ಪರಿಸರದ ರಕ್ಷಣೆಗೆ ಇಂದೇ ಕಾರ್ಯೋನ್ಮುಖರಾಗೋಣ: ವಿಶ್ವಸಂಸ್ಥೆಯ ಪರಿಸರ ಸಮಾವೇಶದಲ್ಲಿ ಮೋದಿ ಮಾತು


Team Udayavani, Sep 23, 2019, 10:44 PM IST

Modi-UN

ನ್ಯೂಯಾರ್ಕ್: ವಿಶ್ವ ಪರಿಸರ ಸಂರಕ್ಷಣೆಯ ವಿಚಾರದಲ್ಲಿ ಮಾತನಾಡುವ ಸಮಯ ಮುಗಿದಿದೆ ಇದೀಗ ನಾವೆಲ್ಲರೂ ಪರಿಸರವನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಾದ ಅನಿವಾರ್ಯತೆ ಒದಗಿಬಂದಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಭಿಪ್ರಾಯಪಟ್ಟಿದ್ದಾರೆ. ವಿಶ್ವಸಂಸ್ಥೆಯ ಪರಿಸರ ಕಾರ್ಯಪಡೆಯ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರಿಂದು ಮಾತನಾಡುತ್ತಾ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಜಗತ್ತು ಇಂದು ನವೀಕರಿಸಬಹುದಾದ ನೈಸರ್ಗಿಕ ಸಂಪನ್ಮೂಲಗಳ ಬಳಕೆಗೆ ಹೆಚ್ಚು ಒತ್ತನ್ನು ನೀಡಬೇಕು ಮತ್ತು ನವೀಕರಿಸಲಾಗದ ನೈಸರ್ಗಿಕ ಸಂಪನ್ಮೂಲಗಳ ಬಳಕೆಯನ್ನು ಕಡಿಮೆ ಮಾಡಬೇಕು ಎಂದೂ ಸಹ ಪ್ರಧಾನಿ ಮೋದಿ ಅವರು ವಿಶ್ವ ಸಮುದಾಯಕ್ಕೆ ಕರೆ ನೀಡಿದರು.

ಇದಕ್ಕೆ ಪೂರಕವಾಗಿ ಸೌರಶಕ್ತಿಯನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವಲ್ಲಿ ಭಾರತ ಪ್ರಾರಂಭಿಸಿರುವ ಯೋಜನೆಗಳ ಕುರಿತಾಗಿಯೂ ಮೋದಿ ಅವರು ವಿಶ್ವ ಸಮುದಾಯಕ್ಕೆ ಮಾಹಿತಿ ನೀಡಿದರು. ಮತ್ತು ಭಾರತದ ಈ ಮಹತ್ವಾಕಾಂಕ್ಷಿ ಕಾರ್ಯದಲ್ಲಿ 80 ದೇಶಗಳು ಈಗಾಗಲೇ ಕೈಜೋಡಿಸಿವೆ ಎಂಬ ವಿಚಾರವನ್ನೂ ಸಹ ಮೋದಿ ಅವರು ಸಭೆಯ ಗಮನಕ್ಕೆ ತಂದರು.

ಪರಿಸರ ರಕ್ಷಣೆಯ ವಿಚಾರದಲ್ಲಿ ಈಗಾಗಲೇ ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಕಾರಣ ಇದರ ರಕ್ಷಣೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆಯೂ ಸಹ ಪ್ರಧಾನಿ ಮೋದಿ ಅವರು ವಿಶ್ವದ ವಿವಿಧ ದೇಶಗಳ ನಾಯಕರನ್ನು ಒತ್ತಾಯಿಸಿದರು. ‘ರಾಶಿಗಟ್ಟಲೆ ಮಾತನಾಡುವುದಕ್ಕಿಂತ ಒಂದು ಚಿಟಿಕೆಯಷ್ಟು ಕ್ರಿಯೆ ಪರಿಣಾಮವನ್ನು ನೀಡಬಲ್ಲದು’ ಎಂಬುದು ಪ್ರಧಾನಿ ಮೋದಿ ಅವರ ಅಭಿಪ್ರಾಯವಾಗಿತ್ತು.

ಹವಾಮಾನ ಬದಲಾವಣೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಭಾರತ ಹಮ್ಮಿಕೊಂಡಿರುವ ವಿವಿಧ ಅಭಿಯಾನಗಳ ಕುರಿತಾಗಿಯೂ ಸಹ ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ವಿವರಿಸಿದರು. ಅದರಲ್ಲಿ 150 ಮಿಲಿಯನ್ ಕುಟುಂಬಗಳಿಗೆ ಅಡುಗೆ ಅನಿಲ ಸಂಪರ್ಕ ಒದಗಿಸಿರುವುದು, ಜಲಸಂಪನ್ಮೂಲಗಳ ಅಭಿವೃದ್ಧಿಗೆ ಹಮ್ಮಿಕೊಂಡಿರುವ ‘ಜಲ ಜೀವನ್ ಮಿಶನ್’, ಜಲಮೂಲಗಳ ರಕ್ಷಣೆ ಮತ್ತು ಮಳೆ ಕೊಯ್ಲು ವಿಧಾನ ಮೊದಲಾದವುಗಳ ಕುರಿತಾಗಿ ಮೋದಿ ಅವರು ಜಾಗತಿಕ ನಾಯಕರ ಗಮನ ಸೆಳೆಯುವ ಪ್ರಯತ್ನವನ್ನು ಮಾಡಿದರು.

ಈ ಬಾರಿಯ ಸ್ವಾತಂತ್ರ್ಯೋತ್ಸವ ದಿನಾಚರಣೆಯಂದು ಒಮ್ಮೆಗೆ ಬಳಸಿ ಬಿಸಾಕುವ ಪ್ಲಾಸ್ಟಿಕ್ ಮುಕ್ತ ಅಭಿಯಾನಕ್ಕೆ ಚಾಲನೆ ನೀಡಿರುವುದನ್ನು ಮೋದಿ ಅವರು ಇದೇ ಸಂದರ್ಭದಲ್ಲಿ ಸ್ಮರಿಸಿಕೊಂಡರು ಹಾಗೂ ಪ್ಲಾಸ್ಟಿಕ್ ಬಳಕೆಯ ಕುರಿತಾಗಿ ಜಾಗತಿಕ ಮಟ್ಟದಲ್ಲಿಯೂ ಸಹ ಜಾಗೃತಿ ಮೂಡುತ್ತಿದೆ ಎಂಬ ವಿಶ್ವಾಸವನ್ನು ಮೋದಿ ಅವರು ಇದೇ ಸಂದರ್ಭದಲ್ಲಿ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.