ಸುಮಾರು 200 ಮಂದಿ ಮೂಲ ಅಮೆರಿಕರನ್ನು ತಮ್ಮ ದೇಶಕ್ಕೆ ಕಳುಹಿಸಲು ಅನುಮತಿಸಿದ ಉಗ್ರ ಸರ್ಕಾರ.!?
200 ಮಂದಿ ಅಮೆರಿಕಾದ ಮೂಲ ವಾಸಿಗಳನ್ನು ಒಳಗೊಂಡು ಹಲವು ವಿದೇಶಿ ಪ್ರಜೆಗಳಿಗೆ ತಮ್ಮ ತಮ್ಮ ದೇಶಗಳಿಗೆ ವಾಪಾಸ್ ತೆರಳಲು ತಾಲಿಬಾನ್ ಒಪ್ಪಿಗೆ
Team Udayavani, Sep 9, 2021, 1:39 PM IST
ಪ್ರಾತಿನಿಧಿಕ ಚಿತ್ರ
ಕಾಬೂಲ್ :ತಾಲಿಬಾನ್ ಉಗ್ರ ಸಂಘಟನೆ ಅಫ್ಗಾನಿಸ್ತಾನವನ್ನು ವಶಪಡಿಸಿಕೊಂಡು, ಶರಿಯಾ ಶಕೆ ಆರಂಭ ಮಾಡಿದ ಬೆನ್ನಿಗೆ, ಉಗ್ರ ಪಡೆ ನಡೆಸುತ್ತಿರುವ ಹಿಂಸಾಚಾರವನ್ನು ತಡೆಯಲಾರದೇ, ತಮ್ಮ ದೇಶಗಳಿಗೆ ಮರಳಿ ತೆರಳಲು ಹಲವು ದಿನಗಳಿಂದ ಕಾದು ಕುಳಿತಿದ್ದ ಸುಮಾರು 200 ಮಂದಿಗೆ ತಾಲಿಬಾನ್ ಉಗ್ರ ಸಂಘಟನೆ ತಮ್ಮ ದೇಶಕ್ಕೆ ತೆರಳಲು ಅನುಮತಿ ಸೂಚಿಸಿದೆ.
ಕಾಬೂಲ್ ವಿಮಾನ ನಿಲ್ದಾಣದಿಂದ ಸುಮಾರು 200 ಮಂದಿ ಅಮೆರಿಕಾದ ಮೂಲ ವಾಸಿಗಳನ್ನು ಒಳಗೊಂಡು ಇನ್ನೂ ಅಫ್ಗಾನಿಸ್ತಾನದಲ್ಲಿ ಉಳಿದುಕೊಂಡಿರುವ ಇತರೆ ದೇಶಗಳ ಪ್ರಜೆಗಳಿಗೆ ತಮ್ಮ ತಮ್ಮ ದೇಶಗಳಿಗೆ ಚಾರ್ಟರ್ ವಿಮಾನಗಳ ಮೂಲಕ ಹೋಗಲು ಅನುಮತಿಸಿದೆ ಎಂದು ಯುಎಸ್ ನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ : ಗಣೇಶನಿಗೆ ಇಷ್ಟವಾದ ಮೋದಕ ಮಾಡುವುದು ಹೇಗೆ ಎಂದು ನಿಮಗೆ ಗೊತ್ತಿದೆಯಾ..? ಇಲ್ಲಿದೆ ಮಾಹಿತಿ
ಯುಎಸ್ ತನ್ನ ಸೇನೆಯನ್ನು ಸಂಪೂರ್ಣವಾಗಿ ವಾಪಾಸ್ ಕರೆಸಿಕೊಂಡ ಕೆಲವು ದಿನಗಳ ನಂತರ ಅಫ್ಗಾನಿಸ್ತಾನದಲ್ಲಿ ಉಳಿದಿದ್ದ ಮೂಲ ಅಮೆರಿಕನ್ನರನ್ನು ಕಳುಹಿಸಿಕೊಡಲು ತಾಲಿಬಾನ್ ಉಗ್ರ ಸರ್ಕಾರ ನಿರ್ಧರಿಸಿದೆ ಎಂದು ವರದಿಯಾಗಿದೆ.
ಅಫ್ಗಾನಿಸ್ತಾನದಿಂದ ನಿರ್ಗಮನಕ್ಕೆ ಅವಕಾಶ ನೀಡುವಂತೆ ಅಮೆರಿಕಾದ ಅಧಿಕಾರಿಯೊಬ್ಬರು ತಾಲಿಬಾನ್ ಉಗ್ರ ಸಂಘಟನೆಯ ವಿಶೇಷ ಪ್ರತಿನಿಧಿ ಝಲ್ಮಯ್ ಖಲೀಲ್ಜಾದ್ ಅವರನ್ನು ಒತ್ತಾಯಿಸಿದ ಹಿನ್ನೆಲೆಯಲ್ಲಿ ಈ ಅನುಮತಿ ದೊರಕಿದೆ ಎಂದು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.
ಇನ್ನು, ಮಜರ್-ಇ-ಷರೀಫ್ ನಲ್ಲಿ ತಾಲಿಬಾನ್ ಉಗ್ರ ಸಂಘಟನೆಯ ಹಿಂಸಾಚಾರದ ಪರಿಣಾಮದಿಂದಾಗಿ ಸಿಲುಕಿಕೊಂಡವರು ಇದ್ದಾರೆಯೇ ಎಂದು ರಾಯಿಟರ್ಸ್ ಕೇಳಿದ ಪ್ರಶ್ನೆಗೆ ಅಧಿಕಾರಿ, ಉತ್ತರಿಸಲು ಸಾಧ್ಯವಿಲ್ಲವೆಂದು ಪ್ರತಿಕ್ರಿಯಿಸಿರುವುದಾಗಿಯೂ ಕೂಡ ವರದಿ ತಿಳಿಸಿದೆ.
ಇದನ್ನೂ ಓದಿ : ತಾಲಿಬಾನ್ ಆಡಳಿತದ ವಿರುದ್ಧ ತೀವ್ರಗೊಂಡ ಪ್ರತಿಭಟನೆ; ಕಾಬೂಲ್ ನಲ್ಲಿ ಇಂಟರ್ನೆಟ್ ಸ್ಥಗಿತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ
America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್ ಬೈಬಲ್ ಮಾರಾಟ!
Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ
Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್ ಸಲಿಂಗಿ ಜೋಡಿ ಬ್ರೇಕಪ್!
H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