ಝಾಕಿರ್‌ ಗಡಿಪಾರು ವಿಚಾರ ಕುರಿತು ಚರ್ಚೆ

ಮಲೇಷ್ಯಾ ಪ್ರಧಾನಿ ಮಹತಿರ್‌ ಜೊತೆ ಮೋದಿ ಮಾತುಕತೆ

Team Udayavani, Sep 6, 2019, 5:50 AM IST

b-47

ಮಾಸ್ಕೋ: ವಿವಾದಿತ ಧರ್ಮ ಪ್ರಚಾರಕ ಝಾಕಿರ್‌ ನಾಯ್ಕ ಗಡಿಪಾರು ವಿಚಾರ ಕುರಿತಂತೆ ಮಲೇಷ್ಯಾ ಪ್ರಧಾನಿ ಮಹತಿರ್‌ ಮೊಹಮ್ಮದ್‌ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದು, ನಾಯ್ಕ ಗಡಿಪಾರು ಮಾಡಲು ಆದೇಶಿಸುವಂತೆ ಮನವಿ ಮಾಡಿದ್ದಾರೆ.

ರಷ್ಯಾದ ವ್ಲಾಡಿವೊಸ್ಟೋಕ್‌ನಲ್ಲಿ ನಡೆದ ಈಸ್ಟರ್ನ್ ಎಕನಾಮಿಕ್‌ ಫೋರಂ ವೇಳೆ ಎರಡೂ ದೇಶದ ನಾಯಕರು ಮಾತುಕತೆ ನಡೆಸಿದ್ದು, ಈ ವೇಳೆ ನಾಯ್ಕ ವಿಚಾರ ಚರ್ಚೆಗೆ ಬಂದಿದೆ. ಇದೇ ವೇಳೆ ಜಮ್ಮು ಕಾಶ್ಮೀರದಲ್ಲಿ ಭಾರತದ ಕ್ರಮದ ಬಗ್ಗೆಯೂ ಮಹತಿರ್‌ಗೆ ಮೋದಿ ವಿವರಿಸಿದ್ದು, ಪರಿಣಾಮಕಾರಿ ಆಡಳಿತ ಮತ್ತು ಸಾಮಾಜಿಕ ನ್ಯಾಯ ಒದಗಿಸಲು ಇದು ಅತ್ಯಂತ ಅಗತ್ಯದ ನಿರ್ಧಾರವಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ, ಜಪಾನ್‌ ಪ್ರಧಾನಿ ಶಿನ್ಜೋ ಅಬೆ ಅವರೊಂದಿಗೂ ಮೋದಿ ಮಾತುಕತೆ ನಡೆಸಿದ್ದಾರೆ.

ಭಾರತ-ರಷ್ಯಾದ ಸಂಬಂಧದಲ್ಲಿ ಹೊಸ ಶಕೆ: ಭಾರತ ಮತ್ತು ರಷ್ಯಾ ಸಂಬಂಧದಲ್ಲಿ ಹೊಸ ಶಕೆಯನ್ನು ನಾವು ಆರಂಭಿಸುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 5ನೇ ಈಸ್ಟರ್ನ್ ಎಕನಾಮಿಕ್‌ ಫೋರಂನಲ್ಲಿ ಮಾತನಾಡಿದ ಅವರು ಚೆನ್ನೈ ಮತ್ತು ವ್ಲಾಡಿವೋಸ್ಕೋಕ್‌ಗೆ ಸರಕು ಸಾಗಣೆ ಹಡಗುಗಳ ಸಂಚಾರ ಕುರಿತು ಒಪ್ಪಂದಕ್ಕೆ ಉಭಯ ದೇಶಗಳು ಸಹಿ ಹಾಕಿದ್ದು, ಈ ಹಡಗುಗಳು ಸಂಚಾರ ಆರಂಭಿಸುತ್ತಿದ್ದಂತೆಯೇ ಹೊಸ ಶಕೆಯೊಂದು ಆರಂಭವಾಗಲಿದೆ ಎಂದರು.

