ಬಾಂಧವ್ಯ ವೃದ್ಧಿಗಾಗಿ ಮಾತುಕತೆ; ಪ್ರಮುಖ ನಾಯಕರ ಜತೆಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ


Team Udayavani, Nov 17, 2022, 7:20 AM IST

ಬಾಂಧವ್ಯ ವೃದ್ಧಿಗಾಗಿ ಮಾತುಕತೆ; ಪ್ರಮುಖ ನಾಯಕರ ಜತೆಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ

ಜಿ20 ರಾಷ್ಟ್ರಗಳ ಸಮ್ಮೇಳನದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಮುಖ ರಾಷ್ಟ್ರಗಳ ನಾಯಕರ ಜತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದ್ದಾರೆ. ಬ್ರಿಟನ್‌, ಫ್ರಾನ್ಸ್‌, ಜರ್ಮನಿ, ಆಸ್ಟ್ರೇಲಿಯಾ,ಇಟಲಿಯ ಪ್ರಧಾನಮಂತ್ರಿ ಗಳು ಹಾಗೂ ಅಧ್ಯಕ್ಷರ ಜತೆಗೆ ಮಾತುಕತೆಗಳನ್ನು ನಡೆಸಿದ್ದಾರೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ದೇಶಕ್ಕೆ ಹಲವು ರೀತಿಗಳಲ್ಲಿ ಅನುಕೂಲವೂ ಆಗಲಿದೆ.

ಭಾರತಕ್ಕೆ 3 ಸಾವಿರ ವೀಸಾ ಕೊಡುಗೆ
ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಮತ್ತು ಭಾರತದ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಯು.ಕೆ.ವತಿಯಿಂದ 18-30 ವರ್ಷ ವಯೋಮಿತಿ ಯವರಿಗೆ ಪ್ರತೀ 3 ಸಾವಿರ ವೀಸಾಗಳನ್ನು ನೀಡುವ ಬಗ್ಗೆ ರಿಷಿ ಸುನಕ್‌ ಘೋಷಣೆ ಮಾಡಿದ್ದಾರೆ.

ಇದರಿಂದಾಗಿ ಯು.ಕೆ.ಯಲ್ಲಿ ಶಿಕ್ಷಣ ಪೂರ್ತಿ ಗೊಳಿಸಿ 2 ವರ್ಷಗಳ ವರೆಗೆ ಕಾನೂನುಬದ್ಧವಾಗಿ ಕೆಲಸ ಮಾಡಲು ಅವಕಾಶ ಸಿಗಲಿದೆ. ವ್ಯಾಪಾರ, ವಾಣಿಜ್ಯ, ರಕ್ಷಣೆ ಮತ್ತು ಭದ್ರತಾ ಕ್ಷೇತ್ರಗಳಲ್ಲಿ ಎರಡೂ ದೇಶಗಳು ಹೊಂದಿರುವ ಸಹಕಾರವನ್ನು ಮತ್ತಷ್ಟು ವೃದ್ಧಿಸಲು ಉಭಯ ನಾಯಕರು ನಿರ್ಧರಿಸಿದ್ದಾರೆ. ರಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಸುಧಾರಣೆಯನ್ನು ಭಾರತ ಬಯಸುತ್ತಿದೆ. ಈ ನಿಟ್ಟಿನಲ್ಲಿ ಯು.ಕೆ. ಯ ನೆರವು ಅಗತ್ಯವಾಗಿದೆ ಎಂದು ಪ್ರಧಾನಿ ಟ್ವೀಟ್‌ ಮಾಡಿದ್ದಾರೆ. 2030ರ ಒಳಗಾಗಿ ಬಾಂಧವ್ಯ ಸುಧಾರಣೆಯ ನಿಟ್ಟಿನಲ್ಲಿ ಇರುವ ಮಾರ್ಗಸೂಚಿ ಅನುಷ್ಠಾನಗೊಳಿಸುವ ಬಗ್ಗೆಯೂ ಚರ್ಚೆ ನಡೆಸಿದ್ದಾರೆ.

