ವಲಸೆ ಕೃಷಿ ಕಾರ್ಮಿಕರತ್ತ ತಿರಸ್ಕಾರ ಭಾವ


Team Udayavani, May 12, 2020, 2:48 PM IST

ವಲಸೆ ಕೃಷಿ ಕಾರ್ಮಿಕರತ್ತ ತಿರಸ್ಕಾರ ಭಾವ

ಮಣಿಪಾಲ: ಕೋವಿಡ್‌-19 ಲಾಕ್‌ಡೌನ್‌ನಿಂದ ವಲಸೆ ಕಾರ್ಮಿಕರ ಬದುಕು ಅತಂತ್ರವಾಗಿದೆ. ಜೀವನೋಪಾಯಕ್ಕಾಗಿ ಸ್ವಂತ ನೆಲೆ ಬಿಟ್ಟು ನಂಬಿಹೋಗಿದ್ದ ಪ್ರದೇಶದಲ್ಲಿಯೂ ನೆಲೆ ಇಲ್ಲದಂತಾಗಿದ್ದು, ಒಂದೂತ್ತಿನ ಊಟಕ್ಕೂ ಪರದಾಡುವಂತಾಗಿದೆ. ಎಲ್ಲ ದೇಶಗಳಲ್ಲೂ ಬಡ ಕಾರ್ಮಿಕರದ್ದು ಇದೇ ಗೋಳು. ಅವರಿಗೆ ರಕ್ಷಣೆ ಮತ್ತು ನೆರವು ಒದಗಿಸಲು ಯುರೋಪ್‌ನ ಹಲವು ದೇಶಗಳು ಹಿಂದೇಟು ಹಾಕುತ್ತಿವೆ. ಸ್ಪೇನ್‌ ಪಶುಸಂಗೋಪನೆ ಕಾಯಕದಲ್ಲಿ ನಿರತರಾಗಿರುವ ಸಾವಿರಾರು ವಲಸೆ ಕೃಷಿ ಕಾರ್ಮಿಕರನ್ನು ಕಡೆಗಣಿಸುವ ಮೂಲಕ ಅವರನ್ನು ಮೂಲೆಗುಂಪು ಮಾಡಿದೆ.

ಫ್ರಾನ್ಸ್‌ನ ಗಡಿ ಭಾಗದಲ್ಲಿರುವ ಸ್ಪೈನ್‌ನ ಅರಾಗೋನ್‌ ನಗರದ ಪ್ರಮುಖ ಆದಾಯ ಮೂಲ ಪಶುಸಂಗೋಪನೆ. ಉರುಗ್ವೆ ಮತ್ತು ಪರಾಗ್ವೆಯ ಸಾವಿರಾರು ವಲಸೆ ಕೃಷಿ ಕಾರ್ಮಿಕರು ಇಲ್ಲಿನ ಪಶುಸಂಗೋಪನೆಯಲ್ಲಿ ದುಡಿಯುತ್ತಿದ್ದಾರೆ. ಕೋವಿಡ್ ಕಾಟದಿಂದಾಗಿ ಈಗ ಈ ಕಾರ್ಮಿಕರ ಬದುಕು ಅನಿಶ್ಚಿತತೆ‌ಯಲ್ಲಿದೆ.ಸರಕಾರವಾಗಲಿ, ಮಾಲಕರಾಗಲಿ ಅವರ ಕಷ್ಟಸುಖ ವಿಚಾರಿಸುತ್ತಿಲ್ಲ. ಒಂದು ರೀತಿಯ ನಿರಾಶ್ರಿತ ಜೀವನವನ್ನು ಅವರು ನಡೆಸುತ್ತಿದ್ದಾರೆ. ಸದ್ಯ ಎದುರಾಗಿರುವ ಬಿಕ್ಕಟ್ಟಿನಿಂದ ಯುರೋಪಿನ ಇತರ ಭಾಗಗಳಲ್ಲೂ ವಲಸೆ ಕೃಷಿ ಕಾರ್ಮಿಕರನ್ನು ಒಂದು ಸಮಸ್ಯೆ ಎಂದು ಪರಿಗಣಿಸಲಾಗುತ್ತಿದ್ದು, ಅವರನ್ನು ತಿರಸ್ಕಾರ ಭಾವದಿಂದ ಕಾಣಲಾಗುತ್ತಿದೆ. ಆದರೂ ಹೊಟ್ಟೆ ಪಾಡಿಗಾಗಿ ಲಾಕ್‌ಡೌನ್‌ ನಿಯಮ ಇದ್ದರೂ ಕೃಷಿ ಕಾರ್ಮಿಕರು ಕೆಲಸ ಅರಸಿ ಒಂದೆಡೆಯಿಂದ ಮತ್ತೂಂದೆಡೆಗೆ ತೆರಳುತ್ತಿದ್ದು, ಐರೋಪ್ಯ ಒಕ್ಕೂಟದ ರಾಷ್ಟ್ರಗಳು ಇತರ ದೇಶಗಳಿಂದ ಕಾರ್ಮಿಕರನ್ನು ಕರೆಸಿಕೊಳ್ಳುತ್ತಿವೆ. ಸ್ಪೈನ್‌ನಲ್ಲಿ ಶೀಘ್ರವಾಗಿ ಉಣ್ಣೆಯನ್ನು ಬಿಡಿಸುವ ಕೆಲಸ ಪ್ರಾರಂಭವಾಗಬೇಕು. ಇಲ್ಲವಾದರೆ ಉತ್ಪತ್ತಿ ಸಂಪೂರ್ಣ ನಾಶವಾಗುವ ಸಾಧ್ಯತೆ ಇದೆ. ಈ ಅನಿವಾರ್ಯತೆಗಾಗಿ ಒಂದಷ್ಟು ಕಾರ್ಮಿಕರನ್ನು ಉಳಿಸಿಕೊಳ್ಳಲಾಗಿದೆ.

