ಗುಹೆಬಂದಿ ಬಾಲರಿಗೆ ಆಮ್ಲಜನಕ ಕೊರತೆ


Team Udayavani, Jul 7, 2018, 6:00 AM IST

22.jpg

ಬ್ಯಾಂಕಾಕ್‌: ಥಾಯ್ಲೆಂಡ್‌ನ‌ ಗುಹೆಯಲ್ಲಿ ಸಿಲುಕಿಕೊಂಡ ಫ‌ುಟ್‌ಬಾಲ್‌ ತಂಡದ 12 ಬಾಲಕರು ಮತ್ತು ಕೋಚ್‌ ಅವರನ್ನು ಶೀಘ್ರ ರಕ್ಷಿಸಬೇಕಾದ ಅನಿವಾರ್ಯ ಈಗ ಉಂಟಾಗಿದೆ. ಗುಹೆಯಲ್ಲಿ ಆಮ್ಲಜನಕ ಭಾರೀ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಆರಂಭದಲ್ಲಿ ನೀರಿನ ಮಟ್ಟ ಇಳಿಯುವವರೆಗೆ, ಅಂದರೆ ಮೂರ್‍ನಾಲ್ಕು ತಿಂಗಳವರೆಗೆ ಅವರನ್ನು ಅಲ್ಲೇ ಉಳಿಸುವ ಬಗ್ಗೆ ಥಾಯ್ಲೆಂಡ್‌ ಅಧಿಕಾರಿಗಳು ಯೋಚಿ ಸಿದ್ದರು. ಈಗ ಆಮ್ಲ ಜನಕ ಅಪಾಯಕಾರಿ ಮಟ್ಟ ತಲುಪಿದ್ದು, ರಕ್ಷಣೆ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.

ಮುಳುಗುತಜ್ಞ  ಸಾವು
ಗುಹೆಯಲ್ಲಿದ್ದವರಿಗೆ ಆಮ್ಲಜನಕ ಸಿಲಿಂಡರ್‌ ತಲುಪಿಸಿ ವಾಪಸ್‌ ಬರುತ್ತಿರು ವಾಗ ಆಮ್ಲಜನಕ ಕೊರತೆಯಾಗಿ ನೌಕಾ ಪಡೆ ಮಾಜಿ ಮುಳುಗುತಜ್ಞ ಸಮನ್‌ ಕುನನ್‌ ಸಾವನ್ನಪ್ಪಿದ್ದಾರೆ. ವಾಪಸ್‌ ಬರುವಾಗ ಸಮನ್‌ ಬಳಿ ಸಾಕಷ್ಟು ಪ್ರಮಾಣದ ಆಮ್ಲಜನಕ ಇರಲಿಲ್ಲ ಎಂದು ಹೇಳಲಾಗಿದೆ. ಜತೆಗಿದ್ದ ಮುಳುಗು ತಜ್ಞ ಅವರನ್ನು ರಕ್ಷಿಸಲು ಪ್ರಯತ್ನಿಸಿದರಾದರೂ ಫ‌ಲ ನೀಡಲಿಲ್ಲ. ಈ ಘಟನೆಯಿಂದಾಗಿ ಬಾಲಕರನ್ನು ಸುರಕ್ಷಿತವಾಗಿ ವಾಪಸ್‌ ಕರೆತರುವ ಸಾಧ್ಯತೆಯ ಬಗ್ಗೆ ಆತಂಕ ಮೂಡಿದೆ. ನೌಕಾಪಡೆ ಸೀಲ್‌ನ ಮುಖ್ಯಸ್ಥ ಅಫಾಕೋರ್ನ್ ಯೂ ಕಾಂಗ್‌ಕೇವ್‌ ಹೇಳುವಂತೆ, ಗುಹೆಯಲ್ಲಿ ಆಮ್ಲಜನಕವು ಶೇ.15ರ ಮಟ್ಟಕ್ಕೆ ಕುಸಿದಿದ್ದು, ಇದರಿಂದಾಗಿ ಹೈಪಾಕ್ಸಿಯಾದಂತಹ ರೋಗ ಕಾಣಿಸಿಕೊಳ್ಳಬಹುದಾಗಿದೆ.