ಜರ್ಮನಿ ಜತೆಗೆ ಆರ್ಥಿಕ, ರಕ್ಷಣೆ ಸಹಕಾರ
ಜರ್ಮನಿಯ ಚಾನ್ಸಲರ್‌ ಒಲಾಫ್ ಶೋಲ್ಜ್ ಜತೆಗಿನ ಮಾತುಕತೆ ವೇಳೆ ಆರ್ಥಿಕ ಮತ್ತು ರಕ್ಷಣ ಕ್ಷೇತ್ರದಲ್ಲಿ ಸಹಕಾರ ವೃದ್ಧಿಸುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಪ್ರಧಾನಿ ಮೋದಿಯವರು ಶೋಲ್ಜ್ ಜತೆಗಿನ ಮಾತುಕತೆ ತೃಪ್ತಿದಾಯಕವಾಗಿತ್ತು ಎಂದು ಟ್ವೀಟ್‌ ಮಾಡಿದ್ದಾರೆ.

ವ್ಯಾಪಾರ, ರಕ್ಷಣ ಸಹಕಾರ, ವಿತ್ತೀಯ ಕ್ಷೇತ್ರಗಳಲ್ಲಿ ಬಾಂಧವ್ಯ ವೃದ್ಧಿಗೆ ನಿರ್ಧರಿಸಲಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ. ಮೋದಿ ಮತ್ತು ಶೋಲ್ಜ್ ನಡುವೆ ಹಾಲಿ ವರ್ಷದಲ್ಲಿ ಮೂರನೇ ಭೇಟಿಯಾಗಿದೆ. ಮೇ 2ರಂದು ಬರ್ಲಿನ್‌ನಲ್ಲಿ ಮೊದಲ ಬಾರಿಗೆ ಇಬ್ಬರ ನಡುವೆ ಮಾತುಕತೆಗಳು ನಡೆದಿತ್ತು.

ಜಗತ್ತಿನ ಅಭ್ಯುದಯಕ್ಕಾಗಿ ಬಾಂಧವ್ಯ
ಜಗತ್ತಿನ ಅಭ್ಯುದಯಕ್ಕಾಗಿ ಭಾರತ ಮತ್ತು ಫ್ರಾನ್ಸ್‌ ನಡುವೆ ಉತ್ತಮ ರೀತಿಯ ಬಾಂಧವ್ಯ ಹೊಂದಿರಬೇಕು ಎಂದು ನರೇಂದ್ರ ಮೋದಿ ಮತ್ತು ಇಮ್ಯಾನ್ಯುವೆಲ್‌ ಮ್ಯಾಕ್ರನ್‌ ಪ್ರತಿಪಾದಿಸಿದ್ದಾರೆ.

ಪ್ರಧಾನಿ ಮೋದಿ ಗೌರವಾರ್ಥ ಫ್ರಾನ್ಸ್‌ನ ಅಧ್ಯಕ್ಷರು ಭೋಜನಕೂಟವವನ್ನೂ ಏರ್ಪಡಿಸಿದ್ದರು. ರಕ್ಷಣೆ, ಇಂಧನ, ವ್ಯಾಪಾರ ಮತ್ತು ಆಹಾರ ಭದ್ರತಾ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಮ್ಯಾಕ್ರನ್‌ ಸಹಕಾರ ವೃದ್ಧಿಗೊಳಿಸಲು ಒಪ್ಪಿಕೊಂಡಿದ್ದಾರೆ. ಆಹಾರ ಮತ್ತು ಇಂಧನ ಪೂರೈಕೆ ಬಿಕ್ಕಟ್ಟು ತಗ್ಗಿಸುವ ನಿಟ್ಟಿನಲ್ಲಿ ಮಾರ್ಗೋಪಾಯಗಳನ್ನೂ ಪರಿಶೀಲಿಸಿದ್ದಾರೆ.

