ಅವಿಶ್ವಾಸ ಗೊತ್ತುವಳಿ ಎದುರಿಸಿ : ಲಂಕಾ ಸರಕಾರಕ್ಕೆ ವಿಪಕ್ಷಗಳ ಎಚ್ಚರಿಕೆ
Team Udayavani, Apr 9, 2022, 8:20 AM IST
ಕೊಲೊಂಬೋ: ಶೀಘ್ರದಲ್ಲಿಯೇ ದೇಶದ ಅರ್ಥ ವ್ಯವಸ್ಥೆಯನ್ನು ಸರಿಪಡಿಸಲು ಕ್ರಮ ಕೈಗೊಳ್ಳಿ ಎಂದು ಶ್ರೀಲಂಕಾ ಸರಕಾರಕ್ಕೆ ಅಲ್ಲಿನ ವಿಪಕ್ಷಗಳು ಎಚ್ಚರಿಕೆ ನೀಡಿವೆ. ಇಲ್ಲವಾದಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸಲಾಗುತ್ತದೆ ಎಂದು ಶುಕ್ರವಾರ ಎಚ್ಚರಿಕೆ ನೀಡಿವೆ.
ಗುರುವಾರದ ವರೆಗಿನ ಬೆಳವಣಿಗೆಯಲ್ಲಿ ಅಧ್ಯಕ್ಷ ಗೋಟಬಯ ರಾಜಪಕ್ಸ ನೇತೃತ್ವದ ಸರಕಾರದ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಹಿಂದೇಟು ಹಾಕಿದ್ದವು. ಶುಕ್ರವಾರ ಮಾತನಾಡಿದ ವಿಪಕ್ಷ ನಾಯಕ ಸಜಿತ್ ಪ್ರೇಮದಾಸ, ಸದ್ಯ ದೇಶವನ್ನು ಸಂಕಷ್ಟದಿಂದ ಪಾರು ಮಾಡುವ ಹೊಣೆ ಸರಕಾರದ್ದು. ಅದನ್ನು ನಡೆಸದೇ ಇದ್ದರೆ, ಅವಿಶ್ವಾಸಗೊತ್ತುವಳಿ ಮಂಡಿಸಲಾಗುತ್ತದೆ.
ಜತೆಗೆ ಅಧ್ಯಕ್ಷೀಯ ನೇತೃತ್ವದ ಸರಕಾರ ವ್ಯವಸ್ಥೆ ರದ್ದಾಗಬೇಕು ಎಂದು ಆಗ್ರಹಿಸಿದ್ದಾರೆ. ಗೋಟ ಬಯ ರಾಜಪಕ್ಸ ನೇತೃತ್ವದ ಮಧ್ಯಾಂತರ ಸರಕಾರದ ಬಗ್ಗೆ ಯಾವುದೇ ವಿಶ್ವಾಸ ಇಲ್ಲ ಎಂದಿದ್ದಾರೆ.
ಹುದ್ದೆಗೆ ಮರಳಿದ ಅಲಿ ಸಬ್ರಿ: ವಿತ್ತ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಅಲಿ ಸಬ್ರಿ ಶುಕ್ರವಾರ ಕೊನೆಗೂ ಹೊಸ ಹೊದ್ದೆ ವಹಿಸಿಕೊಂಡಿದ್ದಾರೆ. ಈ ಬಗ್ಗೆ ಸಂಸತ್ನಲ್ಲಿ ಹೇಳಿಕೆ ನೀಡಿದ್ದಾರೆ.
ಮಾಸಾಂತ್ಯಕ್ಕೆ ಬರಿದು?: ದ್ವೀಪ ರಾಷ್ಟ್ರಕ್ಕೆ ಭಾರತ ದಿಂದ ಪೆಟ್ರೋಲ್, ಡೀಸೆಲ್ ಪೂರೈಕೆಯ ಹೊರ ತಾಗಿಯೂ ಕೂಡ ಅಲ್ಲಿ ಮಾಸಾಂತ್ಯಕ್ಕೆ ಪೆಟ್ರೋಲ್ ಬಂಕ್ಗಳು ಬರಿದಾಗುವ ಆತಂಕ ಎದುರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
MUST WATCH
ಹೊಸ ಸೇರ್ಪಡೆ
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ
Vote ಮಾಡದಿದ್ದರೆ ಬ್ಯಾಂಕ್ ಖಾತೆಯಿಂದ 350 ರೂ. ಕಡಿತ?
Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