ಜೈವಿಕ ಭಯೋತ್ಪಾದನೆಗೆ ಕೋವಿಡ್ ಕುಮ್ಮಕ್ಕು: ವಿಶ್ವಸಂಸ್ಥೆ ಕಳವಳ
Team Udayavani, Apr 11, 2020, 6:11 AM IST
ವಿಶ್ವಸಂಸ್ಥೆ: ಕೋವಿಡ್ ವೈರಸ್ನಿಂದಾಗಿ ಜಗತ್ತಿಗೆ ಜೈವಿಕ ಭಯೋತ್ಪಾದನೆಯ ಮೂಲಕ ದಾಳಿ ನಡೆದರೆ ಯಾವ ರೀತಿಯ ಅನಾಹುತ ಸಂಭವಿಸಬಹುದು ಎಂಬ ಕಲ್ಪನೆ ಜಗತ್ತಿಗೆ ಸಿಕ್ಕಿದಂತಾಗಿದೆ ಎಂದು ವಿಶ್ವಸಂಸ್ಥೆ ಮಹಾ ಪ್ರಧಾನ ಕಾರ್ಯದರ್ಶಿ ಆ್ಯಂಟೊನಿಯೋ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ.
ಸದ್ಯದ ಸಮಸ್ಯೆ ಸಂದರ್ಭದಲ್ಲಿಯೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಇದೇ ಮೊದಲ ಬಾರಿಗೆ ಗುರುವಾರ ಸಭೆ ನಡೆಸಿದೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಸ್ತಾವಿಕವಾಗಿ ಮಾತನಾಡಿದ ವೇಳೆ ಗುಟೆರೆಸ್ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಈ ಅಂಶ ಬೀಭತ್ಸ ಕೃತ್ಯಗಳನ್ನು ನಡೆಸಲು ಒಂದು ಅವಕಾಶ ಮಾಡಿಕೊಟ್ಟಂತಾಗಿದೆ ಎಂದಿದ್ದಾರೆ.
ಸೋಂಕಿನ ದುಷ್ಪರಿಣಾಮವನ್ನು ಎದುರಿಸಲು ವಿಫಲರಾಗಿದ್ದು ಇಂಥ ಜೈವಿಕ ಭಯೋತ್ಪಾದನಾ ಕೃತ್ಯಗಳನ್ನು ನಡೆಸುವವರಿಗೆ ಆಹ್ವಾನವಿತ್ತಂತೆ ಆಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಹಾಲಿ ಸ್ಥಿತಿಯನ್ನು ಕೆಲ ಪ್ರತ್ಯೇಕತಾವಾದಿಗಳು ದುರುಪಯೋಗಪಡಿಸಿಕೊಂಡು ಹಿಂಸಾತ್ಮಕ ಕೃತ್ಯಗಳಿಗೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ. ಅದರ ಬಗ್ಗೆ ಸದಸ್ಯ ರಾಷ್ಟ್ರಗಳು ಎಚ್ಚರದಿಂದ ಇರಬೇಕು ಎಂದು ಸಲಹೆ ಮಾಡಿದ್ದಾರೆ.
ಕೋವಿಡ್ ವಿರುದ್ಧದ ಹೋರಾಟ ತಲೆಮಾರಿನ ಹೋರಾಟವಾಗಲಿದೆ. ಸೋಂಕು ಪ್ರಭಾವ ತಗ್ಗಿದ ಅನಂತರ ಉಂಟಾಗಲಿರುವ ಪ್ರಭಾವಗಳು ಘೋರ’ ಎಂದಿದ್ದಾರೆ. ಆದರೆ ಸದ್ಯದ ಸ್ಥಿತಿ ಬಗ್ಗೆ ಯಾವುದೇ ರೀತಿಯ ನಿರ್ಣಯಗಳನ್ನು ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿಲ್ಲ ಎಂದು ಮೂಲಗಳು ಖಚಿತಪಡಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ
Rain: ವರುಣನ ಆರ್ಭಟಕ್ಕೆ ನಲುಗಿದ ದುಬೈ… ವಿಮಾನ ನಿಲ್ದಾಣ ಜಲಾವೃತ, ಜನಜೀವನ ಅಸ್ತವ್ಯಸ್ಥ
MUST WATCH
ಹೊಸ ಸೇರ್ಪಡೆ
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್