ವ್ಯೂಹಾತ್ಮಕ ಬಾಂಧವ್ಯಕ್ಕೆ ನಿರ್ಧಾರ
ಭಾರತದ ಜತೆಗೆ ವ್ಯೂಹಾತ್ಮಕ ಬಾಂಧವ್ಯ ಹೊಂದಲು ಬಯಸುವುದಾಗಿ ಆಸ್ಟ್ರೇಲಿ ಯಾದ ಪ್ರಧಾನಿ ಆ್ಯಂಟನಿ ಅಲ್ಬನೀಸ್‌ ಹೇಳಿ ದ್ದಾರೆ. ಬಾಲಿಯಲ್ಲಿ ಪ್ರಧಾನಿ ಮೋದಿ ಯವರನ್ನು ಭೇಟಿಯಾದ ವೇಳೆ ಅವರು ಈ ಅಂಶ ವ್ಯಕ್ತಪಡಿಸಿದ್ದಾರೆ.

ಭೇಟಿಯ ಬಳಿಕ ಟ್ವೀಟ್‌ ಮಾಡಿದ ಪ್ರಧಾನಿಯವರು ಎರಡೂ ದೇಶಗಳ ನಡುವೆ ಬಾಂಧವ್ಯ ವೃದ್ಧಿಸುವ ನಿಟ್ಟಿನಲ್ಲಿ ಆಸೀಸ್‌ ಪ್ರಧಾನಿ ಜತೆಗೆ ಚರ್ಚೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಫ‌ಲ ನೀಡಲಿದೆ ಎಂದು ಬರೆದುಕೊಂಡಿದ್ದಾರೆ.

ಮೋದಿ ಮಾತಿಗೆ ಮನ್ನಣೆ
ಜಿ20 ರಾಷ್ಟ್ರಗಳ ಸಮ್ಮೇಳ ನದ ಮುಕ್ತಾಯದಲ್ಲಿ ಅಂಗೀಕಾರಗೊಂಡಿರುವ ನಿರ್ಣಯದಲ್ಲಿ ಪ್ರಧಾನಿ ಮೋದಿ ಅವರು ಸೆಪ್ಟಂಬರ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುತಿನ್‌ ಅವರಿಗೆ ಹೇಳಿದ್ದ ಕಿವಿಮಾತು “ಈಗ ಯುದ್ಧದ ಕಾಲ ಅಲ್ಲ’ ಎಂಬ ಅಂಶವನ್ನು ಪ್ರಧಾನವಾಗಿ ಸೇರ್ಪಡೆ ಮಾಡಲಾಗಿದೆ. ಅದನ್ನು ಅಂಗೀಕರಿಸುವ ನಿಟ್ಟಿನಲ್ಲಿ ಖುದ್ದು ಪ್ರಧಾನಿ ನರೇಂದ್ರ ಮೋದಿ ಮತ್ತು ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಸದಸ್ಯ ರಾಷ್ಟ್ರಗಳ ನಾಯಕರ ಜತೆಗೆ ಬಿರುಸಿನ ಸಮಾಲೋ ಚನೆ ನಡೆಸಿದ್ದರು. ಉಕ್ರೇನ್‌ ಬಿಕ್ಕಟ್ಟು ಮುಕ್ತಾಯಕ್ಕೆ ಶಾಂತಿಯುತ ಮಾರ್ಗವೇ ಸೂಕ್ತ ಎಂಬ ಅಂಶವನ್ನು ನಿರ್ಣಯದಲ್ಲಿ ಪ್ರಧಾನವಾಗಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

Israel-Iran ಅಣುಯುದ್ಧ? ಇರಾನ್‌ನ ಅಣುಸ್ಥಾವರಗಳ ಮೇಲೆ ದಾಳಿ: ವಿಶ್ವಸಂಸ್ಥೆ ಆತಂಕ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.