ಉಷ್ಣಹವೆ ಅವಘಡಕ್ಕೆ ಸ್ಪೇನ್‌ನಲ್ಲಿ 500ಕ್ಕೂ ಹೆಚ್ಚು ಬಲಿ

ಹಲವಾರು ಕಡೆ 45 ಡಿಗ್ರಿ ಸೆಲ್ಸಿಯಸ್‌ನಷ್ಟು ಉಷ್ಣಾಂಶ; ಇಡೀ ಯೂರೋಪ್‌ನಲ್ಲಿ ಕಾಡ್ಗಿಚ್ಚು, ಹಲವು ಮನೆಗಳು ಅಗ್ನಿಗಾಹುತಿ

Team Udayavani, Jul 20, 2022, 7:00 AM IST

ಉಷ್ಣಹವೆ ಅವಘಡಕ್ಕೆ ಸ್ಪೇನ್‌ನಲ್ಲಿ 500ಕ್ಕೂ ಹೆಚ್ಚು ಬಲಿ

ಮ್ಯಾಡ್ರಿಡ್‌/ಲಂಡನ್‌: ಸ್ಪೇನ್‌ನಲ್ಲಿ ಕಳೆದ 10 ದಿನಗಳಿಂದ ಆವರಿಸಿದ್ದ ಉಷ್ಣ ಹವೆಯಿಂದಾಗಿ ದೇಶದಲ್ಲಿ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ ಎಂದು ಅಲ್ಲಿನ ಪ್ರಧಾನಿ ಪೆಡ್ರೊ ಸ್ಯಾಂಚೆಜ್‌ ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತಾಡಿದ ಅವರು, “ಆರೋಗ್ಯ ಇಲಾಖೆ ದಾಖಲೆಗಳ ಪ್ರಕಾರ, ಕಳೆದ 10 ದಿನದಲ್ಲಿ ಉಷ್ಣ ಹವೆಗೆ ಸಂಬಂಧಿಸಿದ ದುರ್ಘ‌ಟನೆಗಳಲ್ಲಿ 500ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಹಾಗಾಗಿ, ನಾಗರಿಕರು ತಮ್ಮ ಸುರಕ್ಷತೆ ಬಗ್ಗೆ ಹೆಚ್ಚು ಜಾಗರೂಕತೆಯಿಂದ ಇರಬೇಕು” ಎಂದಿದ್ದಾರೆ.
ತಜ್ಞರ ಪ್ರಕಾರ, ಸ್ಪೇನ್‌ನ ಕೆಲವು ಭಾಗಗಳಲ್ಲಿ ತಾಪಮಾನ 45 ಡಿ.ಸೆ.ನಷ್ಟು ಹೆಚ್ಚಾಗಿದ್ದು ಕಾಡ್ಗಿಚ್ಚು, ಅಗ್ನಿ ಅವಘಡದಂಥ ದುರ್ಘ‌ಟನೆಗಳು ಸಂಭವಿಸಿವೆ.

ಗ್ರೀಕ್‌ನಲ್ಲಿ ಕಾಡ್ಗಿಚ್ಚು
ಸ್ಪೇನ್‌ ಮಾತ್ರವಲ್ಲದೆ, ಇಡೀ ಯೂರೋಪ್‌ನಲ್ಲಿ ಉಷ್ಣ ಹವೆ ಮುಂದುವರಿದಿದೆ. ಗ್ರೀಕ್‌ನ ರಾಜಧಾನಿ ಅಥೆನ್ಸ್‌ನ ಹೊರವಲಯದಲ್ಲಿ ಉಷ್ಣ ಹವೆಯಿಂದ ಸೃಷ್ಟಿಯಾದ ಕಾಡ್ಗಿಚ್ಚು ಆ ಭಾಗದ ಮನೆಗಳನ್ನು ಆಹುತಿ ಪಡೆದಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ಆರಿಸಲು ಹರಸಾಹಸ ಮಾಡುತ್ತಿದ್ದಾರೆ. ಆ ಪ್ರಾಂತ್ಯದಲ್ಲಿದ್ದ ಹಲವಾರು ಜನರನ್ನು ತೆರವುಗೊಳಿಸಲಾಗಿದೆ.

ಲಂಡನ್‌ನಲ್ಲಿ 41 ಮನೆ ಭಸ್ಮ
ಲಂಡನ್‌ನ ಕಾನ್ಸಿಂಗ್ಸ್‌ ಬೈನಲ್ಲಿ ಬುಧವಾರ ದಾಖಲಾದ 40.3 ಡಿ.ಸೆ. ಉಷ್ಣಾಂಶದಿಂದ 41 ಮನೆಗಳು ಸುಟ್ಟು ಭಸ್ಮವಾಗಿವೆ. ಪೂರ್ವ ಲಂಡನ್‌ನಲ್ಲಿ ಒಣ ಹುಲ್ಲುಗಾವಲಿಗೆ ತಗುಲಿದ ಬೆಂಕಿಯಿಂದಾಗಿ ವೆನ್ನಿಗ್ಟನ್‌ ಎಂಬ ಹಳ್ಳಿಯ ಎಲ್ಲಾ ಮನೆಗಳು ನಿರ್ನಾಮವಾಗಿವೆ. ಗಾಸಿಲಿಯಾ ಪ್ರಾಂತ್ಯದಲ್ಲಿ 85 ಮನೆಗಳು ಸುಟ್ಟುಹೋಗಿ, 1,400 ಜನರನ್ನು ಸ್ಥಳಾಂತರಿಸಲಾಗಿದೆ.

ಫ್ರಾನ್ಸ್‌ನಲ್ಲಿ ಅರಣ್ಯ ಭಾಗಶಃ ನಾಶ
ಫ್ರಾನ್ಸ್‌ನ ನೈರುತ್ಯ ಭಾಗದಲ್ಲಿರುವ ಗಿರೊಂಡೆ ಅರಣ್ಯ ಪ್ರದೇಶದಲ್ಲಿ ಉಷ್ಣಹವೆಯಿಂದ ಕಾಣಿಸಿಕೊಂಡಿರುವ ಕಾಡ್ಗಿಚ್ಚನ್ನು ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಬೆಂಕಿಯ ದೈತ್ಯ ಕೆನ್ನಾಲಿಗೆಗಳು ದಶದಿಕ್ಕುಗಳಿಗೂ ಹರಡುತ್ತಾ ಇಡೀ ಅರಣ್ಯವನ್ನು ಆಪೋಶನ ತೆಗೆದುಕೊಳ್ಳಲಾರಂಭಿಸಿದೆ.

ಮುಗಿಲೆತ್ತರದವರೆಗೂ ಧೂಮ ಆವರಿಸಿದ್ದು, ಅದರ ನಡುವೆಯೇ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿದ್ದಾರೆ.

ಟಾಪ್ ನ್ಯೂಸ್

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

6-fusion

Yugadi: ಯುಗಾದಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.