ಲಂಕಾ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಗರಿಷ್ಠ ನೆರವು : ಅಧ್ಯಕ್ಷ ಸಿರಿಸೇನ ಭರವಸೆ
Team Udayavani, Apr 30, 2019, 11:21 AM IST
ಕೊಲಂಬೋ : ಈಸ್ಟರ್ ಭಾನುವಾರದ ಆತ್ಮಾಹುತಿ ದಾಳಿಗೆ 40 ವಿದೇಶೀಯರ ಸಹಿತ 253 ಜನರನ್ನು ಬಲಿಪಡೆದಿರುವ ಇಸ್ಲಾಮಿಕ್ ಉಗ್ರರ ಭಯೋತ್ಪಾದಕ ಕೃತ್ಯಗಳಿಂದಾಗಿ ಲಂಕೆಯ ಪ್ರಧಾನ ಆದಾಯ ಮೂಲಗಳಲ್ಲಿ ಒಂದಾಗಿರುವ ಪ್ರವಾಸೋದ್ಯಮದ ಮೇಲೆ ಭಾರೀ ಹೊಡೆತ ಬಿದ್ದಿದೆ.
ವಿದೇಶೀ ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸೀ ತಾಣಗಳಲ್ಲಿನ ವೈಭವೋಪೇತ ಪಂಚತಾರಾ ಹೊಟೇಲುಗಳ ಉದ್ಯಮ ಬಹುತೇಕ ನಿಲುಗಡೆಯನ್ನು ತಲುಪಿದೆ. ಈ ಹೊಟೇಲುಗಳೆಲ್ಲ ಈಗ ಖಾಲಿ ಖಾಲಿ.
ಈ ಸಂದರ್ಭದಲ್ಲಿ ಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಅವರು ಹೊಟೇಲ್ ಮಾಲಕರಿಗೆ ಸರಕಾರದಿಂದ ಗರಿಷ್ಠ ಸಾಧ್ಯ ಹಣಕಾಸು ಪರಿಹಾರ ಒದಗಿಸುವ ಭರವಸೆ ನೀಡಿದ್ದಾರೆ. ಲಂಕಾ ಪ್ರವಾಸೋದ್ಯಮ ಪುನಶ್ಚೇತನಕ್ಕೆ ಗರಿಷ್ಠ ನೆರವು ನೀಡುವುದಾಗಿ ಹೇಳಿದ್ದಾರೆ.
ಲಂಕೆಯ ಆರ್ಥಿಕತೆಗೆ ಪ್ರವಾಸೋದ್ಯಮದ ಕೊಡುಗೆ ಶೇ.5ರಷ್ಟಿದೆ. 2018ರಲ್ಲಿ 23 ಲಕ್ಷ ಪ್ರವಾಸಿಗರನ್ನು ಆಕರ್ಷಿಸಿರುವ ಲಂಕೆಗೆ ಭಾರತವು ಬೃಹತ್ ಸಂಪನ್ಮೂಲ ಮಾರುಕಟ್ಟೆಯಾಗಿದೆ.
ಕಳೆದ ವರ್ಷ ಸುಮಾರು 4.50 ಲಕ್ಷ ಭಾರತೀಯರು ಲಂಕಾ ಪ್ರವಾಸ ಕೈಗೊಂಡಿದ್ದರು. ಈ ವರ್ಷ ಅದು 10 ಲಕ್ಷ ದಾಟುವ ನಿರೀಕ್ಷೆ ಇತ್ತು. ಆದರೆ ಈ ನಡುವೆ ನಡೆದಿರುವ ಇಸ್ಲಾಮಿಕ್ ಉಗ್ರ ದಾಳಿಯ ಪರಿಣಾಮವಾಗಿ ಲಂಕೆಯ ಪ್ರವಾಸೋದ್ಯಮ ನೆಲಕಚ್ಚಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು