ಅತಿಯಾದ ಲೈಂಗಿಕ ಗೀಳು: ಸ್ತ್ರೀ ಹಾರ್ಮೋನ್ ಚುಚ್ಚಿಸಿಕೊಂಡ ಸ್ಪೇನ್‌ನ ಮಾಜಿ ರಾಜ !


Team Udayavani, Oct 24, 2021, 5:03 PM IST

1-2-aa’

ದುಬೈ : ಸ್ಪೇನ್‌ನ ಮಾಜಿ ರಾಜ ಜುವಾನ್ ಕಾರ್ಲೋಸ್‌ ಅತೀವವಾದ ಲೈಂಗಿಕ ಗೀಳನ್ನು ಕಡಿಮೆ ಮಾಡಿಕೊಳ್ಳಲು ಸ್ತ್ರೀ ಹಾರ್ಮೋನುಗಳನ್ನು ಚುಚ್ಚಿಸಿಕೊಂಡಿದ್ದಾರೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ.

”ಸ್ಪೇನ್‌ನ ರಹಸ್ಯ ಸೇವೆಯಿಂದ ಜುವಾನ್ ಕಾರ್ಲೋಸ್‌ ತನ್ನ ಅತಿರೇಕದ ಲೈಂಗಿಕ ಗೀಳನ್ನು ನಿಯಂತ್ರಿಸಲು ಸ್ತ್ರೀ ಹಾರ್ಮೋನುಗಳ ಚುಚ್ಚುಮದ್ದನ್ನು ಹಾಕಿಸಿಕೊಂಡಿದ್ದಾರೆ ” ಎಂದು ಮಾಜಿ ಪೊಲೀಸ್ ಮುಖ್ಯಸ್ಥರೊಬ್ಬರು ಸಂವೇದನಾಶೀಲವಾಗಿ ಹೇಳಿಕೊಂಡಿದ್ದಾರೆ.

ಬ್ಲ್ಯಾಕ್ ಮೇಲ್ ಆರೋಪದ ಮೇಲೆ ಪ್ರಸ್ತುತ ವಿಚಾರಣೆಯಲ್ಲಿರುವ ಮಾಜಿ ಪೊಲೀಸ್ ಆಯುಕ್ತರಾಗಿರುವ ಜೋಸ್ ಮ್ಯಾನುಯೆಲ್ ವಿಲ್ಲಾರೆಜೊ, ಬುಧವಾರ ನಡೆದ ಸಂಸತ್ತಿನ ವಿಚಾರಣೆಯಲ್ಲಿ ”83 ವರ್ಷದ ಗಡಿಪಾರಾಗಿರುವ ರಾಜ, ಕಾಮಾಸಕ್ತಿ ಕಡಿಮೆ ಮಾಡಲು ಸ್ತ್ರೀ ಹಾರ್ಮೋನುಗಳು ಮತ್ತು ಟೆಸ್ಟೋಸ್ಟೆರಾನ್ ಪ್ರತಿರೋಧಕಗಳನ್ನು ಚುಚ್ಚಿಸಿಕೊಂಡಿದ್ದರು” ಎಂದು ಹೇಳಿದ್ದಾರೆ.

ಕಾರ್ಲೋಸ್‌ ರ ವಿಪರೀತ ಚಟದ ಕಾರಣಗಳನ್ನು ನೀಡುತ್ತಾ, ಲೈಂಗಿಕ ಗೀಳು “ದೇಶಕ್ಕೆ ಸಮಸ್ಯೆ” ಎಂದು ಪರಿಗಣಿಸಲಾಗಿತ್ತು, ಏಕೆಂದರೆ ಅವರು “ಉತ್ಕಟ ಭಾವೋದ್ರಿಕ್ತ ವ್ಯಕ್ತಿ” ಎಂದು ವಿಲ್ಲಾರೆಜೊ ಅವರು ಹೇಳಿರುವುದಾಗಿ ಸ್ಪ್ಯಾನಿಷ್ ಮಾಧ್ಯಮವೊಂದು ವರದಿ ಮಾಡಿದೆ.

ವಿಚಾರಣೆಯ ಸಮಯದಲ್ಲಿ, ”ಜುವಾನ್ ಕಾರ್ಲೋಸ್ ಹಾನಿಕರವಲ್ಲದ ಗಡ್ಡೆಗೆ ಚಿಕಿತ್ಸೆ ಪಡೆಯುತ್ತಿದ್ದಾಗ ಮಾಡಿದ ಸ್ಕ್ಯಾನ್‌ಗಳಿಗೆ ಸಂಬಂಧಿಸಿದ ವೈದ್ಯಕೀಯ ವರದಿಗಳನ್ನು ಮರುಪಡೆಯಲು ತನಗೆ ಹೇಳಲಾಗಿತ್ತು” ಎಂದು ಮಾಜಿ ಪೊಲೀಸ್ ಮುಖ್ಯಸ್ಥರು ಹೇಳಿದ್ದಾರೆ.

ಸ್ಪ್ಯಾನಿಷ್ ಲೇಖಕ ಮತ್ತು ಮಿಲಿಟರಿ ಇತಿಹಾಸಕಾರ ಅಮಾಡಿಯೋ ಮಾರ್ಟಿನೆಜ್ ಇಂಗಲ್ಸ್ ಅವರು ‘ಜುವಾನ್ ಕಾರ್ಲೋಸ್: ದಿ ಕಿಂಗ್ ಆಫ್ 5,000 ಲವರ್ಸ್’ ಎಂಬ ಪುಸ್ತಕವನ್ನು ಬರೆದಿದ್ದರು,ಲೈಂಗಿಕ ಇತಿಹಾಸದ ಪುರಾವೆಗಳನ್ನು ವಿವರಿಸಿ ರಾಜನನ್ನು “ಪ್ರಚಲಿತ ಲೈಂಗಿಕ ವ್ಯಸನಿ” ಎಂದು ಕರೆದಿದ್ದರು.

