ಈ ಕೂಡಲೇ ಆಕ್ರಮಣ ನಿಲ್ಲಿಸಿ; ರಷ್ಯಾಗೆ ಅಂತಾರಾಷ್ಟ್ರೀಯ ಕೋರ್ಟ್‌ ಆದೇಶ

ಉಕ್ರೇನ್‌ಗೆ ಸಂದ ಜಯ ಎಂದ ಅಧ್ಯಕ್ಷ

Team Udayavani, Mar 17, 2022, 7:10 AM IST

ಈ ಕೂಡಲೇ ಆಕ್ರಮಣ ನಿಲ್ಲಿಸಿ; ರಷ್ಯಾಗೆ ಅಂತಾರಾಷ್ಟ್ರೀಯ ಕೋರ್ಟ್‌ ಆದೇಶ

ಕೀವ್‌/ವಾಷಿಂಗ್ಟನ್‌: “ಈ ಕೂಡಲೇ ಉಕ್ರೇನ್‌ ಮೇಲಿನ ದಾಳಿಯನ್ನು ನಿಲ್ಲಿಸಿ.’ ಹೀಗೆಂದು ರಷ್ಯಾಕ್ಕೆ ಅಂತಾರಾಷ್ಟ್ರೀಯ ನ್ಯಾಯಾಲಯ ಬುಧವಾರ ರಾತ್ರಿ ಸೂಚಿಸಿದೆ.

ರಷ್ಯಾ ಯುದ್ಧಾಪರಾಧದ ವಿರುದ್ಧ ಅಂತಾರಾಷ್ಟ್ರೀಯ ಕೋರ್ಟ್‌ಗೆ ಉಕ್ರೇನ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, “ಈಗಲೇ ರಷ್ಯಾ ಯುದ್ಧ ನಿಲ್ಲಿಸಬೇಕು. ಪರಿಸ್ಥಿ ತಿಯನ್ನು ಮತ್ತಷ್ಟು ಉಲ್ಬಣ ಗೊಳಿಸುವಂಥ ಯಾವುದೇ ಕ್ರಮ ವನ್ನು ಎರಡೂ ರಾಷ್ಟ್ರಗಳು ಕೈಗೊಳ್ಳುವಂತಿಲ್ಲ’ ಎಂದೂ ಆದೇಶಿಸಿದೆ. ನ್ಯಾಯಾಲಯದ ಈ ತೀರ್ಪು “ಉಕ್ರೇನ್‌ಗೆ ಸಂದ ಜಯ’ ಎಂದು ಝೆಲೆನ್‌ಸ್ಕಿ ಬಣ್ಣಿಸಿದ್ದಾರೆ. ಜತೆಗೆ ರಷ್ಯಾ ಕೂಡಲೇ ಹಿಂದೆ ಸರಿಯಬೇಕು ಎಂದೂ ಆಗ್ರಹಿಸಿದ್ದಾರೆ.

ಇದಕ್ಕೂ ಮುನ್ನ ಮಾತನಾಡಿದ್ದ ರಷ್ಯಾ ಅಧ್ಯಕ್ಷ ಪುತಿನ್‌, “ನಾವು ಹಿಂದೆ ಸರಿಯುತ್ತೇವೆ ಎಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನ. ಪಾಶ್ಚಾತ್ಯ ರಾಷ್ಟ್ರಗಳಿಗೆ ರಷ್ಯಾ ಬಗ್ಗೆ ಇನ್ನೂ ಗೊತ್ತಿಲ್ಲ’ ಎಂದು ಪಾಶ್ಚಾತ್ಯ ದೇಶಗಳಿಗೆ ಎಚ್ಚರಿಕೆ ಕೊಟ್ಟಿದ್ದರು. ಜತೆಗೆ ಭವಿಷ್ಯದಲ್ಲಿ ಉಕ್ರೇನ್‌ ಅಣ್ವಸ್ತ್ರಗಳನ್ನು ಹೊಂದು ವುದರಲ್ಲಿತ್ತು. ರಷ್ಯಾಕ್ಕೆ ಉಕ್ರೇನ್‌ ಅನ್ನು ಆಕ್ರಮಿಸಿಕೊಳ್ಳುವ ಉದ್ದೇಶವಿಲ್ಲ. ನಮ್ಮ ಪ್ಲ್ರಾನ್‌ ಪ್ರಕಾರವೇ ಎಲ್ಲ ನಡೆಯುತ್ತಿದೆ ಎಂದೂ ಪುತಿನ್‌ ಹೇಳಿದ್ದಾರೆ.

