ದ್ವೇಷದ ಕಿಚ್ಚು: ಅಮೆರಿಕ ಕೋರ್ಟಿಗೆ ಹಾಜರಾದ ಕೊಲೆಗಡುಕ ಪ್ಯುರಿಂಟಾನ್‌


Team Udayavani, Feb 28, 2017, 3:44 PM IST

Justice-symbol-600.jpg

ಹ್ಯೂಸ್ಟನ್‌ : ಕನ್ಸಾಸ್‌ ಪಬ್‌ನಲ್ಲಿ  ಜನಾಂಗೀಯ ದ್ವೇಷದ ಕಿಚ್ಚಿನಲ್ಲಿ  ಹೈದರಾಬಾದ್‌ ಟೆಕ್ಕಿಯನ್ನು ಗುಂಡಿಕ್ಕಿ ಹತ್ಯೆಗೈದು ಇನ್ನಿಬ್ಬರನ್ನು  ತೀವ್ರವಾಗಿ ಗಾಯಗೊಳಿಸಿದ್ದ  51ರ ಹರೆಯದ ಅಮೆರಿಕದ ಮಾಜಿ ನೌಕಾ ಪಡೆ ಯೋಧ ಆ್ಯಡಂ ಪ್ಯುರಿಂಟಾನ್‌, ಈ ಪ್ರಕರಣದಲ್ಲಿ ಮೊದಲ ಬಾರಿಗೆ ಕೋರ್ಟ್‌ನಲ್ಲಿ ಹಾಜರಾಗಿದ್ದಾನೆ.

ಆರೋಪಿ ಪ್ಯುರಿಂಟಾನ್‌ ನಿನ್ನೆ ಸೋಮವಾರ ವಿಡಿಯೋ ಕಾನ್‌ಫ‌ರೆನ್ಸ್‌ ಮೂಲಕ ಜಾನ್‌ಸನ್‌ ಕೌಂಟಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರಾದ. 

ಪ್ಯುರಿಂಟಾನ್‌ ಈಗ ಮೊದಲನೇ ಮಟ್ಟದ ಕೊಲೆ ಆರೋಪ ಮತ್ತು ಎರಡನೇ ಮಟ್ಟದ ಕೊಲೆ ಯತ್ನದ ಆರೋಪ ಎದುರಿಸುತ್ತಿದ್ದು ಇವು ಸಾಬೀತಾದಲ್ಲಿ ಆತನಿಗೆ 50 ವರ್ಷಗಳ ಜೈಲು ಶಿಕ್ಷೆಯಾಗುವ ಸಂಭವವಿದೆ. 

ಕನ್ಸಾಸ್‌ನ ಒಲಾಥೆಯಲ್ಲಿನ ಪಬ್‌ ಒಂದರಲ್ಲಿ ಕಳೆದ ಬುಧವಾರ ರಾತ್ರಿ ಪ್ಯುರಿಂಟಾನ್‌, ದ್ವೇಷದ ಕಿಚ್ಚಿನಲ್ಲಿ  32ರ ಹರೆಯದ ಶ್ರೀನಿವಾಸ ಕುಚಿಬೋಟ್ಲ ಎಂಬ ಭಾತೀಯ ಟೆಕ್ಕಿಯನ್ನು ಗುಂಡಿಕ್ಕಿ ಕೊಂದದ್ದಲ್ಲದೆ ಆಲೋಕ್‌ ಮದಸಾನಿ ಎಂಬ ಇನ್ನೋರ್ವ ಭಾರತೀಯ ಟೆಕ್ಕಿಯನ್ನು ಹಾಗೂ 24ರ ಹರೆಯದ ಅಮೆರಿಕನ್‌ ತರುಣ ಇಯಾನ್‌ ಗ್ರಿಲೋಟ್‌ನನ್ನು ತೀವ್ರವಾಗಿ ಗಾಯಗೊಳಿಸಿದ್ದ. 

ಜಾನ್ಸನ್‌ ಕೌಂಟಿ ಪಬ್ಲಿಕ್‌ ಡಿಫೆಂಡರ್ ಕಾರ್ಯಾಲಯದ ಮಿಚೆಲ್‌ ಡ್ಯುರೆಟ್‌ ಅವರು ಪ್ಯುರಿಂಟಾನ್‌ ನ ವಕೀಲರಾಗಿ ವಾದಿಸಲಿದ್ದಾರೆ. 

ಈ ನಡುವೆ ಅಮೆರಿಕದ ಶ್ವೇತಭವನವು ಇದೇ ಮೊದಲ ಬಾರಿಗೆ, ದ್ವೇಷದ ಕಿಚ್ಚಿನಲ್ಲಿ ನಡೆದ ಕುಚಿಬೋಟ್ಲ ಹತ್ಯೆ ಕುರಿತಾಗಿ ತನ್ನ ಮೌನವನ್ನು ಮುರಿದ, “ಆರಂಭಿಕ ವರದಿಗಳು ಆಘಾತಕಾರಿಯಾಗಿವೆ’ ಎಂದು ಹೇಳಿದೆ.

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.