ಲಂಕಾ ತುರ್ತು ಪರಿಸ್ಥಿತಿ ಮುಂದುವರಿಕೆ: ಸಿರಿಸೇನಾ
Team Udayavani, Jun 23, 2019, 5:58 AM IST
ಕೊಲಂಬೊ: ಅಚ್ಚರಿಯ ಬೆಳವಣಿಗೆಯಲ್ಲಿ ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ, ಎಪ್ರಿಲ್ನಲ್ಲಿ ದೇಶಾದ್ಯಂತ ತಾವು ಜಾರಿಗೊಳಿಸಿದ್ದ ತುರ್ತು ಪರಿಸ್ಥಿತಿಯನ್ನು ಮುಂದುವರಿಸಿ ಆದೇಶ ಹೊರಡಿಸಿದ್ದಾರೆ. ಎಪ್ರಿಲ್ನಲ್ಲಿ ಈಸ್ಟರ್ ಹಬ್ಬದ ವೇಳೆ ಸರಣಿ ಸ್ಫೋಟ ಸಂಭವಿಸಿದ ಅನಂತರ ತುರ್ತು ಪರಿಸ್ಥಿತಿ ಹೇರಲಾಗಿತ್ತು. ಹಾಗಾಗಿ, ಇತ್ತೀಚೆಗೆ ಆಸ್ಟ್ರೇಲಿಯಾ, ಕೆನಡಾ, ಜಪಾನ್ ಹಾಗೂ ಅಮೆರಿಕದ ರಾಜತಂತ್ರಜ್ಞರೊಂದಿಗೆ ಮಾತನಾಡುತ್ತಿದ್ದ ಸಿರಿಸೇನಾ, ದೇಶದಲ್ಲಿ ಕಾನೂನು ಸುವ್ಯವಸ್ಥೆ ಶೇ. 99ರಷ್ಟು ಹತೋಟಿಗೆ ಬಂದಿರುವುದರಿಂದ ತುರ್ತು ಪರಿಸ್ಥಿತಿ ಜೂ. 22ರ ಅನಂತರ ಹಿಂಪಡೆಯುವುದಾಗಿ ತಿಳಿಸಿದ್ದರು. ಆದರೆ, ಈಗ ಮನಸ್ಸು ಬದಲಾಯಿಸಿರುವುದು ಎಲ್ಲರಿಗೂ ಅಚ್ಚರಿ ತಂದಿದೆ.
ಇದೇ ವೇಳೆ, ಈಸ್ಟರ್ ಸ್ಫೋಟಗಳ ರೂವಾರಿಗಳೆನಿಸಿರುವ ನ್ಯಾಷನಲ್ ತೌಹೀತ್ ಜಮಾತ್ (ಎನ್ಟಿಜೆ) ಸಂಘಟನೆಯ ಎಲ್ಲ ಸದಸ್ಯರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾದ ಪ್ರಧಾನಿ ರನಿಲ್ ವಿಕ್ರಮಸಿಂಘೆ ತಿಳಿಸಿದ್ದಾರೆ. ಜತೆಗೆ, ಎನ್ಟಿಜೆ ಸಂಘಟನೆಯ ನಾಯಕ ಜಹ್ರನ್ ನಡೆಸುತ್ತಿದ್ದ ಧಾರ್ಮಿಕ ಸಮಾರಂಭಗಳ ಜತೆಗೆ ನಂಟು ಹೊಂದಿದ್ದ ಎಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದೂ ಅವರು ಹೇಳಿದ್ದಾರೆ. ಒಟ್ಟು 9 ಆತ್ಮಾಹುತಿ ದಾಳಿಕೋರರು ಸ್ಫೋಟಗಳಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್