ಭಾರತಕ್ಕೆ ಮತ್ತೆ ಧನ್ಯವಾದ ಅರ್ಪಿಸಿದ ಶ್ರೀಲಂಕಾ
ಭಾರತದ ಸಹಾಯಕ್ಕೆ ಲಂಕಾ ಪ್ರಧಾನಿ ವಿಕ್ರಮಸಿಂಘೆ ಕೃತಜ್ಞತೆ
Team Udayavani, May 29, 2022, 6:20 AM IST
ಕೊಲಂಬೋ: ತನ್ನ ಇತಿಹಾಸದಲ್ಲೇ ಅತ್ಯಂತ ಕಠಿನ ಆರ್ಥಿಕ ಬಿಕ್ಕಟ್ಟನ್ನು ಎದುರಿಸಿದ ಶ್ರೀಲಂಕಾಕ್ಕೆ ಭಾರತ ಸರಕಾರ ಹೆಗಲಿಗೆ ಹೆಗಲು ಕೊಟ್ಟಿದೆ. ಅದನ್ನು ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅಷ್ಟೇ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಕಳೆದ ವಾರವೂ ಅವರು ಭಾರತದ ನೆರವಿಗೆ ಧನ್ಯವಾದ ಅರ್ಪಿಸಿದ್ದರು.
ಇತ್ತೀಚೆಗೆ ಜಪಾನ್ನಲ್ಲಿ ನಡೆದಿದ್ದ ಕ್ವಾಡ್ ಶೃಂಗಸಭೆಯಲ್ಲಿ ಭಾಗಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸರ ಕಾರದ ಮನವೊಲಿಸಿ, ಭಾರತ- ಜಪಾನ್ ಜಂಟಿ ಸಹಭಾಗಿತ್ವದಲ್ಲಿ ಶ್ರೀಲಂಕಾಕ್ಕೆ ನೆರವು ನೀಡುವುದಾಗಿ ಘೋಷಿಸಿದ್ದರು.
ಈ ಹಿನ್ನೆಲೆಯಲ್ಲಿ, ಭಾರತಕ್ಕೆ ಲಂಕಾ ಪ್ರಧಾನಿ ಪುನಃ ಧನ್ಯವಾದ ಅರ್ಪಿಸಿದ್ದಾರೆ. “”ಭಾರತ ಮತ್ತು ಜಪಾನ್ನಿಂದ ಸಿಕ್ಕಿದ ನೆರವಿಗೆ ನಾವು ಆಭಾರಿಯಾಗಿದ್ದೇವೆ. ಕ್ವಾಡ್ ಸದಸ್ಯ ರಾಷ್ಟ್ರಗಳಿಗೆ ನಾವು ಮನವಿ ಮಾಡಿ ದಾಗ, ಭಾರತ-ಜಪಾನ್ ಮುಂದೆ ನಿಂತು ವಿದೇಶಗಳಿಂದ ಶ್ರೀಲಂಕಾಕ್ಕೆ ನೆರವು ಒದಗಿ ಸಲು ಸಹಾಯ ಮಾಡಿವೆ. ನಾನು ಖಾಸಗಿ ಯಾಗಿ ಭಾರತದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ರೊಂದಿಗೆ ಮಾತನಾಡಿ ಕೃತ ಜ್ಞತೆ ಸಲ್ಲಿಸಿದ್ದೇನೆ” ಎಂದು ರಾನಿಲ್ ಹೇಳಿದ್ದಾರೆ.
ಶುಕ್ರವಾರ ಕೂಡ 25 ಟನ್ನಷ್ಟು ವೈದ್ಯಕೀಯ ಸಾಮಗ್ರಿಯನ್ನು ಲಂಕಾಕ್ಕೆ ಹಸ್ತಾಂತರಿಸಿದೆ. ಇದರ ಒಟ್ಟು ಮೌಲ್ಯ 5.45 ಕೋಟಿ ರೂ.ಗಳು. ಕಳೆದ ವಾರ 9,000 ಮೆಟ್ರಿಕ್ ಟನ್ ಅಕ್ಕಿ, 200 ಮೆಟ್ರಿಕ್ ಟನ್ ಹಾಲಿನ ಪುಡಿ, 24 ಮೆಟ್ರಿಕ್ ಟನ್ ಔಷಧಗಳನ್ನು ಕಳುಹಿಸಿತ್ತು. ಅದಕ್ಕೂ ಮುನ್ನ ಪೆಟ್ರೋಲ್, ಡೀಸೆಲ್ಗಳನ್ನು ಕಳುಹಿಸಿದೆ.
