“ಮಂಗಳ, ಚಂದ್ರನಲ್ಲಿ ಬೇಗ ಮಾನವ ವಸಾಹತು ಸ್ಥಾಪಿಸಿ’


Team Udayavani, Jun 23, 2017, 3:45 AM IST

t-Stephen-Hawking.jpg

ವಾಷಿಂಗ್ಟನ್‌: “ಭೂಮಿಯಲ್ಲಿ ಜನಸಂಖ್ಯೆ ದಿನೇ ದಿನೆ ಏರುತ್ತಿದೆ. ಮಾನವನಿಗೆ ಭೂಮಿ ಗಾತ್ರ ಸಾಲದಾಗುತ್ತಿದೆ. ಇದಕ್ಕೆ ಕೂಡಲೇ ನಾವು ಮಂಗಳ ಮತ್ತು ಚಂದ್ರನಲ್ಲಿ ವಸಾಹತು ಸ್ಥಾಪನೆಗೆ, ಅಲ್ಲಿಗೆ ತೆರಳುವ ಕುರಿತ ಆಲೋಚನೆ, ಯತ್ನಗಳನ್ನು ಮಾಡಬೇಕು.’ ಹೀಗಂತ ಹೇಳಿದ್ದು, ಪ್ರಖ್ಯಾತ ಖಗೋಳ ಭೌತ ವಿಜ್ಞಾನಿ ಸ್ಟೀಫ‌ನ್‌ ಹಾಕಿಂಗ್‌. 

ನಾರ್ವೆಯ ಟ್ರೋಂಡೈಮ್‌ನಲ್ಲಿ ನಡೆಯುತ್ತಿರುವ ಸ್ಟಾರ್‌ಮಸ್‌ ಕಾರ್ಯಕ್ರಮವನ್ನು ಉದ್ದೇಶಿಸಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು, ನಮ್ಮಲ್ಲಿ ಸ್ಥಳದ ಅಭಾವ ಉಂಟಾಗುತ್ತಿದೆ. ಬೇರೆ ಗ್ರಹಗಳನ್ನು ಹುಡುಕುವುದು ಅನಿವಾರ್ಯವಾಗಿದೆ. ಪ್ರಪಂಚದ ಎಲ್ಲಾ ದೇಶಗಳು ಚಂದ್ರನಲ್ಲಿ 30 ವರ್ಷದೊಳಗೆ ಕಾಲನಿ ಸ್ಥಾಪನೆಗೆ ಒಟ್ಟಾಗಬೇಕಿದೆ. ಮುಂದಿನ 200ರಿಂದ 500 ವರ್ಷದೊಳಗೆ ಸಾಮೂಹಿಕ ವಲಸೆಗೆ ಸಿದ್ಧವಾಗಬೇಕಿದೆ ಎಂದಿದ್ದಾರೆ. 

ಭೂಮಿ ಸಾಲದಾಗುತ್ತಿದೆ. ತಾಪಮಾನ ಏರಿಕೆ, ನೀರ್ಗಲ್ಲುಗಳ ಕರಗುವಿಕೆ ಕಂಡು ಬರುತ್ತಿದೆ. ಇದರಿಂದ ಪಾರಾಗಲು ಭವಿಷ್ಯದಲ್ಲಿ ದೀರ್ಘಾವಧಿಯ ಕಾರ್ಯತಂತ್ರಗಳನ್ನು ಅನುಸರಿಸಬೇಕಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಹವಾಮಾನ ಬದಲಾವಣೆ ಕುರಿತಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರ ಧೋರಣೆ ಬಗ್ಗೆಯೂ ಪ್ರಸ್ತಾವಿಸಿದ ಅವರು, ಹವಾಮಾನ ಬದಲಾವಣೆ ತೀವ್ರ ಕಳವಳಕಾರಿ ವಿಚಾರವಾಗಿದ್ದು, ಈ ಬಗ್ಗೆ ಟ್ರಂಪ್‌ ಅವರ ನಿರ್ಧಾರ ತಪ್ಪಾಗಿದೆ ಎಂದು ಹೇಳಿದ್ದಾರೆ. 

ಅನ್ಯಗ್ರಹಕ್ಕೆ ಹೋಗೋದು ಹೇಗೆ? 
ಸ್ಟೀಫ‌ನ್‌ ಹಾಕಿಂಗ್‌ ಅವರು ಹೇಳುವಂತೆ ಭೂಮಿಯಿಂದ 4.37 ಜ್ಯೋತಿರ್ವರ್ಷದಷ್ಟು ದೂರದ ಪ್ರಾಕ್ಸಿಮಾ ಬಿ ಮತ್ತು ಆಲ್ಫಾ ಸೆಂಚುರೈ ಕಡೆಗೆ ಇರಬೇಕು. ಅಲ್ಲಿ ವಸಾಹತು ಸ್ಥಾಪನೆಯ ಗುರಿ ಇರಬೇಕು. ಥಿಯರಿ ಪ್ರಕಾರ ನಾವು ಬೆಳಕಿನ ವೇಗದಲ್ಲಿ ಸಂಚರಿಸುವಷ್ಟರ ರೀತಿಯ ಅತ್ಯಾಧುನಿಕ ತಂತ್ರಜ್ಞಾನ ಹೊಂದಿರಬೇಕಾಗುತ್ತದೆ. 

ನ್ಯಾನೋ ಏರ್‌ಕ್ರಾಫ್ಟ್ನಂತಹ ಬಾಹ್ಯಾಕಾಶ ನೌಕೆ (ಸೈಲ್‌ಬೋಟ್‌) ಹೊಂದಿದ್ದರೆ, ಮಂಗಳ ಗ್ರಹಕ್ಕೆ ಒಂದು ಗಂಟೆಯಲ್ಲಿ, ಪೂÉಟೋ ಗ್ರಹಕ್ಕೆ ಕೆಲವು ದಿನಗಳಲ್ಲಿ, ಆಲ್ಫಾ ಸೆಂಚುರೈ ಗ್ರಹಕ್ಕೆ 20 ವರ್ಷದಲ್ಲಿ ಕ್ರಮಿಸಬಹುದು. ಮಾನವ ಜೀವಿ ಇನ್ನೂ ಕೆಲವು ದಶಲಕ್ಷ ವರ್ಷಗಳ ಕಾಲ ಜೀವಿಸಿದಲ್ಲಿ ಯಾರೂ ಹೋಗದ ಜಾಗಕ್ಕೆ ಹೋಗುವಂತಹ ಭವಿಷ್ಯದ ದಿನಗಳು ಬರಲಿದೆ ಎಂಬಿತ್ಯಾದಿ ಚಿಂತನೆಗಳನ್ನು ಹರಿಯಬಿಟ್ಟಿದ್ದಾರೆ. 

ಟಾಪ್ ನ್ಯೂಸ್

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫ‌ಯಾಜ್‌: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.