ಕೇಬಲ್‌ ಸಂಪರ್ಕಕ್ಕೆ ಪ್ರಯತ್ನ: ಈ ಬಾಲಕರು ತಮ್ಮ ಕುಟುಂಬದವರೊಂದಿಗೆ ಮಾತನಾಡಲು ಮತ್ತು ಹೊರಜಗತ್ತಿಗೆ ಸಂಪರ್ಕ ಸಾಧಿಸಲು ಅನುವಾಗುವುದಕ್ಕಾಗಿ ಒಎಫ್ಸಿ ಕೇಬಲ್‌ ಸಂಪರ್ಕಿಸಲೂ ತಜ್ಞರು ಪ್ರಯತ್ನ ನಡೆಸಿದ್ದಾರೆ. ಜತೆಗೆ ಕೇಬಲ್‌ ಮೂಲಕ ಆಕ್ಸಿಜನ್‌ ಪೂರೈಸುವ ವ್ಯವಸ್ಥೆಯನ್ನೂ ಮಾಡಲಾಗುತ್ತಿದೆ.

ಮತ್ತೆ ಮಳೆ ಭೀತಿ: ಶನಿವಾರ ಹಾಗೂ ರವಿವಾರ ಮತ್ತೆ ಭಾರೀ ಮಳೆ ಸುರಿಯುವ ಭೀತಿಯಿದ್ದು, ನೀರಿನ ಮಟ್ಟ ಗುಹೆಯಲ್ಲಿ ಏರುವ ಸಾಧ್ಯತೆಯಿದೆ. ಸದ್ಯ ಸೇನೆಯು ಗುಹೆಯಲ್ಲಿನ ನೀರನ್ನು ಪಂಪ್‌ ಮೂಲಕ ಹೊರಹಾಕುತ್ತಿದೆ. ಆದರೆ ನೀರಿನ ಮಟ್ಟವನ್ನು ಗಮನಾರ್ಹ ಪ್ರಮಾಣದಲ್ಲಿ ಕಡಿಮೆ ಮಾಡಲು ಸಾಧ್ಯವಾಗಿಲ್ಲ.

ರಕ್ಷಣೆ ಸಾಧ್ಯತೆಯೇನು?: ಸಿಲುಕಿಕೊಂಡಿರುವ ಕೆಲವು ಬಾಲಕರಿಗೆ ಈಜಲೂ ತಿಳಿದಿಲ್ಲ. ಅಲ್ಲದೆ ಅವರಿಗೆ ಈಜುವ ಸಲಕರಣೆಗಳನ್ನು ಧರಿಸಲು ಮತ್ತು ಅದನ್ನು ಬಳಸಿ ಈಜಲು ಹೇಳಿಕೊಟ್ಟು ಹೊರಗೆ ಕರೆತರುವುದು ಅತ್ಯಂತ ಕಷ್ಟಕರವಾಗಿದೆ ಮತ್ತು ಇದು ಅವರ ಸಾವು ಬದುಕಿನ ಪ್ರಶ್ನೆಯೂ ಆಗಲಿದೆ. ಈ ಮಧ್ಯೆಯೇ ಗುಹೆಗೆ ಸಮೀಪದ ಪರ್ವತ ಪ್ರದೇಶಗಳಿಂದ ಇರಬಹುದಾದ ಗುಹೆ ಸಂಪರ್ಕದ ಬಗ್ಗೆಯೂ ಹುಡುಕಾಟ ನಡೆಸಲಾಗುತ್ತಿದೆ. ಈವರೆಗೆ ಇದು ಫ‌ಲ ನೀಡಿಲ್ಲ.

ಟಾಪ್ ನ್ಯೂಸ್

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

imran-khan

Oxford ವಿವಿ ಕುಲಪತಿ: ಇಮ್ರಾನ್‌ ಜೈಲಿಂದ ಸ್ಪರ್ಧೆ!

1-musk

Gender change ಬಗ್ಗೆ ವಿರೋಧ: ಮಸ್ಕ್ ಗೆ ಪುತ್ರಿ ತಿರುಗೇಟು!

1-obamma-aaa

US; ಅದ್ಭುತ ಅಧ್ಯಕ್ಷೆಯಾಗುತ್ತಾರೆ: ಕಮಲಾ ಹ್ಯಾರಿಸ್‌ಗೆ ಒಬಾಮಾ ಸಂಪೂರ್ಣ ಬೆಂಬಲ

kamala-haris

US; ಕಮಲಾ ಹ್ಯಾರಿಸ್‌ಗೆ ಕೊನೆಗೂ ಮಾಜಿ ಅಧ್ಯಕ್ಷ ಒಬಾಮಾ ಬೆಂಬಲ?

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

Bangladesh: ಮಮತಾ ಬ್ಯಾನರ್ಜಿ ವಿರುದ್ಧ ದೂರು ದಾಖಲಿಸಿದ ಬಾಂಗ್ಲಾದೇಶ್ ಸರ್ಕಾರ!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.