ಆರ್ಥಿಕ ಸುಧಾರಣೆ ಅಬಾಧಿತ;ದಾವೋಸ್ ವಿಶ್ವ ಆರ್ಥಿಕ ಶೃಂಗದಲ್ಲಿ ನೀತಿ ಆಯೋಗದ ಸಿಇಒ ಪ್ರತಿಪಾದನೆ
ಹಸಿರು ಜಲಜನಕ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿರಲಿದೆ
Team Udayavani, May 23, 2022, 8:03 PM IST
ದಾವೋಸ್: ಭಾರತದಲ್ಲಿ ಅರ್ಥ ವ್ಯವಸ್ಥೆಯ ಸುಧಾರಣೆಗಳು ಮುಂದುವರಿಯಲಿವೆ ಎಂದು ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಸೋಮವಾರ ತಿಳಿಸಿದ್ದಾರೆ.
ಸ್ವಿಜರ್ಲೆಂಡ್ನ ದಾವೋಸ್ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಡಿಜಿಟಲ್ ಕ್ಷೇತ್ರದ ತಂತ್ರಜ್ಞಾನದ ವ್ಯಾಪಿಸುವಿಕೆಯ ಹೊರತಾಗಿಯೂ ಸುಧಾರಣೆಗಳು ಮುಂದುವರಿಯಲಿವೆ ಎಂದಿದ್ದಾರೆ. ಇತ್ತೀಚೆಗೆ ಕೈಗೊಂಡಿರುವ ಆರ್ಥಿಕ ಸುಧಾರಣೆಗಳಿಂದ ದೇಶ ಅಭಿವೃದ್ಧಿಯ ಪಥದಲ್ಲಿ ಶರವೇಗದಲ್ಲಿ ಸಾಗುತ್ತಿದೆ ಎಂದು ಬಣ್ಣಿಸಿದ್ದಾರೆ.
ವಿಶ್ವನಾಯಕನಾಗಲಿದೆ:
ಹಸಿರು ಜಲಜನಕ ಉತ್ಪಾದನಾ ಕ್ಷೇತ್ರದಲ್ಲಿ ಭಾರತ ಮುಂದಿನ ದಿನಗಳಲ್ಲಿ ಜಗತ್ತಿನ ಅಗ್ರ ದೇಶವಾಗಲಿದೆ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
ದೇಶದಲ್ಲಿ ಬದಲಿ ಇಂಧನ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದ ಸಚಿವರು, “ಇಥೆನಾಲ್ ಮಿಶ್ರಿತ ಪೆಟ್ರೋಲ್ ಅನ್ನು ಶೇ.20ಕ್ಕೆ ಏರಿಸುವ ಗುರಿ ಹೊಂದಲಾಗಿದೆ. 2030ರ ಬದಲಾಗಿ 2025ಕ್ಕೆ ಉದ್ದೇಶಿತ ಗುರಿ ಸಾಧನೆಯ ವರ್ಷ ಇಳಿಕೆ ಮಾಡಲಾಗಿದೆ. ಹಸಿರು ಜಲಜನಕ, ಜೈವಿಕ ಇಂಧನ ಮಿಶ್ರಣ ಮತ್ತು ಬದಲಿ ಇಂಧನ ಮೂಲಗಳ ಬಗ್ಗೆ ಶೋಧ ಪ್ರಗತಿಯಲ್ಲಿದೆ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್