ಸಂಧಾನ ಸಾಧ್ಯತೆ: ಈ ನಡುವೆ, ಉಕ್ರೇನ್‌ ಮತ್ತು ರಷ್ಯಾ ನಡುವೆ ಬುಧವಾರ ಕೊನೆಯ ಹಂತದ ಮಾತುಕತೆ ನಡೆದಿದ್ದು, “ಸಂಧಾನ’ದ ನಿರೀಕ್ಷೆ ಗೋಚರಿಸಿದೆ. ಸ್ವೀಡನ್‌, ಆಸ್ಟ್ರಿಯಾ ಮಾದರಿಯಲ್ಲಿ ಉಕ್ರೇನ್‌ “ನಿಷ್ಪಕ್ಷ ನಿಲುವು’ ಹೊಂದಿರುವಂತೆ ನೋಡಿಕೊಳ್ಳುವುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಜತೆಗೆ ರಷ್ಯಾ ಮೇಲಿನ ದಿಗ್ಬಂಧನದ ಕುರಿತೂ ಚರ್ಚಿಸಲಾಗಿದೆ. ಇದೇ ವೇಳೆ ಉಕ್ರೇನ್‌ ಅಧ್ಯಕ್ಷ ಝೆಲೆನ್‌ಸ್ಕಿ ಅವರೂ ತಮ್ಮ ದೇಶವಾಸಿಗಳನ್ನು ಉದ್ದೇಶಿಸಿ ವೀಡಿಯೋ ಸಂದೇಶ ರವಾನಿಸಿದ್ದು, “ಯಾವುದೇ ಯುದ್ಧವು ಸಂಧಾನದೊಂದಿಗೆ ಕೊನೆಗೊಳ್ಳುತ್ತದೆ. ಪ್ರಯತ್ನ ಮುಂದುವರಿದಿದೆ. ಸ್ವಲ್ಪ ತಾಳ್ಮೆ ವಹಿಸೋಣ’ ಎಂದಿದ್ದಾರೆ. ಈ ಹೇಳಿಕೆಯು ಸಂಧಾನ ಯಶಸ್ಸಿನ ಸುಳಿವನ್ನು ನೀಡಿದೆ.

ಮುಂದುವರಿದ ದಾಳಿ: ಬುಧವಾರ ಕೀವ್‌, ಮರಿಯುಪೋಲ್‌ ಸೇರಿದಂತೆ ಹಲವು ನಗರಗಳ ಮೇಲೆ ರಷ್ಯಾ ದಾಳಿ ಮುಂದುವರಿ ಸಿತ್ತು. ಮರಿಯುಪೋಲ್‌ನಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಆಶ್ರಯ ಪಡೆದಿದ್ದ ಥಿಯೇಟರ್‌ ಮೇಲೆ ರಷ್ಯಾ ಬಾಂಬ್‌ ಹಾಕಿದೆ. ಚೆರ್ನಿಹಿವ್‌ನಲ್ಲಿ ಆಹಾರಕ್ಕಾಗಿ ಸರತಿಯಲ್ಲಿ ನಿಂತಿದ್ದ 10 ಜನರನ್ನು ಗುಂಡಿಕ್ಕಿ ಹತ್ಯೆಗೈದಿದೆ. ಇನ್ನೊಂದೆಡೆ ರಷ್ಯಾ ವಶದಲ್ಲಿರುವ ಖೇರ್ಸಾನ್‌ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಮತ್ತು ವಾಯುನೆಲೆ ಮೇಲೆ ಉಕ್ರೇನ್‌ ವೈಮಾನಿಕ ದಾಳಿ ನಡೆಸಿದ್ದು, ಅಲ್ಲಿದ್ದ ಹಲವು ಹೆಲಿಕಾಪ್ಟರ್‌ಗಳು ಅಗ್ನಿಗಾಹುತಿಯಾಗಿವೆ. ಮಂಗಳವಾರ ಕೀವ್‌ಗೆ ಆಗಮಿಸಿದ್ದ ಐರೋಪ್ಯ ರಾಷ್ಟ್ರಗಳ ಮೂವರು ನಾಯಕರು ಬುಧವಾರ ಹಿಂದಿರುಗಿದ್ದಾರೆ.

