ವಿಶ್ವಸಂಸ್ಥೆಯಲ್ಲಿ 55 ದೇಶಗಳ ಬೆಂಬಲ

ಭಾರತಕ್ಕೆ ಸಿಕ್ಕಿತು ಶಾಶ್ವತವಲ್ಲದ ಸದಸ್ಯತ್ವ

Team Udayavani, Jun 27, 2019, 5:44 AM IST

35

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸದಸ್ಯತ್ವ ಪಡೆಯಲು ಶ್ರಮಿಸುತ್ತಿರುವಂತೆಯೇ ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಲಭಿಸಿದೆ. ಎರಡು ವರ್ಷ ಅವಧಿಯ ಶಾಶ್ವತವಲ್ಲದ ಸದಸ್ಯತ್ವ ಪಡೆದುಕೊಳ್ಳುವ ನಿಟ್ಟಿನಲ್ಲಿ ಏಷ್ಯಾ-ಪೆಸಿಫಿಕ್‌ ವಲಯದ 55 ರಾಷ್ಟ್ರಗಳು ಬುಧವಾರ ಬೆಂಬಲ ವ್ಯಕ್ತಪಡಿಸಿವೆ. ಇದಕ್ಕೆ ಪಾಕಿಸ್ಥಾನ ಮತ್ತು ಚೀನ ಆಕ್ಷೇಪ ಮಾಡಿವೆ. ಈ ಸದಸ್ಯತ್ವವನ್ನು 2021-2022ನೇ ಸಾಲಿಗೆ ನೀಡಲಾಗುತ್ತದೆ. ಮುಂದಿನ ವರ್ಷದ ಜೂನ್‌ನಲ್ಲಿ ಚುನಾವಣೆ ನಡೆಯಲಿದೆ. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಐದು ಶಾಶ್ವತವಲ್ಲದ ಸದಸ್ಯ ಸ್ಥಾನಗಳು ಇವೆ.

ಭಾರತಕ್ಕೆ ಒದಗಿ ಬಂದ ಮಹತ್ವದ ವಿಜಯದ ಬಗ್ಗೆ ವಿಶ್ವಸಂಸ್ಥೆಯಲ್ಲಿ ಶಾಶ್ವತ ರಾಯಭಾರೀ ಸಯ್ಯದ್‌ ಅಕ್ಬರುದ್ದೀನ್‌ ಟ್ವೀಟ್ ಮಾಡಿದ್ದಾರೆ. ‘ 2021-2022ನೇ ಸಾಲಿನಿಂದ ಎರಡು ವರ್ಷಗಳವರೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯ ಸ್ಥಾನಕ್ಕೆ ಏಷ್ಯಾ-ಪೆಸಿಫಿಕ್‌ ವಲಯದ 55 ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸಿವೆ. ಇದೊಂದು ಐತಿಹಾಸಿಕ ಹಂತ’ ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಭಾರತಕ್ಕೆ ಬೆಂಬಲ ವ್ಯಕ್ತಪಡಿಸಿದ ಎಲ್ಲಾ ರಾಷ್ಟ್ರಗಳ ಪ್ರತಿನಿಧಿಗಳಿಗೆ ಅಕ್ಬರುದ್ದೀನ್‌ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ, ಭೂತಾನ್‌, ಇಂಡೋನೇಷ್ಯಾ, ಇರಾನ್‌, ಜಪಾನ್‌, ಕುವೈತ್‌, ಕಿರ್ಗಿಸ್ತಾನ, ಮಲೇಷ್ಯಾ, ಮಾಲ್ಡೀವ್ಸ್‌, ಮ್ಯಾನ್ಮಾರ್‌, ನೇಪಾಳ, ಕತಾರ್‌, ಸೌದಿ ಅರೇಬಿಯಾ, ಶ್ರೀಲಂಕಾ, ಸಿರಿಯಾ, ಟರ್ಕಿ, ಯುಎಇ ಮತ್ತು ವಿಯೆಟ್ನಾಂ ಸೇರಿದಂತೆ ಹಲವು ದೇಶಗಳು ಭಾರತ ಉಮೇದುವಾರಿಕೆಗೆ ಬೆಂಬಲಿಸಿವೆ.