ಸ್ಟ್ರಾಬೆರಿ, ಕಿತ್ತಳೆ, ಕಲ್ಲಂಗಡಿ, ಟೊಮೆಟೊ ಇತರ ತರಕಾರಿ ಬೆಳೆಗಳ ಕಟಾವಿಗೂ ಇದೇ ಕೃಷಿ ಕಾರ್ಮಿಕರ ಅಗತ್ಯವಿದೆ.
ಅಯರ್‌ಲ್ಯಾಂಡ್‌ನಿಂದ ಇಟಲಿಗೆ ಮತ್ತು ಜರ್ಮನಿಯಿಂದ ರೊಮೇನಿಯಾಗೆ ಅವರು ಗಡಿ ದಾಟಿ ಬರುತ್ತಿದ್ದಾರೆ.

ಆದರೆ ಈ ವೇಳೆ ಯಾವುದೇ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳದೇ ಕಾರ್ಮಿಕರನ್ನು ಬರ ಮಾಡಿಕೊಳ್ಳುತ್ತಿರುವುದರಿಂದ
ಅವರಿಗೆ ಸೋಂಕು ತಗುಲುವ ಭಯ ಕಾಡುತ್ತಿದೆ.

ಭದ್ರತೆಯಿಲ್ಲ
ಜರ್ಮನಿ ಪೂರ್ವ ಯುರೋಪ್‌ ಭಾಗದಿಂದ ಇತ್ತೀಚೆಗೆ 30 ಸಾವಿರ ಕಾರ್ಮಿಕರನ್ನು ಕರೆಸಿಕೊಂಡಿದ್ದು, ಮೇ ಅಂತ್ಯದ ವೇಳೆಗೆ ಇನ್ನೂ 30,000 ಕಾರ್ಮಿಕರನ್ನು ಬರ ಮಾಡಿಕೊಳ್ಳುವ ಯೋಚನೆಯಲ್ಲಿದೆ. ಆದರೆ ಈಗ ಕೃಷಿ ಕಾರ್ಯಕ್ಕೆ ಕರೆಸಿಕೊಳ್ಳಲಾಗುತ್ತಿರುವ ಕಾರ್ಮಿಕರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾಗಿದೆ. ಲಾಕ್‌ಡೌನ್‌ ನಿಯಮಗಳನ್ನು ಗಾಳಿಗೆ ತೂರಿ ಸಾಮಾಜಿಕ ಅಂತರ ನಿಯಮ ಸೇರಿದಂತೆ ಇತರೆ ಸುರಕ್ಷಾ ಕ್ರಮಗಳನ್ನು ಪಾಲಿಸದೇ ಕಾರ್ಮಿಕರ ಪ್ರಾಣವನ್ನು ಅಪಾಯಕ್ಕೊಡ್ಡಿದೆ.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.