Tilapia Fish: ಮೀನು ತಿಂದು ಕೈ, ಕಾಲುಗಳನ್ನೇ ಕಳೆದುಕೊಂಡ ಮಹಿಳೆ… ಎಚ್ಚರ ಅಗತ್ಯ


Team Udayavani, Sep 18, 2023, 9:39 AM IST

Tilapia: ಈ ಮೀನಿನ ಬಗ್ಗೆ ಇರಲಿ ಎಚ್ಚರ… ಮೀನು ತಿಂದು ಅಂಗಾಂಗವನ್ನೇ ಕಳೆದುಕೊಂಡ ಮಹಿಳೆ…

ಕ್ಯಾಲಿಫೋರ್ನಿಯಾ: ಮೀನು ತಿಂದ ಮಹಿಳೆಯೊಬ್ಬರು ತನ್ನ ದೇಹದ ನಾಲ್ಕು ಅಂಗಾಂಗವನ್ನೇ ಕಳೆದುಕೊಂಡ ವಿಚಿತ್ರ ಘಟನೆಯೊಂದು ಕ್ಯಾಲಿಫೋರ್ನಿಯಾದಲ್ಲಿ ಬೆಳಕಿಗೆ ಬಂದಿದೆ.

ಕ್ಯಾಲಿಫೋರ್ನಿಯಾದ ಲಾರಾ ಬರಾಜಾಸ್(40) ಎಂಬ ಮಹಿಳೆಯೇ ಅಂಗಾಂಗ ಕಳೆದುಕೊಂಡಿರುವ ನತದೃಷ್ಟ ಮಹಿಳೆ.

ಮಾರಣಾಂತಿಕ ಬ್ಯಾಕ್ಟೀರಿಯಾವಿರುವ ಮೀನುಗಳನ್ನು ತಿಂದ ಲಾರಾ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಕೆಲ ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರ ಅಂಗಾಂಗಗಳು ವೈಫಲ್ಯವಾಗಿದ್ದು ಇದರಿಂದ ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಮಹಿಳೆಯ ಜೀವ ರಕ್ಷಣೆಗಾಗಿ ಎರಡು ಕೈಗಳು ಹಾಗೂ ಎರಡು ಕಾಲುಗಳನ್ನು ಶಸ್ತ್ರಚಿಕಿತ್ಸೆ ಮೂಲಕ ತೆಗೆದಿದ್ದಾರೆ, ಇದೀಗ ಅಂಗಾಂಗ ಕಳೆದುಕೊಂಡ ಮಹಿಳೆ ಜೀವನ್ಮರಣ ಸ್ಥಿತಿಯಲ್ಲಿ ಹೋರಾಟ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಬ್ಯಾಕ್ಟೀರಿಯಾದ ಮಾರಣಾಂತಿಕ ಸ್ಟ್ರೈನ್‌ನಿಂದ ಕಲುಷಿತಗೊಂಡಿರುವ ಕಡಿಮೆ ಬೇಯಿಸಿದ ತಿಲಾಪಿಯಾ ಮೀನಿನ ಸೇವನೆಯಿಂದ ಈ ಸಮಸ್ಯೆ ತಲೆದೋರಿದೆ ಎಂದು ಲಾರಾ ಅವರ ಸ್ನೇಹಿತರು ಟ್ವೀಟ್ ಮಾಡಿದ್ದಾರೆ.

40 ವರ್ಷದ ಲಾರಾ ಬರಾಜಾಸ್ ಆಸ್ಪತ್ರೆಯಲ್ಲಿ ತಿಂಗಳುಗಳ ಕಾಲದ ಚಿಕಿತ್ಸೆ ಪಡೆದ ನಂತರ ಗುರುವಾರ ಜೀವರಕ್ಷಕ ಶಸ್ತ್ರಚಿಕಿತ್ಸೆಗೆ ಒಳಗಾಗಿ ಅಂಗಾಂಗಗಳನ್ನು ಕಳೆದುಕೊಂಡಿದ್ದಾರೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.

ಸ್ಯಾನ್ ಜೋಸ್‌ನ ಸ್ಥಳೀಯ ಮಾರುಕಟ್ಟೆಯಲ್ಲಿ ಲಾರಾ ತಿಲಾಪಿಯಾ ಮೀನನ್ನು ಖರೀದಿಸಿದ್ದರು ಎಂದು ಆಕೆಯ ಸ್ನೇಹಿತೆ ಟ್ವೀಟ್ ಮಾಡಿದ್ದಾರೆ.

ಮೀನಿನಲ್ಲಿದ್ದ ವಿಬ್ರಿಯೊ ವಲ್ನಿಫಿಕಸ್ ಎಂಬ ಮಾರಣಾಂತಿಕ ಬ್ಯಾಕ್ಟೀರಿಯಾವು ಮಹಿಳೆಯ ದೇಹ ಸೇರಿ ಅರೋಗ್ಯ ಸಮಸ್ಯೆ ತಲೆದೂರಿದೆ ಅಲ್ಲದೆ ಅಂಗಾಂಗ ವೈಫಲ್ಯಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಅಲ್ಲದೆ ಬರೋಬ್ಬರಿ ಎರಡು ತಿಂಗಳುಗಳ ಕಾಲ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಜೀವ ಉಳಿಸುವ ನಿಟ್ಟಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಇದೀಗ ಕೋಮಾದಲ್ಲಿರುವ ಮಹಿಳೆಯ ದೇಹದ ಭಾಗಗಳು ಕಪ್ಪು ಬಣ್ಣಕ್ಕೆ ತಿರುಗಿದ್ದು ಮೂತ್ರಪಿಂಡಗಳೂ ವೈಫಲ್ಯವಾಗಿದೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ, ಜೊತೆಗೆ ತಿಲಾಪಿಯಾ ಮೀನುಗಳ ಬಗ್ಗೆ ಜನ ಎಚ್ಚರಿಕೆ ವಹಿಸುವಂತೆ ಮನವಿಯನ್ನು ಮಾಡಿಕೊಂಡಿದ್ದಾರೆ.

ಸಮುದ್ರದ ಆಹಾರ, ಮೀನು, ಮಾಂಸವನ್ನು ತಿನ್ನುವಾಗ ಸರಿಯಾಗಿ ಬೇಯಿಸಿಕೊಂಡು ತಿನ್ನುವ ಅಗತ್ಯವನ್ನು ಇಂತಹ ಘಟನೆಗಳು ಒತ್ತಿ ಹೇಳುತ್ತದೆ. ಅದರಲ್ಲೂ ಶೀತಲೀಕರಿಸಿದ ಆಹಾರ ತಿನ್ನುವಾಗ ಇನ್ನೂ ಎಚ್ಚರ ಅಗತ್ಯ.

ಇದನ್ನೂ ಓದಿ: Hemant Soren: ಸಮನ್ಸ್ ಪ್ರಶ್ನಿಸಿ ಸುಪ್ರೀಂಗೆ ಮೊರೆಹೋದ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್

ಟಾಪ್ ನ್ಯೂಸ್

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.