ಪಾಕ್ನಲ್ಲಿ ಶ್ರೀಕೃಷ್ಣ ದೇಗುಲ ನಿರ್ಮಾಣ ವಿರುದ್ಧ ಫತ್ವಾ
ನಿರ್ಮಾಣದ ವಿರುದ್ಧ ಕೋರ್ಟ್ನಲ್ಲಿ ದಾವೆ ; ಮಧ್ಯಾಂತರ ತಡೆಯಾಜ್ಞೆ ನೀಡಲು ಇಸ್ಲಾಮಾಬಾದ್ ಹೈಕೋರ್ಟ್ ನಕಾರ
Team Udayavani, Jul 3, 2020, 6:48 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಇಸ್ಲಾಮಾಬಾದ್: ಪಾಕಿಸ್ಥಾನದ ಇಸ್ಲಾಮಾಬಾದ್ನಲ್ಲಿ ನಿರ್ಮಾಣವಾಗುತ್ತಿರುವ ಶ್ರೀಕೃಷ್ಣ ದೇವಾಲಯದ ವಿರುದ್ಧ ಪ್ರಭಾವಿ ಧಾರ್ಮಿಕ ಸಂಸ್ಥೆಯೊಂದು ಫತ್ವಾ ಹೊರಡಿಸಿದೆ.
ಅಲ್ಲದೆ ನಿರ್ಮಾಣ ಕಾರ್ಯಕ್ಕೆ ತಡೆ ಘೋಷಿಸುವಂತೆ ನ್ಯಾಯಾಲಯದ ಮೊರೆ ಹೋಗಿದೆ.
2018ರಲ್ಲಿ ಇಮ್ರಾನ್ಖಾನ್ ಪಾಕ್ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ವೇಳೆ ದೇಶದ ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ್ಯ ರಕ್ಷಿಸುವುದಾಗಿ ಭರವಸೆ ನೀಡಿದ್ದರು.
ಅದರಂತೆ ಇಸ್ಲಾಮಾಬಾದ್ನಲ್ಲಿ ಸ್ಥಳೀಯ ಹಿಂದೂ ಸಮಿತಿಗೆ ಭೂಮಿಯನ್ನೂ ಹಸ್ತಾಂತರಿಸಿ, ಶ್ರೀಕೃಷ್ಣ ದೇಗುಲ ನಿರ್ಮಾಣಕ್ಕೆ ಅನುಮತಿ ನೀಡಲಾಗಿತ್ತು.
ಮೊದಲ ಹಂತದ ನಿರ್ಮಾಣಕ್ಕೆ 10 ಕೋಟಿ ರೂ.ಗಳನ್ನು ಸರಕಾರ ಘೋಷಿ ಸಿತ್ತು. ಸರಕಾರದಿಂದ ಹಣ ತಲುಪದಿದ್ದರೂ ಭಕ್ತರು ತಾವೇ ನಿಧಿ ಸಂಗ್ರಹಿಸಿ ನಿಗದಿತ ಜಾಗದಲ್ಲಿ ದೇಗುಲ ನಿರ್ಮಿ ಸುತ್ತಿದ್ದಾರೆ.
ಇಸ್ಲಾಮ್ ಹೊರತುಪಡಿಸಿ ಇತರ ಧರ್ಮಗಳ ಅನುಯಾಯಿಗಳಿಗೆ ಪೂಜಾ ಕೇಂದ್ರಗಳನ್ನು ನಿರ್ಮಿಸಲು ಅವ ಕಾಶ ಮಾಡಿಕೊಡಬಾರದು ಎಂದು ಜಾಮಿಯಾ ಅಶರ್ಫಿಯಾ ಸಂಸ್ಥೆ ಕೋರ್ಟ್ನಲ್ಲಿ ವಾದಿಸಿದೆ.
ಆದರೆ ದೇಗುಲ ನಿರ್ಮಾಣ ಕಾರ್ಯಕ್ಕೆ ಮಧ್ಯಾಂತರ ತಡೆ ನೀಡಲು ಇಸ್ಲಾಮಾಬಾದ್ ಹೈಕೋರ್ಟ್ ಗುರುವಾರ ನಿರಾಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