ಕಾರ್ಲೋಸ್ ಅವರು ಪತ್ನಿ ರಾಣಿ ಸೋಫಿಯಾ ಮಾತ್ರವಲ್ಲದೆ, ಡ್ಯಾನಿಶ್-ಜರ್ಮನ್ ನ ಉದಾರ ದಾನಿಯಾಗಿದ್ದ ಕೊರಿನ್ನಾ ಲಾರ್ಸೆನ್, ಸ್ಪ್ಯಾನಿಷ್ ಗಾಯಕಿ ಸಾರಾ ಮೊಂಟಿಯೆಲ್, ಬೆಲ್ಜಿಯನ್ ಗವರ್ನೆಸ್ ಲಿಲಿಯನ್ ಸರ್ಟಿಯು ಮತ್ತು ಇಟಾಲಿಯನ್ ರಾಜಕುಮಾರಿ ಮಾರಿಯಾ ಗೇಬ್ರಿಯೆಲಾ ಡಿ ಸಬೋಯಾ ಸೇರಿದಂತೆ 5,000 ಕ್ಕೂ ಹೆಚ್ಚು ಮಹಿಳೆಯರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದರು ಎಂದು ಊಹಿಸಲಾಗಿದೆ.

ವಿಲ್ಲಾರೆಜೊ ಅವರ ವಿಚಾರಣೆ ವೇಳೆ ಅವರು ಗಣ್ಯರೊಂದಿಗೆ ರಹಸ್ಯವಾಗಿ ರೆಕಾರ್ಡ್ ಮಾಡಿದ ಸಂಭಾಷಣೆಗಳನ್ನು ಬ್ಲ್ಯಾಕ್ ಮೇಲ್ ಮಾಡುವ ಉದ್ದೇಶದಿಂದ ಅಥವಾ ಇತರ ಪ್ರಬಲ ಕ್ಲೈಂಟ್‌ಗಳ ಪರವಾಗಿ ಕಾರ್ಲೋಸ್‌ ರ ಖ್ಯಾತಿಯನ್ನು ಹಾಳುಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

‘ಜುವಾನ್ ಕಾರ್ಲೋಸ್‌ ರ ಕುಖ್ಯಾತ ಲೈಂಗಿಕ ಗೀಳನ್ನು ನಿಯಂತ್ರಣಕ್ಕೆ ತರುವ ಪ್ರಯತ್ನದಲ್ಲಿ ನಾನು ಭಾಗಿಯಾಗಿಲ್ಲ ಎಂದು ಹೇಳಿದರು ಮತ್ತು ಈಗ ಲಂಡನ್‌ನಲ್ಲಿ ವಾಸಿಸುತ್ತಿರುವ ಮಾಜಿ ರಾಜನ ಮಾಜಿ ಪ್ರೇಮಿ ಕೊರಿನ್ನಾ ಲಾರ್ಸೆನ್‌ನಿಂದ ಅದರ ಬಗ್ಗೆ ತಿಳಿದುಕೊಂದಿರುವುದಾಗಿ ಹೇಳಿದರು.

ಮಾಜಿ ರಾಜ ಕಾರ್ಲೋಸ್‌ 1975 ರಿಂದ 2014 ರವರೆಗೆ ಆಳ್ವಿಕೆ ನಡೆಸಿದ್ದರು. ತನ್ನ ಮಗನಿಗಾಗಿ ತನ್ನ ಸಿಂಹಾಸನವನ್ನು ತ್ಯಜಿಸಿದ ನಂತರ ಬಹು-ಮಿಲಿಯನ್ ಡಾಲರ್ ಭ್ರಷ್ಟಾಚಾರ ಹಗರಣದ ಆರೋಪ ಕೇಳಿ ಬಂದ ಬಳಿಕ ಕಳೆದ ವರ್ಷ ಅಬುಧಾಬಿಗೆ ಸ್ಪೇನ್ ನಿಂದ ಪಲಾಯನ ಮಾಡಿದ್ದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Iran ವಿರುದ್ಧ ಪ್ರತೀಕಾರ ಬೇಡ: ಇಸ್ರೇಲ್‌ ಮೇಲೆ ಹಲವು ರಾಷ್ಟ್ರಗಳ ಒತ್ತಡ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

Flash Floods: ಅಫ್ಘಾನಿಸ್ತಾನದಲ್ಲಿ ಭೀಕರ ಪ್ರವಾಹ: 33 ಮಂದಿ ಮೃತ್ಯು, 600 ಮನೆಗಳಿಗೆ ಹಾನಿ

1eewqew

Sydney attack: ತನ್ನ ಪ್ರಾಣವೇ ಹೋಗುತ್ತಿದ್ದರೂ ಪುತ್ರಿ ರಕ್ಷಣೆಗೆ ಮಹಿಳೆ ಕೋರಿಕೆ!

1qeqweqwe

Canada; ಅಮೆರಿಕ ಮಾದರಿಯಲ್ಲಿ ಭಾರತೀಯ ವಿದ್ಯಾರ್ಥಿಯ ಹತ್ಯೆ

police USA

US ಷಿಕಾಗೋದಲ್ಲಿ ಶೂಟೌಟ್‌: 7 ವರ್ಷದ ಬಾಲಕಿ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.