ಮುಂಬೈ ದಾಳಿ ಸಂಚುಕೋರ ರಾಣಾ ಹಸ್ತಾಂತರ ಸಾಧ್ಯತೆ
Team Udayavani, Jan 15, 2019, 12:35 AM IST
ವಾಷಿಂಗ್ಟನ್: ಮುಂಬಯಿ ದಾಳಿ ಸಂಚುಕೋರರಲ್ಲೊಬ್ಬನಾದ ಉಗ್ರ ತಹವ್ವುರ್ ಹುಸೇನ್ ರಾಣಾನನ್ನು ಅಮೆರಿಕದಿಂದ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಈತ ಅಮೆರಿಕದಲ್ಲಿ 14 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದು, 2021ರಲ್ಲಿ ಈತನ ಶಿಕ್ಷೆ ಅವಧಿ ಮುಗಿಯಲಿದೆ. ಈತನ ಶಿಕ್ಷೆ ಅವಧಿ ಮುಗಿಯುವ ಮುನ್ನವೇ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ದಟ್ಟವಾಗಿದೆ. ಪಾಕ್ ಮೂಲದ ಕೆನಡಾ ಪ್ರಜೆ ರಾಣಾ ನನ್ನು 2009ರಲ್ಲಿ ಬಂಧಿಸಲಾಗಿತ್ತು. ಈತ ಲಷ್ಕರ್ ಎ ತೋಯ್ಬಾ ಉಗ್ರರ ಜತೆ ಸಂಪರ್ಕದಲ್ಲಿದ್ದ ಎಂಬ ಕಾರಣಕ್ಕೆ ಬಂಧಿಸಲಾಗಿತ್ತು. ಇದೇ ವೇಳೆ ಮುಂಬೈ ದಾಳಿ ಸಂಚಿನಲ್ಲಿ ಪಾತ್ರ ವಹಿಸಿದ್ದ ಇನ್ನೊಬ್ಬ ಉಗ್ರ ಡೇವಿಡ್ ಹೆಡ್ಲಿಯನ್ನೂ ಭಾರತಕ್ಕೆ ಹಸ್ತಾಂತರಿಸ ಬೇಕೆಂದು ಭಾರತೀಯ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಡೊನಾಲ್ಡ್ ಟ್ರಂಪ್ ಸರಕಾರವು ಈ ವಿಚಾರದಲ್ಲಿ ಭಾರತಕ್ಕೆ ಸಂಪೂರ್ಣ ನೆರವು ನೀಡುತ್ತಿದೆ. ಈಗಾಗಲೇ ಮುಂಬೈ ದಾಳಿ ವಿಚಾರದಲ್ಲಿ ಈತ ಶಿಕ್ಷೆ ಅನುಭವಿಸುತ್ತಿರುವುದರಿಂದ ಡಿಫೆನ್ಸ್ ಕಾಲೇಜು, ಚಾಬಾದ್ ಹೌಸ್ ಸ್ಫೋಟ ಸಂಚು ಪ್ರಕರಣ ದಲ್ಲಿ ಈತನ ಹಸ್ತಾಂತರಕ್ಕೆ ಅಮೆರಿಕ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