ಶಿಕ್ಷಣ ವ್ಯವಸ್ಥೆಗೆ ಸುಧಾರಣೆ: ಶ್ರೀಲಂಕಾ ದಲ್ಲಿ ಶೈಕ್ಷಣಿಕ ವ್ಯವಸ್ಥೆ ಸುಧಾರಿಸಲು, ಅಲ್ಲಿನ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಧ್ಯಕ್ಷ ಗೊಟಬಾಯ ರಾಜಪಕ್ಸ, ಶಾಲೆ ತೊರೆದ ಮಕ್ಕಳು ಮತ್ತೆ ಶಾಲೆಗೆ ಸೇರಬೇಕು. ಹೊಸ ಶಿಕ್ಷಣ ನೀತಿಯಲ್ಲಿ ಮಕ್ಕಳು ತಮ್ಮ ಪ್ರತಿಭೆಯನ್ನೂ ಹೊರಹಾಕಲು ಅವಕಾಶವಿರುವ ವ್ಯವಸ್ಥೆ ಸೃಷ್ಟಿಸಲು ಚಿಂತಿಸಲಾಗಿದೆ ಎಂದಿದ್ದಾರೆ.
50 ದಿನಕ್ಕೆ ಕಾಲಿಟ್ಟ ಪ್ರತಿಭಟನೆ
ಶ್ರೀಲಂಕಾದ ಅಧ್ಯಕ್ಷ ಗೊಟಬಾಯ ರಾಜಪಕ್ಸ ಅವರ ರಾಜೀನಾಮೆಗೆ ಒತ್ತಾಯಿಸಿ ಶ್ರೀಲಂಕಾ ನಾಗರಿಕರು ಕೊಲಂಬೋದಲ್ಲಿ ನಡೆಸುತ್ತಿರುವ ಪ್ರತಿಭಟನೆ ಶನಿವಾರದಂದು 50ನೇ ದಿನಕ್ಕೆ ಕಾಲಿಟ್ಟಿತು. ಇಷ್ಟು ದಿನವಾ ದರೂ ಗೊಟಬಾಯ ರಾಜೀನಾಮೆ ಸಲ್ಲಿಸದ ಕಾರಣ ಪ್ರತಿಭಟನೆಯನ್ನು ಮತ್ತಷ್ಟು ಶಕ್ತಿಶಾಲಿಯಾಗಿ ರೂಪಿಸ ಲಾಗುತ್ತದೆ ಹಾಗೂ ಹೆಚ್ಚೆಚ್ಚು ಜನರನ್ನು ಪ್ರತಿಭಟನೆಗೆ ಸೆಳೆಯ ಲಾಗುತ್ತದೆ ಎಂದು ಸಂಘಟಕರು ಹೇಳಿದ್ದಾರೆ. ಪ್ರತಿಭಟನೆ ಆರಂಭ ವಾದಾಗ, ಆಗಿನ ಪ್ರಧಾನಿ ಮಹಿಂದಾ ರಾಜಪಕ್ಸ ಅವರ ರಾಜೀನಾಮೆಗೂ ಒತ್ತಾಯಿಸಲಾಗಿತ್ತು. ಅದಕ್ಕೆ ಮಣಿದಿದ್ದ ರಾಜಪಕ್ಸ ಮೇ 9ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನ್ಯೂಯಾರ್ಕ್ನಲ್ಲಿ ಶೂಟೌಟ್: ಭಾರತೀಯ ಮೂಲದ ವ್ಯಕ್ತಿಯ ಹತ್ಯೆ
ದೇಶಕ್ಕೆ ಕಪ್ಪು ಚುಕ್ಕಿ ತಂದಿಟ್ಟ ಎಮರ್ಜೆನ್ಸಿ: ಜರ್ಮನಿಯ ಮ್ಯೂನಿಚ್ನಲ್ಲಿ ಪ್ರಧಾನಿ ಅಭಿಮತ