ಸಂಧಾನದ ನಿರೀಕ್ಷೆ; ಸೆನ್ಸೆಕ್ಸ್‌ ಏರಿಕೆ
ರಷ್ಯಾ-ಉಕ್ರೇನ್‌ ಮಾತುಕತೆಯು ಫ‌ಲಪ್ರದವಾಗಲಿದೆ ಎಂಬ ನಿರೀಕ್ಷೆ ಮುಂಬಯಿ ಷೇರುಪೇಟೆಯಲ್ಲೂ ಸಂಚಲನ ಮೂಡಿಸಿದೆ. ಬುಧವಾರ ಮುಂಬಯಿ ಷೇರುಪೇಟೆ ಸೂಚ್ಯಂಕ 1,039.80 ಅಂಕಗಳ ಏರಿಕೆ ದಾಖಲಿಸಿ 56,816ರಲ್ಲಿ ವಹಿವಾಟು ಅಂತ್ಯಗೊಳಿ ಸಿದೆ. ನಿಫ್ಟಿ 312 ಅಂಕ ಏರಿಕೆಯಾಗಿ 16,975ಕ್ಕೆ ತಲುಪಿದೆ. ಇದೇ ವೇಳೆ, ಬ್ರೆಂಟ್‌ ಕಚ್ಚಾ ತೈಲದ ದರ 100 ಡಾಲರ್‌ಗಿಂತ ಕೆಳಗಿಳಿದಿದ್ದು, ಬುಧವಾರ ಬ್ಯಾರೆಲ್‌ಗೆ 98.51 ಡಾಲರ್‌ ಆಗಿತ್ತು.

ತೈಲ ಖರೀದಿ ನಿರ್ಬಂಧಕ್ಕೆ ವಿರುದ್ಧವಲ್ಲ
ರಷ್ಯಾದಿಂದ ಅಗ್ಗದ ಬೆಲೆಯಲ್ಲಿ ಭಾರತವು ತೈಲ ಖರೀದಿಸಲು ಮುಂದಾಗಿರುವುದು ಅಮೆರಿಕ ವಿಧಿಸಿರುವ ನಿರ್ಬಂಧದ ಉಲ್ಲಂ ಘನೆಯಲ್ಲ ಎಂದು ಬುಧವಾರ ಶ್ವೇತಭವನ ಸ್ಪಷ್ಟಪಡಿಸಿದೆ. ಆದರೆ “ಮುಂದೊಂದು ದಿನ ಇತಿಹಾಸದ ಪುಟಗಳಲ್ಲಿ ಈ ಯುದ್ಧದ ಕುರಿತು ಉಲ್ಲೇಖೀಸುವಾಗ ನಿಮ್ಮ ಸ್ಥಾನ ಎಲ್ಲಿರುತ್ತದೆ ಎಂಬುದನ್ನು ಸ್ವಲ್ಪ ಯೋಚಿಸಿ’ ಎಂದೂ ಹೇಳುವ ಮೂಲಕ ಅಮೆರಿಕವು ಭಾರತ ವನ್ನು ಭಾವನಾತ್ಮಕವಾಗಿ ಬ್ಲ್ಯಾಕ್‌ವೆುàಲ್‌ ಮಾಡಲು ಯತ್ನಿಸಿದೆ.

ಸಮರಾಂಗಣದಲ್ಲಿ
-ತೈಲ ಬೆಲೆ‌ ಇಳಿಸುವ ನಿಟ್ಟಿನಲ್ಲಿ ಎ.8ರಂದು ತನ್ನ ತೈಲ ಮೀಸಲಿನಿಂದ 3 ಲಕ್ಷ ಕಿ.ಲೀ. ಕಚ್ಚಾತೈಲ ಬಿಡುಗಡೆ ಮಾಡುವುದಾಗಿ ಜಪಾನ್‌ ಘೋಷಣೆ
-ಕೀವ್‌ನಲ್ಲಿ ಭಾರೀ ಸ್ಫೋಟ; 2 ವಸತಿ ಕಟ್ಟಡಗಳ ಮೇಲೆ ರಷ್ಯಾ ಪಡೆ ದಾಳಿ- ಇಬ್ಬರು ನಾಗರಿಕರಿಗೆ ಗಾಯ -ಸದ್ಯದಲ್ಲಂತೂ ಉಕ್ರೇನ್‌ ನ್ಯಾಟೋಗೆ ಸೇರ್ಪಡೆಯಾಗುವುದಿಲ್ಲ ಎಂದ ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ -ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ಶಾಂತಿ ಸ್ಥಾಪನೆಯಾಗಬೇಕು ಎನ್ನುವುದು ನಮ್ಮ ಇಚ್ಛೆಯಾಗಿದೆ ಎಂದ ರಷ್ಯಾ
-ಬಿಬಿಸಿ ವೆಬ್‌ಸೈಟ್‌ಗೆ ರಷ್ಯಾನಿರ್ಬಂಧ, ಇನ್ನಷ್ಟು ಮಾಧ್ಯಮಗಳಿಗೆ ನಿಷೇಧ ಹೇರುವುದಾಗಿ ಬೆದರಿಕೆ

ಟಾಪ್ ನ್ಯೂಸ್

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.