ಚೀನದ ಸುಖೋಯ್ ಯುದ್ಧವಿಮಾನವನ್ನು ಹೊಡೆದುರುಳಿಸಿದ ತೈವಾನ್‌!


Team Udayavani, Sep 4, 2020, 4:31 PM IST

Taiwan

ತೈಪೆ (ತೈವಾನ್‌ ): ತನ್ನ ಭೂ ಪ್ರದೇಶದತ್ತ ಮುನ್ನುಗ್ಗಿ ಬಂದ ಚೀನದ ಸುಖೋಯ್‌ ವಿಮಾನವನ್ನು ತೈವಾನ್‌ ಹೊಡೆದುರುಳಿಸಿದೆ ಎಂದು ಮಾಧ್ಯಮ ವರದಿ ಮಾಡಿವೆ.

ಫೈಟರ್‌ ಜೆಟ್‌ ನೆಲಸಮಗೊಂಡಿದ್ದು, ಅದರ ಪೈಲಟ್‌ ಅಪಾಯದಿಂದ ಪಾರಾಗಿದ್ದಾರೆ. ಅಪಘಾತಕ್ಕೀಡಾದ ವಿಮಾನದ ಕೆಲವು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗುತ್ತಿವೆ. ಆದರೆ ಉಭಯ ದೇಶಗಳು ಅದನ್ನು ದೃಢಪಡಿಸಿಲ್ಲ.

ಕಳೆದ ಕೆಲವು ತಿಂಗಳುಗಳಲ್ಲಿ ಚೀನ ಹಲವಾರು ಬಾರಿ ಸಮುದ್ರ ಮತ್ತು ವಾಯು ಗಡಿಯನ್ನು ಉಲ್ಲಂ ಸಿದೆ. ಈ ಮೂಲಕ ಪರೋಕ್ಷವಾಗಿ ತೈವಾನ್‌ಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದೆ. ಗುರುವಾರ ಚೀನದ ಫೈಟರ್‌ ಜೆಟ್‌ ತೈವಾನ್‌ ವಾಯು ಶ್ರೇಣಿಯನ್ನು ಪ್ರವೇಶಿಸಿತ್ತು.

ಅಮೆರಿಕ ಕ್ಷಿಪಣಿ ಬಳಕೆ !
ಮಾಧ್ಯಮ ವರದಿಗಳ ಪ್ರಕಾರ, ತೈವಾನ್‌ ಯುಎಸ್‌ ಕ್ಷಿಪಣಿಯನ್ನು ಚೀನದ ಸುಖೋಯ್‌ ವಿಮಾನವನ್ನು ಹೊಡೆದುರುಳಿಸಲು ಬಳಸಿದೆ ಎಂದು ಹೇಳಲಾಗುತ್ತಿದೆ. ಆದರೆ ಇದು ಯಾವ ಕ್ಷಿಪಣಿ ಎಂಬುದು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ. ಈ ಘಟನೆ ಬಳಿಕ ಚೀನ ಮತ್ತು ತೈವಾನ್‌ ನಡುವೆ ಉದ್ವಿಗ್ನತೆ ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಚೀನ ಸಮುದ್ರದಲ್ಲಿ ಅಮೆರಿಕ ಸೈನ್ಯ ಸಕಲ ಸಿದ್ಧತೆಯೊಂದಿಗೆ ಬಲಿಷ್ಠವಾಗಿದ್ದು, ನಿಮಿಟ್ಜ್ ಯುದ್ಧನೌಕೆಯನ್ನು ಅಲ್ಲಿ ನಿಯೋಜಿಸಲಾಗಿದೆ. ಅದರಲ್ಲಿ 120 ಫೈಟರ್‌ ಜೆಟ್‌ಗಳನ್ನು ನಿಯೋಜಿಸಲಾಗಿದೆ.

ಆದರೆ ಇವೆಲ್ಲದರ ನಡುವೆ ದಕ್ಷಿಣ ಚೀನ ಸಮುದ್ರದಲ್ಲಿ ಚೀನದ ಬೆದರಿಕೆಗಳು ಕಾರ್ಯರೂಪಕ್ಕೆ ಬರುವುದಿಲ್ಲ ಎಂದು ಅಮೆರಿಕ ಸ್ಪಷ್ಟಪಡಿಸಿದೆ.
ಸಿಎನ್‌ಎನ್‌ ವರದಿ ಮಾಡುವ ಪ್ರಕಾರ ರವಿವಾರ, ಅಮೆರಿಕ ತನ್ನ ಮಾರ್ಗದರ್ಶಿ ಕ್ಷಿಪಣಿ ನಾಶಕ (Guided Missile Destroyer) ವನ್ನು ತೈವಾನ್‌ನ ಸ್ಟ್ರಾಟ್‌ ಎಂಬ ಪ್ರದೇಶದಲ್ಲಿ ನಿಯೋಜಿಸಿತ್ತು. ಅಮೆರಿಕ ಇದನ್ನು ಮೊದಲು ಘೋಷಿಸಿರಲಿಲ್ಲ. ಆದರೆ ಅಮೆರಿಕ ಎರಡು ವಾರಗಳಲ್ಲಿ ಎರಡನೇ ಬಾರಿಗೆ ದಕ್ಷಿಣ ಚೀನ ಸಮುದ್ರಕ್ಕೆ ಈ ಕ್ಷಿಪಣಿಯನ್ನು ಕಳುಹಿಸಿತ್ತು. ತೈವಾನ್‌ ಮೇಲೆ ದಾಳಿ ನಡೆದರೆ ಅಮೆರಿಕ ಮೌನವಾಗಿ ಕುಳಿತುಕೊಳ್ಳುವುದಿಲ್ಲ ಎಂದು ಯುಎಸ್‌ ಕಳೆದ ವಾರ ಸ್ಪಷ್ಟಪಡಿಸಿದೆ.

 

 

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.