ಈ ಹೋಟೆಲ್ ನಲ್ಲಿ ಆಂಟಿ ಎಂದರೆ ಆರ್ಡರ್ ಕ್ಯಾನ್ಸಲ್! 18ವರ್ಷ ಮೇಲ್ಪಟ್ಟವರಿಗೆ ಮಾತ್ರ ಈ ನಿಯಮ
ಇಮ್ರಾನ್ ಖಾನ್ ನಿವಾಸದಲ್ಲಿ ಬೇಹು ಸಾಧನ ಅಳವಡಿಕೆಗೆ ಯತ್ನ: ಭದ್ರತಾ ಸಿಬ್ಬಂದಿ ಬಂಧನ
ಆರ್ಥಿಕ ದುಸ್ಥಿತಿ: ಶ್ರೀಲಂಕಾದಲ್ಲಿ ಪೆಟ್ರೋಲ್, ಡೀಸೆಲ್ ಮತ್ತಷ್ಟು ತುಟ್ಟಿ
MUST WATCH
ತನ್ನ ಕ್ಷೇತ್ರದಲ್ಲಿನ ಅಭಿವೃದ್ಧಿ ಕಾಮಗಾರಿಗಳ ಕುರಿತು ಮಾತನಾಡಿದ ಖಾದರ್
ಚಿಕ್ಕಮಗಳೂರು : ವೀಲಿಂಗ್ ಶೋಕಿ ಮಾಡಿದವರಿಗೆ ಖಾಕಿಗಳ ಬುಲ್ಡೋಜರ್ ಟ್ರೀಟ್ಮೆಂಟ್
ರಸ್ತೆ ಮಧ್ಯೆಯೇ ಪ್ರವಾಸಿಗರ ಸೆಲ್ಪಿ… ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ
ವರ್ಷದ ಬಳಿಕ ತಾಯಿ ಮಡಿಲು ಸೇರಿದ ಮಗ: ವಿಳಾಸ ಪತ್ತೆಗೆ ನೆರವಾಯಿತು ಫೇಸ್ ಬುಕ್
ಉಡುಪಿ : ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು
ಹೊಸ ಸೇರ್ಪಡೆ
ರಾಜ್ಯಾದ್ಯಂತ ಆರಂಭವಾದ ಎಸೆಸೆಲ್ಸಿ ಪೂರಕ ಪರೀಕ್ಷೆ: ಮೊದಲ ದಿನ ಯಶಸ್ವಿ
ಟೆಂಪೋ ಟ್ರಾವೆಲರ್ – ಸರಕಾರಿ ಬಸ್ ನಡುವೆ ಭೀಕರ ರಸ್ತೆ ಅಪಘಾತ : ಓರ್ವ ಸಾವು, ನಾಲ್ವರು ಗಂಭೀರ
ಗುಜರಾತ್: ವಿದ್ಯಾರ್ಥಿನಿಯರಿಗೆ ಬಿಜೆಪಿ ಸೇರುವಂತೆ ಪ್ರಾಂಶುಪಾಲರ ಸೂಚನೆ: ಕಾಂಗ್ರೆಸ್ ಆಕ್ಷೇಪ
ಜೆಟ್ಏರ್ ವೇಸ್ಗೆ ವಿಮಾನ ಯಾರು ಕೊಡ್ತಾರೆ?
ಕಾಶ್ಮೀರದಲ್ಲಿ ಮತ್ತಿಬ್ಬರು ಉಗ್ರರ ಹತ್ಯೆ: ಲಷ್ಕರ್ ಉಗ್ರನ ಬಂಧನ; ಶಸ್ತ್ರಾಸ್ತ್ರಗಳು ವಶ