ಲಂಕಾದಲ್ಲಿ ಕೃಷಿ ಸಂಬಂಧಿ ರಾಸಾಯನಿಕಗಳ ಆಮದಿನ ಮೇಲಿನ ನಿರ್ಬಂಧ ರದ್ದು
Team Udayavani, Nov 22, 2021, 10:15 PM IST
ಕೊಲೊಂಬೋ: ಜಗತ್ತಿನಲ್ಲೇ ಮೊದಲ “ಸಂಪೂರ್ಣ ಸಾವಯವ ಕೃಷಿ ದೇಶ’ ಎಂಬ ಹೆಗ್ಗಳಿಕೆಯನ್ನು ಪಡೆಯುವ ಶ್ರೀಲಂಕಾದ ಕನಸು ಭಗ್ನವಾಗಿದೆ.
ಕ್ರಿಮಿನಾಶಕಗಳು ಮತ್ತು ಸಾವಯವ ಕೃಷಿಯಲ್ಲಿ ಬಳಸಲಾಗುವ ವಸ್ತುಗಳ ಆಮದು ಮೇಲೆ ಹೇರಿದ್ದ ನಿಷೇಧವನ್ನು ಶ್ರೀಲಂಕಾ ಸರ್ಕಾರ ಹಿಂಪಡೆದಿದೆ.
ವಿದೇಶಿ ವಿನಿಮಯದ ಕೊರತೆ, ಆಹಾರ, ಕಚ್ಚಾತೈಲ ಮತ್ತು ಇತರೆ ಅವಶ್ಯಕ ವಸ್ತುಗಳ ಅಭಾವದಿಂದಾಗಿ ದ್ವೀಪ ರಾಷ್ಟ್ರವು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಾಗಲೇ ಈ ಬೆಳವಣಿಗೆ ನಡೆದಿದೆ.
ಕಳೆದ ತಿಂಗಳಷ್ಟೇ ಸರ್ಕಾರವು ದೇಶದ ಪ್ರಮುಖ ರಫ್ತು ಉತ್ಪನ್ನವಾದ ಚಹಾ ಕೃಷಿಗೆ ಬಳಸುವ ರಾಸಾಯನಿಕ ಗೊಬ್ಬರದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಹಿಂಪಡೆದಿತ್ತು.
ಇದನ್ನೂ ಓದಿ:ಪರಿಷತ್ ಚುನಾವಣೆ: 17 ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆ
ಈಗ ಕೃಷಿ ಸಂಬಂಧಿತ ಆಮದಿನ ನಿರ್ಬಂಧ ವಿರೋದಿಸಿ ದೇಶಾದ್ಯಂತ ರೈತರು ಪ್ರತಿಭಟನೆ ಆರಂಭಿಸಲು ಸಿದ್ಧತೆ ನಡೆಸುತ್ತಿದ್ದಂತೆ, ಲಂಕಾ ಸರ್ಕಾರವು ಮಣಿದಿದೆ. ತುರ್ತಾಗಿ ಬೇಕಾಗಿರುವ ಕೃಷಿ ಸಂಬಂಧಿ ರಾಸಾಯನಿಕಗಳು, ಹರ್ಬಿಸೈಡ್ಗಳು, ಕ್ರಿಮಿನಾಶಕಗಳನ್ನು ಆಮದು ಮಾಡಿಕೊಳ್ಳಲು ಒಪ್ಪಿಗೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ
Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!
Google; ಪೈಥಾನ್ ತಂಡದ ಉದ್ಯೋಗಿಗಳ ವಜಾ
MUST WATCH
ಹೊಸ ಸೇರ್ಪಡೆ
CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ
Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್ ಉತ್ಸುಕವಾಗಿದೆ: ಪ್ರಧಾನಿ ಮೋದಿ
Brahmavara-ಉಡುಪಿ ಟ್ರಾಫಿಕ್ ಜಾಮ್ ಸಮಸ್ಯೆ: ಸವಾರರು ಸುಸ್ತೋ ಸುಸ್ತು
Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು
Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