ಪಾಕ್ ಕಿತಾಪತಿಗೆ ಭಾರತ ಕಿಡಿ
Team Udayavani, Oct 11, 2017, 7:40 AM IST
ವಿಶ್ವಸಂಸ್ಥೆ:ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನದ ಪ್ರತಿನಿಧಿಗಳು ಅನವಶ್ಯಕವಾಗಿ ಕಾಶ್ಮೀರ ವಿಚಾರ ಪ್ರಸ್ತಾಪ ಮಾಡುತ್ತಿದ್ದಾರೆ ಎಂದು ಭಾರತ ಆಕ್ಷೇಪ ವ್ಯಕ್ತಪಡಿಸಿದೆ. ಪಾಕ್ರಾಯಭಾರಿ ಮಲೀಹಾ ಲೋಧಿ ಅವರು, ವಿಶ್ವಸಂಸ್ಥೆಯು ಈ ಜಗತ್ತನ್ನು ವಸಾಹತು ಮುಕ್ತವಾಗಿಸುವ ಉದ್ದೇಶ ಹೊಂದಿದೆ. ಆದರೆ, ಕಾಶ್ಮೀರ ಸಮಸ್ಯೆ ಇತ್ಯರ್ಥವಾಗದ ಹೊರತು ವಿಶ್ವಸಂಸ್ಥೆಯ ಈ ಘನ ಉದ್ದೇಶ ಈಡೇರುವುದಿಲ್ಲ ಎಂದು ಹೇಳಿದ್ದಾರೆ.
ಲೋಧಿ ಅವರ ಈ ಭಾಷಣವನ್ನು ಖಂಡಿಸಿರುವ ಭಾರತ, ವಿಶ್ವದ ನಾನಾ ದೇಶಗಳು ಭಾಗವಹಿಸಿರುವ ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವು ಪದೇ ಪದೆ ಕಾಶ್ಮೀರ ವಿಚಾರ ಪ್ರಸ್ತಾಪಿಸುವ ಮೂಲಕ ಮಹಾ ಸಭೆಯ ಉದ್ದೇಶ ಹಳ್ಳ ಹಿಡಿಯುವಂತೆ ಮಾಡುತ್ತಿದೆ ಎಂದು ಕಿಡಿಕಾರಿದೆ.
ವಿಶ್ವಸಂಸ್ಥೆಯಲ್ಲಿರುವ ಭಾರತೀಯ ನಿಯೋಗದ ಸಚಿವರಾದ ಶ್ರೀನಿವಾಸ್ ಪ್ರಸಾದ್ ಮಾತನಾಡಿ, ವಿಶ್ವಸಂಸ್ಥೆಯಲ್ಲಿ ಪಾಕಿಸ್ತಾನವನ್ನು ಈವರೆಗೆ ಪ್ರತಿನಿಧಿಸಿರುವ ಯಾವುದೇ ನಿಯೋಗವು ಈ ಪ್ರಮಾಣದಲ್ಲಿ ಕಾಶ್ಮೀರ ವಿಚಾರವನ್ನು ಪ್ರಸ್ತಾಪ ಮಾಡಿರಲಿಲ್ಲ. ಹಾಲಿ ಸಮಿತಿಯ ಈ ನಡೆ ಸಮ್ಮೇಳನದ ಉದ್ದೇಶವನ್ನು ಮಣ್ಣುಪಾಲು ಮಾಡುತ್ತಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