ಝಾಕಿರ್ ಗಡಿಪಾರು ವಿಚಾರ ಕುರಿತು ಚರ್ಚೆ
ಮಲೇಷ್ಯಾ ಪ್ರಧಾನಿ ಮಹತಿರ್ ಜೊತೆ ಮೋದಿ ಮಾತುಕತೆ
Team Udayavani, Sep 6, 2019, 5:50 AM IST
ಮಾಸ್ಕೋ: ವಿವಾದಿತ ಧರ್ಮ ಪ್ರಚಾರಕ ಝಾಕಿರ್ ನಾಯ್ಕ ಗಡಿಪಾರು ವಿಚಾರ ಕುರಿತಂತೆ ಮಲೇಷ್ಯಾ ಪ್ರಧಾನಿ ಮಹತಿರ್ ಮೊಹಮ್ಮದ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು, ನಾಯ್ಕ ಗಡಿಪಾರು ಮಾಡಲು ಆದೇಶಿಸುವಂತೆ ಮನವಿ ಮಾಡಿದ್ದಾರೆ.
ರಷ್ಯಾದ ವ್ಲಾಡಿವೊಸ್ಟೋಕ್ನಲ್ಲಿ ನಡೆದ ಈಸ್ಟರ್ನ್ ಎಕನಾಮಿಕ್ ಫೋರಂ ವೇಳೆ ಎರಡೂ ದೇಶದ ನಾಯಕರು ಮಾತುಕತೆ ನಡೆಸಿದ್ದು, ಈ ವೇಳೆ ನಾಯ್ಕ ವಿಚಾರ ಚರ್ಚೆಗೆ ಬಂದಿದೆ. ಇದೇ ವೇಳೆ ಜಮ್ಮು ಕಾಶ್ಮೀರದಲ್ಲಿ ಭಾರತದ ಕ್ರಮದ ಬಗ್ಗೆಯೂ ಮಹತಿರ್ಗೆ ಮೋದಿ ವಿವರಿಸಿದ್ದು, ಪರಿಣಾಮಕಾರಿ ಆಡಳಿತ ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಇದು ಅತ್ಯಂತ ಅಗತ್ಯದ ನಿರ್ಧಾರವಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಜಪಾನ್ ಪ್ರಧಾನಿ ಶಿನ್ಜೋ ಅಬೆ ಅವರೊಂದಿಗೂ ಮೋದಿ ಮಾತುಕತೆ ನಡೆಸಿದ್ದಾರೆ.
ಭಾರತ-ರಷ್ಯಾದ ಸಂಬಂಧದಲ್ಲಿ ಹೊಸ ಶಕೆ: ಭಾರತ ಮತ್ತು ರಷ್ಯಾ ಸಂಬಂಧದಲ್ಲಿ ಹೊಸ ಶಕೆಯನ್ನು ನಾವು ಆರಂಭಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 5ನೇ ಈಸ್ಟರ್ನ್ ಎಕನಾಮಿಕ್ ಫೋರಂನಲ್ಲಿ ಮಾತನಾಡಿದ ಅವರು ಚೆನ್ನೈ ಮತ್ತು ವ್ಲಾಡಿವೋಸ್ಕೋಕ್ಗೆ ಸರಕು ಸಾಗಣೆ ಹಡಗುಗಳ ಸಂಚಾರ ಕುರಿತು ಒಪ್ಪಂದಕ್ಕೆ ಉಭಯ ದೇಶಗಳು ಸಹಿ ಹಾಕಿದ್ದು, ಈ ಹಡಗುಗಳು ಸಂಚಾರ ಆರಂಭಿಸುತ್ತಿದ್ದಂತೆಯೇ ಹೊಸ ಶಕೆಯೊಂದು ಆರಂಭವಾಗಲಿದೆ ಎಂದರು.
ಗಾಂಧಿ-ಟಾಲ್ಸ್ಟಾಯ್ ಸ್ನೇಹ: ರಷ್ಯಾದ ಲೇಖಕ ಲಿಯೋ ಟಾಲ್ಸ್ಟಾಯ್ ಹಾಗೂ ಮಹಾತ್ಮ ಗಾಂಧಿ ಪರಸ್ಪರ ಪ್ರಭಾವ ಹೊಂದಿದ್ದರು. ಇವರ ಸ್ನೇಹದ ಸ್ಫೂರ್ತಿಯನ್ನು ಎರಡೂ ದೇಶಗಳು ಪಡೆದು ದ್ವಿಪಕ್ಷೀಯ ಸಂಬಂಧವನ್ನು ಸುಧಾರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿ 150ನೇ ಜಯಂತಿಯನ್ನು ಇಡೀ ವಿಶ್ವವು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪರಸ್ಪರ ದೇಶಗಳ ಅಭಿವೃದ್ಧಿಯಲ್ಲಿ ಭಾರತ ಮತ್ತು ರಷ್ಯಾ ಹೆಚ್ಚಿನ ಪಾಲುದಾರಿಕೆ ಹೊಂದಿರಬೇಕು ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