ಶಂಕಿತ ಕೊಲೆ ಆರೋಪಿಗಳು ನಿರ್ದೋಷಿ ಎಂದು ತೀರ್ಪು ನೀಡಿದ ಬಳಿಕ ಗುಂಡು ಹೊಡೆದುಕೊಂಡ ಜಡ್ಜ್!


Team Udayavani, Oct 5, 2019, 6:35 PM IST

Judge-Thai

ಬ್ಯಾಂಕಾಕ್:ಹಲವಾರು ಮಂದಿ ಶಂಕಿತ ಕೊಲೆ ಆರೋಪಿಗಳನ್ನು ನಿರ್ದೋಷಿ ಎಂದು ತುಂಬಿದ ಕೋರ್ಟ್ ರೂಂನೊಳಗೆ ತೀರ್ಪು ನೀಡಿದ ಬಳಿಕ ಥಾಯ್ ನ್ಯಾಯಾಧೀಶರು ಎದೆಗೆ ಗುಂಡು ಹೊಡೆದುಕೊಂಡ ಘಟನೆ ಬ್ಯಾಂಕಾಕ್ ನಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.

ಟೀಕಾಕಾರರ ಪ್ರಕಾರ, ಥಾಯ್ ಲ್ಯಾಂಡ್ ಕೋರ್ಟ್ ಶ್ರೀಮಂತರು ಮತ್ತು ಬಲಾಢ್ಯರ ಪರವಾಗಿ ಕೆಲಸ ಮಾಡುತ್ತಿದ್ದು, ಸಣ್ಣ, ಪುಟ್ಟ ತಪ್ಪನ್ನೆಸಗಿದ ಜನಸಾಮಾನ್ಯರಿಗೆ ಕಠಿಣ ಶಿಕ್ಷೆ ನೀಡುತ್ತಿರುವುದಾಗಿ ಆರೋಪಿಸಿದ್ದಾರೆ.

ಗನ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಶಂಕಿತ ಮುಸ್ಲಿಮ್ ಆರೋಪಿಗಳನ್ನು ನಿರ್ದೋಷಿ ಎಂದು ಥಾಯ್ ಯಾಲಾ ಕೋರ್ಟ್ ನ ಜಡ್ಜ್ ಕಾನಾಕೋರ್ನ್ ಪಿಯಾನ್ಚಾನಾ ಅವರು ತೀರ್ಪು ನೀಡಿದ ನಂತರ ಹ್ಯಾಂಡ್ ಗನ್ ತೆಗೆದುಕೊಂಡು ಎದೆಗೆ ಗುಂಡು ಹೊಡೆದುಕೊಂಡಿರುವುದಾಗಿ ವರದಿ ವಿವರಿಸಿದೆ.

ಶುಕ್ರವಾರ ಮಧ್ಯಾಹ್ನ ಈ ತೀರ್ಪು ನೀಡುವ ಮುನ್ನ ಫೇಸ್ ಬುಕ್ ನಲ್ಲಿ, ಯಾರನ್ನೇ ಆಗಲಿ ಶಿಕ್ಷಿಸಲು ಸ್ಪಷ್ಟವಾದ ಮತ್ತು ಸಮರ್ಪಕ ಪುರಾವೆಯ ಅಗತ್ಯವಿದೆ. ಒಂದು ವೇಳೆ ಸಮರ್ಪಕ ದಾಖಲೆ ಇಲ್ಲದಿದ್ದರೆ ಶಿಕ್ಷೆ ನೀಡಲು ಹೋಗಬಾರದು. ಈ ಐವರು ಅಪರಾಧ ಎಸಗಿಲ್ಲ ಎಂದು ಹೇಳುತ್ತಿಲ್ಲ. ಅವರು ಹಾಗೇ ತಪ್ಪನ್ನು ಎಸಗಿರಬಹುದು. ಆದರೆ ನ್ಯಾಯಾಂಗ ವ್ಯವಸ್ಥೆಯಲ್ಲಿ ಪಾರದರ್ಶಕವಾದ ಹಾಗೂ ಸಮರ್ಪಕವಾದ ಪುರಾವೆಯ ಅಗತ್ಯ ಬೇಕಾಗುತ್ತದೆ ಎಂದು ವಿವರಿಸಿದ್ದರು ಎಂದು ಬ್ಯಾಂಕಾಂಗ್ ಪೋಸ್ಟ್ ವರದಿ ಮಾಡಿದೆ.

ರಾಷ್ಟ್ರೀಯ ಭದ್ರತೆ ಮತ್ತು ರಹಸ್ಯ ಸಂಘಟನೆ, ಸಂಚು ಮತ್ತು ಗನ್ ಲಾ ಅಪರಾಧಕ್ಕೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಯನ್ನು ನಡೆಸುತ್ತಿದ್ದರು. ಆದರೆ ಐವರು ಆರೋಪಿಗಳನ್ನು ಖುಲಾಸೆಗೊಳಿಸುವ ಕಾನಾಕೋರ್ನಾ ಅವರ ತೀರ್ಪಿಗೆ ಹಿರಿಯ ನ್ಯಾಯಾಧೀಶರು ಅಸಮ್ಮತಿ ವ್ಯಕ್ತಪಡಿಸಿದ್ದರು.

ತನಗೆ ತಾನೇ ಗುಂಡು ಹೊಡೆದುಕೊಂಡ ನ್ಯಾಯಾಧೀಶರನ್ನು ಆಸ್ಪತ್ರೆಗೆ ದಾಖಲಿಸಿದ್ದು, ವೈದ್ಯರು ಚಿಕಿತ್ಸೆ ನಡೆಸುತ್ತಿದ್ದಾರೆ. ನ್ಯಾಯಾಧೀಶ ಕಾನಾಕೋರ್ನ್ ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಎಎಫ್ ಪಿ ವರದಿ ತಿಳಿಸಿದೆ.

ಜಡ್ಜ್ ಕಾನಾಕೋರ್ನ್ ಅವರು ಮಾನಸಿಕ ಒತ್ತಡದಿಂದ ಗುಂಡು ಹೊಡೆದುಕೊಂಡಿದ್ದಾರೆಯೇ ವಿನಃ, ಪ್ರಕರಣದ ಕಾರಣಕ್ಕೆ ಅಲ್ಲ. ಆದರೆ ನಿಖರವಾದ ಕಾರಣ ಏನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳ ಕಚೇರಿಯ ವಕ್ತಾರ ಸೂರಿಯಾನ್ ಹಾಂಗ್ ವಿಲೈ ತಿಳಿಸಿದ್ದಾರೆ.

ಟಾಪ್ ನ್ಯೂಸ್

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.