಾವುದೇ ಸಂಗತಿಗಳ ಬಗ್ಗೆ ಚೀನಾ ಸರ್ಕಾರ ಇದುವರೆಗೆ ಯಾವುದೇ ದೃಢೀಕರಣ ನೀಡಿಲ್ಲ. ಅಷ್ಟೇ ಅಲ್ಲ, ಚೀನದ ಯಾವುದೇ ಮಾಧ್ಯಮಗಳೂ ಏನನ್ನೂ ಹೇಳುತ್ತಿಲ್ಲ. ಹೀಗಾಗಿ, ಎಲ್ಲವೂ ನಿಗೂಢವಾಗಿಯೇ ಉಳಿದಿದೆ.

ಈಗಾಗಲೇ ಜಿನ್‌ಪಿಂಗ್‌ ಅವರನ್ನು ಗೃಹಬಂಧನದಲ್ಲಿ ಇರಿಸಿ, ಸೇನಾ ಮುಖ್ಯಸ್ಥರ ಸ್ಥಾನದಿಂದಲೂ ಕಿತ್ತುಹಾಕಲಾಗಿದೆಯಂತೆ. ಮೂಲಗಳು ಹೇಳಿರುವಂತೆ, ಉಜ್ಬೇಕಿಸ್ತಾನದ ಸಮರಖಂಡದಿಂದ ಕ್ಸಿ ಜಿನ್‌ಪಿಂಗ್‌ ವಾಪಸ್‌ ಬಂದ ಕೂಡಲೇ, ವಿಮಾನ ನಿಲ್ದಾಣದಲ್ಲೇ ಅವರನ್ನು ಬಂಧಿಸಿ ಕರೆದೊಯ್ಯಲಾಗಿದೆ. ಚೀನಾದಲ್ಲಿ ಆಡಳಿತದಲ್ಲಿರುವ ಕಮ್ಯೂನಿಸ್ಟ್‌ ಪಕ್ಷದ ಹಿರಿಯ ನಾಯಕರೇ ಈ ದಂಗೆಗೆ ಕಾರಣ ಎಂದು ಹೇಳಲಾಗುತ್ತಿದೆ.

ವಿಮಾನಗಳ ಸಂಚಾರ ರದ್ದು
ಕ್ಸಿ ವಿರುದ್ಧದ ದಂಗೆಗೆ ಪೂರಕವೆಂಬಂತೆ, ಬೀಜಿಂಗ್‌ನಿಂದ ದೇಶದೊಳಗೆ ಮತ್ತು ವಿದೇಶಿ ವಿಮಾನ ಪ್ರಯಾಣವನ್ನು ಸ್ಥಗಿತಗೊಳಿಸಲಾಗಿದೆ. ಈ ವಿಚಾರ ವಿಮಾನಯಾನ ಟ್ರಾಫಿಕ್‌ಗೆ ಸಂಬಂಧಿಸಿದ ವೆಬ್‌ಸೈಟ್‌ಗಳಲ್ಲಿ ದೃಢಪಟ್ಟಿದೆ. ಆದರೆ ಯಾವ ಕಾರಣಕ್ಕಾಗಿ ವಿಮಾನ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂಬುದನ್ನು ಯಾರೂ ಹೇಳಿಲ್ಲ. ದಂಗೆಯ ಕಾರಣದಿಂದಲೇ ಬೀಜಿಂಗ್‌ ನಗರವನ್ನು ಸ್ತಬ್ಧಗೊಳಿಸಿ, ವಿಮಾನ ಸಂಚಾರ ಸ್ಥಗಿತ ಮಾಡಲಾಗಿದೆ ಎಂಬ ಕುರಿತಂತೆಯೂ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿದೆ. ಬೀಜಿಂಗ್‌ ಅನ್ನು ಸೇನೆ ತನ್ನ ವಶಕ್ಕೆ ತೆಗೆದುಕೊಂಡಿದೆ ಎನ್ನಲಾಗಿದೆ.

ಸುಬ್ರಮಣಿಯನ್‌ ಸ್ವಾಮಿ ಟ್ವೀಟ್‌
ಅತ್ತ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಕೂಡ ಚೀನ ಬೆಳವಣಿಗೆ ಬಗ್ಗೆ ಟ್ವೀಟ್‌ ಮಾಡಿದ್ದಾರೆ. ವದಂತಿಗಳ ಪ್ರಕಾರ, ಕ್ಸಿ ಜಿನ್‌ಪಿಂಗ್‌ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ. ಚೀನಾದ ಕಮ್ಯೂನಿಸ್ಟ್‌ ನಾಯಕರು, ಕ್ಸಿ ಜಿನ್‌ಪಿಂಗ್‌ ಅವರನ್ನು ಪಕ್ಷದ ಅಧ್ಯಕ್ಷ ಸ್ಥಾನದಿಂದ ತೆಗೆದು ಹಾಕಿದ್ದಾರೆ ಎಂದು ಟ್ವೀಟಿಸಿದ್ದಾರೆ.

ಏನಿರಬಹುದು ಕಾರಣ?
ಇತ್ತೀಚೆಗಷ್ಟೇ ಚೀನದ ಕಮ್ಯೂನಿಸ್ಟ್‌ ಪಕ್ಷವು ಭ್ರಷ್ಟಾಚಾರ ವಿರುದ್ಧ ದೊಡ್ಡ ಆಂದೋಲನವನ್ನೇ ಶುರು ಮಾಡಿದೆ. ಇದರಲ್ಲಿ ಕ್ಸಿ ಜಿನ್‌ಪಿಂಗ್‌ ವಿರುದ್ಧವಿದ್ದ ಪಕ್ಷದ ಕೆಲವು ನಾಯಕರ ವಿರುದ್ಧ ಭ್ರಷ್ಟಾಚಾರ ಆರೋಪದ ಮೇಲೆ ಅವರನ್ನು ಗಲ್ಲುಶಿಕ್ಷೆಗೆ ಗುರಿಪಡಿಸಲಾಗಿದೆ. ಇದರಿಂದ ಕೆರಳಿರುವ ಮಾಜಿ ಅಧ್ಯಕ್ಷರೊಬ್ಬರು ಇಡೀ ದಂಗೆಯ ಹಿಂದೆ ಇದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.