193 ರಾಷ್ಟ್ರಗಳ ಸದಸ್ಯತ್ವ ಇರುವ ಸಾಮಾನ್ಯ ಸಭೆ ಪ್ರತಿ ವರ್ಷ 2 ವರ್ಷಗಳ ಅವಧಿಗೆ ಶಾಶ್ವತವಲ್ಲದ ಸದಸ್ಯ ರಾಷ್ಟ್ರಗಳನ್ನು ಆಯ್ಕೆ ಮಾಡುತ್ತದೆ. ಒಟ್ಟು ಹತ್ತು ಸ್ಥಾನಗಳು ಅದರಲ್ಲಿವೆ. ಅವುಗಳನ್ನು ಪ್ರಾದೇಶಿಕವಾಗಿ ಹಂಚಲಾಗಿದೆ. ಅಂದರೆ ಐದು ಸ್ಥಾನಗಳನ್ನು ಆಫ್ರಿಕ ಮತ್ತು ಏಷ್ಯಾ ರಾಷ್ಟ್ರಗಳಿಗೆ, ಒಂದು ಸ್ಥಾನವನ್ನು ಈಶಾನ್ಯ ಐರೋಪ್ಯ ರಾಷ್ಟ್ರಗಳಿಗೆ, ಎರಡು ಸ್ಥಾನಗಳನ್ನು ಲ್ಯಾಟಿನ್‌ ಅಮೆರಿಕ ಮತ್ತು ಕೆರೆಬಿಯನ್‌ ದ್ವೀಪಗಳಿಗೆ, ಎರಡನ್ನು ಐರೋಪ್ಯ ಮತ್ತು 1 ಸ್ಥಾನವನ್ನು ಇತರ ರಾಷ್ಟ್ರಗಳಿಗೆ ನೀಡಲಾಗಿದೆ.

ಹಿಂದಿನ ಅವಧಿಯಲ್ಲಿ: ಭಾರತ ಈ ಹುದ್ದೆಯನ್ನು 1950ರಿಂದ ಹಲವು ಬಾರಿ ವಹಿಸಿತ್ತು. ಹಾಲಿ ಕೇಂದ್ರ ಸಚಿವ ಹರ್ದೀಪ್‌ ಸಿಂಗ್‌ ಪುರಿ 2011, 2012ರಲ್ಲಿ ಭಾರತದ ಪ್ರತಿನಿಧಿಯಾಗಿ ತೆರಳಿದ್ದರು.

ಈ ತಿಂಗಳ ಆರಂಭದಲ್ಲಿ ಎಸ್ಟೋನಿಯಾ, ನೈಗರ್‌, ಸೇಂಟ್ ವಿನ್ಸೆಂಟ್ ಮತ್ತು ಗ್ರೆನೇಡಿನ್ಸ್‌, ಟ್ಯುನೀಷ್ಯಾ ಮತ್ತು ವಿಯೆಟ್ನಾಂ 2020ರ ಜನವರಿಯಿಂದ ಶುರುವಾಗುವ 2 ವರ್ಷಗಳ ಅವಧಿಗೆ ಆಯ್ಕೆಯಾಗಿದ್ದವು. ಸದ್ಯ ಶಾಶ್ವತವಲ್ಲದ ಸದಸ್ಯ ರಾಷ್ಟ್ರಗಳ ಹುದ್ದೆಗಳಲ್ಲಿ ಬೆಲ್ಜಿಯಂ, ಕುವೈತ್‌, ಪೆರು, ಪೋಲಂಡ್‌ ಮತ್ತು ದಕ್ಷಿಣ ಆಫ್ರಿಕಾ ಇವೆ.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.