ಗಾಂಧಿ-ಟಾಲ್ಸ್ಟಾಯ್‌ ಸ್ನೇಹ: ರಷ್ಯಾದ ಲೇಖಕ ಲಿಯೋ ಟಾಲ್ಸ್ಟಾಯ್‌ ಹಾಗೂ ಮಹಾತ್ಮ ಗಾಂಧಿ ಪರಸ್ಪರ ಪ್ರಭಾವ ಹೊಂದಿದ್ದರು. ಇವರ ಸ್ನೇಹದ ಸ್ಫೂರ್ತಿಯನ್ನು ಎರಡೂ ದೇಶಗಳು ಪಡೆದು ದ್ವಿಪಕ್ಷೀಯ ಸಂಬಂಧವನ್ನು ಸುಧಾರಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿ 150ನೇ ಜಯಂತಿಯನ್ನು ಇಡೀ ವಿಶ್ವವು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪರಸ್ಪರ ದೇಶಗಳ ಅಭಿವೃದ್ಧಿಯಲ್ಲಿ ಭಾರತ ಮತ್ತು ರಷ್ಯಾ ಹೆಚ್ಚಿನ ಪಾಲುದಾರಿಕೆ ಹೊಂದಿರಬೇಕು ಎಂದು ಅವರು ಹೇಳಿದ್ದಾರೆ.

ಹಡಗು ನಿರ್ಮಾಣದಲ್ಲಿ ಜಂಟಿ ಸಂಸ್ಥೆ?

ಭಾರತ ಮತ್ತು ರಷ್ಯಾ ಹಡಗು ನಿರ್ಮಾಣ ಕ್ಷೇತ್ರದಲ್ಲಿ ಜಂಟಿ ಸಹಭಾಗಿತ್ವದ ಸಂಸ್ಥೆ ಸ್ಥಾಪಿಸುವ ಕುರಿತು ಚಿಂತನೆ ನಡೆಸಿದ್ದೇವೆ. ಎರಡೂ ದೇಶಗಳು ಸೇರಿ ಹಡಗುಗಳನ್ನು ನಿರ್ಮಾಣ ಮಾಡಬಹುದು ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹೇಳಿದ್ದಾರೆ. ಮೋದಿ ಜೊತೆಗೆ ಮಾತುಕತೆ ನಡೆಸಿದ ಅನಂತರದಲ್ಲಿ ಪುಟಿನ್‌ ಈ ಬಗ್ಗೆ ಮಾತನಾಡಿದ್ದು, ಭಾಗಶಃ ರಷ್ಯನ್ನರು ಈ ಹಡಗುಗಳನ್ನು ನಿರ್ಮಾಣ ಮಾಡುತ್ತಾರೆ, ಅದಕ್ಕೆ ಅಂತಿಮ ಸ್ಪರ್ಶವನ್ನು ಭಾರತೀಯರು ನೀಡುತ್ತಾರೆ ಎಂದು ಪುಟಿನ್‌ ಹೇಳಿದ್ದಾರೆ.

ರಷ್ಯಾಗೆ ಆವ್ಜೋ ದೋ ಸ್ವಿದಾನಿಯಾ ಎಂದ ಮೋದಿ

ಭಾರತ ಮತ್ತು ರಷ್ಯಾ ಮಧ್ಯೆ ಭಾಷಾ ಸಂಬಂಧವೂ ಇದೆ. ಎರಡೂ ದೇಶಗಳಲ್ಲಿ ಪರಸ್ಪರರನ್ನು ಬೀಳ್ಕೊಡುವಾಗ ಒಂದೇ ಭಾವದ ಶುಭಾಶಯಗಳನ್ನು ಹೇಳುತ್ತೇವೆ. ಗುಜರಾತಿ ಭಾಷೆಯಲ್ಲಿ ಆವ್ಜೋ ಎಂದರೆ ಅಂದರೆ ‘ಮತ್ತೆ ಸಿಗೋಣ’ ಎಂದರ್ಥ. ಅದೇ ರೀತಿ ರಷ್ಯಾದಲ್ಲಿ ದೋ ಸ್ವಿದಾನಿಯಾ ಎಂದರೆ ‘ಮುಂದಿನ ಭೇಟಿಯ ತನಕ’ ಎಂದು. ಹೀಗೆ ಹೇಳುತ್ತಲೇ ನಾನು ರಷ್ಯಾಗೆ ಆವ್ಜೋ ದೊ ಸ್ವಿದಾನಿಯಾ ಹೇಳುತ್ತಿದ್ದೇನೆ ಎಂದರು. ಈ ಮಾತಿಗೆ ಸಭೆಯಲ್ಲಿ ಸೇರಿದ್ದ ಜನರು ಭಾರೀ ಕರತಾಡನಗೈದರು. ಎರಡು ದಿನಗಳ ರಷ್ಯಾ ಭೇಟಿಯನ್ನು ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಗುರುವಾರ ಭಾರತಕ್ಕೆ ಮರಳಿದ್ದಾರೆ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.