ಶ್ರೀಲಂಕಾ: ಬಂಧನದಿಂದ ಪಾರಾಗಲು ಕೋರ್ಟ್ಗೆ ಮೊರೆ ಹೋದ ಜೊಹಾನ್ಸೆಸ್ ಫೆರ್ನಾಂಡೊ
ಪ್ರತಿಭಟನಾಕಾರರ ಮೇಲೆ ಹಲ್ಲೆ ನಡೆಸಿದ ಆರೋಪ
Team Udayavani, Jun 8, 2022, 9:30 PM IST
ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸ ಕುಟುಂಬದ ನಿಷ್ಠಾವಂತ; ಜೊಹಾನ್ಸೆನ್ ಫೆರ್ನಾಂಡೊ ಬಂಧನದಿಂದ ಪಾರಾಗಲು ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಮೇ 9ರಂದು ನಡೆದ ಹಿಂಸಾಚಾರಕ್ಕೆ ಜೊಹಾನ್ಸೆನ್ ಅವರೇ ನೇರ ಕಾರಣ ಎಂದು ಆರೋಪಿಸಲಾಗಿದೆ. ಶ್ರೀಲಂಕಾ ಸಿಐಡಿ ತಂಡ ಮೇ 24ರಂದು ಅವರನ್ನು ವಿಚಾರಣೆಗೊಳಪಡಿಸಿದೆ.
ಮೇ 9ರಂದು ಶ್ರೀಲಂಕಾದ ಆರ್ಥಿಕ ಬಿಕ್ಕಟ್ಟನ್ನು ವಿರೋಧಿಸಿ ಜನರು ಶಾಂತಿಯಿಂದ ಪ್ರತಿಭಟನೆ ನಡೆಸುತ್ತಿದ್ದರು. ಆ ವೇಳೆ ಪ್ರತಿಭಟನಾಕಾರರ ಮೇಲೆ ಕೆಲವರು ಹಲ್ಲೆ ನಡೆಸಿದ್ದಾರೆ. ಇದಕ್ಕೆ ಫೆರ್ನಾಂಡೊ ಪ್ರಚೋದನೆಯೇ ಕಾರಣ ಎನ್ನಲಾಗಿದೆ.
ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಪ್ರತಿದಾಳಿ ನಡೆಸಿದರು. ಇದು ದೇಶಾದ್ಯಂತ ಗಲಭೆಗಳು ನಡೆಯಲು ಪ್ರೇರಣೆಯಾಯಿತು. ಈ ಪ್ರತಿದಾಳಿಗಳಲ್ಲಿ 10 ಮಂದಿ ಕೊಲ್ಲಲ್ಪಟ್ಟಿದ್ದಾರೆ. ಇದರಲ್ಲಿ ಫೆರ್ನಾಂಡೊ ಸಂಸತ್ ಸಹೋದ್ಯೋಗಿಯೂ ಒಬ್ಬರು!
ನ್ಯಾಯಾಲಯ ಫೆರ್ನಾಂಡೊ ಅವರ ಅರ್ಜಿಯನ್ನು ಸ್ವೀಕರಿಸಿದೆ. ಯಾವಾಗ ವಿಚಾರಣೆ ಎನ್ನುವುದು ಸ್ಪಷ್ಟವಾಗಿಲ್ಲ. ಈ ನಡುವೆ ಸಚಿವರ ಬಂಧನವಾದರೂ ಅಚ್ಚರಿಯಿಲ್ಲ.
ಶೀಘ್ರ ಲಂಕಾಕ್ಕೆ ಬನ್ನಿ: ಐಎಂಎಫ್ ಗೆ ವಿಕ್ರಮಸಿಂಘೆ ಆಗ್ರಹ
ಆರ್ಥಿಕ ಮುಗ್ಗಟ್ಟಿನಿಂದ ತೊಳಲಾಡುತ್ತಿರುವ ಶ್ರೀಲಂಕಾಕ್ಕೆ ಬೇಗ ಬಂದು ಪರಿಸ್ಥಿತಿ ಪರಿಶೀಲಿಸಿ, ಆಗ ಬೇಗ ಒಂದು ಒಪ್ಪಂದ ಮಾಡಿಕೊಳ್ಳಬಹುದು ಎಂದು ಶ್ರೀಲಂಕಾ ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಐಎಂಎಫ್ ಗೆ ಆಗ್ರಹಿಸಿದ್ದಾರೆ. ಸದ್ಯ ಲಂಕಾ ಐಎಂಎಫ್ ನಿಂದ 6 ಬಿಲಿಯನ್ ಡಾಲರ್ ಸಾಲವನ್ನು ನಿರೀಕ್ಷೆ ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ
US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?