Tragic: ಮದುವೆಗೂ ಮುನ್ನ ಸ್ತನದ ಗಾತ್ರ ದೊಡ್ಡದು ಮಾಡಿಸುವ ಸರ್ಜರಿ; ಪ್ರಾಣತೆತ್ತ 21ರ ಯುವತಿ

ಮದುವೆ ದಿನ ಸ್ತನ ಎದ್ದು ಕಾಣಬೇಕೆಂದು ಬಯಸಿದ್ದ ಯುವತಿ

Team Udayavani, Sep 28, 2023, 12:41 PM IST

TDY-3

ನವದೆಹಲಿ: ಅಂದವನ್ನು ಹೆಚ್ಚಿಸುವ ಸರ್ಜರಿ ಮಾಡಿಸಿಕೊಳ್ಳಲು ಹೋಗಿ ಪ್ರಾಣವನ್ನೇ ತೆತ್ತಿರುವ ದುರಂತ ಘಟನೆಗಳು ನಡೆದಿರುವುದನ್ನು ನೋಡಿದ್ದೇವೆ. ಮದುವೆ ಆಗಲಿದ್ದ ವಧುಯೊಬ್ಬರು ಇಂಥದ್ದೇ ಸರ್ಜರಿಯೊಂದನಗನು ಮಾಡಿಸಿಕೊಂಡ ಬಳಿಕ ದುರಂತ ಅಂತ್ಯವಾಗಿದ್ದಾರೆ.

ಇಟಲಿಯಲ್ಲಿ ಈ ಘಟನೆ ನಡೆದಿದ್ದು, ಅಲೆಸಿಯಾ ನೆಬೊಸೊ(21) ಯುವತಿ ತನ್ನ ಬಹು ಕಾಲದ ಪ್ರಿಯಕರನೊಂದಿಗೆ ಮದುವೆ ಆಗಲು ಸಿದ್ದರಾಗಿದ್ದರು. ಇನ್ನೇನು ಮದುವೆ ದಿನಾಂಕ ಕೂಡ ಸಮೀಪದಲ್ಲಿತ್ತು. ಅಲೆಸಿಯಾ ನೆಬೊಸೊ ಅವರಿಗೆ ತಾನು ಮದುವೆಗೆ ಪರ್ಫೆಕ್ಟ್‌ ಆಗಿ ಕಾಣಿಸಿಕೊಳ್ಳಬೇಕೆಂದು ಆಸೆಯಿತ್ತು. ಅವರ ಸ್ತನ ಎದ್ದು ಕಾಣಬೇಕೆಂದು ಅವರು ಬಯಸಿದ್ದರು. ಈ ಕಾರಣದಿಂದ ಆಕೆ ಮದುವೆ ಮುನ್ನ ಸ್ತನದ ಗಾತ್ರವನ್ನು ದೊಡ್ಡದು ಮಾಡುವ ಸರ್ಜರಿ ಮಾಡಿಸಿಕೊಳ್ಳಲು ಮುಂದಾಗುತ್ತಾರೆ.

ಪ್ಲಾಸ್ಟಿಕ್ ಸರ್ಜರಿ ಮಾಡುವ ಸ್ಪೆಷಲಿಸ್ಟ್ ಕ್ಲಿನಿಕ್‌ಗೆ ಹೋಗಿ ಸಾಮಾನ್ಯ ಪರೀಕ್ಷೆಗಳನ್ನು ಮಾಡಿಸಿದ್ದಾರೆ. ಸೆ. 11 ರಂದು ಅಲೆಸಿಯಾ ನೆಬೊಸೊ ಸರ್ಜರಿಯನ್ನು ಮಾಡಿಸಿಕೊಂಡು ಅದೇ ದಿನ ಡಿಸ್ಚಾರ್ಜ್‌ ಆಗಿ ಮನೆಗೆ ಹಿಂತಿರುಗಿದ್ದಾರೆ. ಆದರೆ ಎರಡು ದಿನ ಬಳಿಕ ಅಲೆಸಿಯಾ ನೆಬೊಸೊ ಅವರಿಗೆ ವಿಪರೀತ ಜ್ವರ ಕಾಣಿಸಿಕೊಂಡಿದೆ. ಆಯಾಸ, ಕೆಮ್ಮು, ವೀಕ್‌ ನೆಸ್‌ ಕಾಣಿಸಿಕೊಂಡಿದೆ. ಮಗಳ ಆರೋಗ್ಯ ಹದಗೆಟ್ಟಿದ್ದರಿಂದ ಪೋಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ.

ಆಸ್ಪತ್ರೆಗೆ ತಲುಪಿದ ಬಳಿಕ ಅಲೆಸಿಯಾ ನೆಬೊಸೊ ಸೆ.18 ರವರೆಗೆ ಸರಿಯಾಗಿಯೇ ಇದ್ದಳು. ಆದರೆ ಸಂಜೆ ವೇಳೆ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಮರುದಿನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರ ಕಿಡ್ನಿ ಸೇರಿ ಕೆಲ ಅಂಗಾಂಗಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ. ಅವಳ ಬಿಳಿ ರಕ್ತ ಕಣಗಳ ಸಂಖ್ಯೆ 17,000 ಆಗಿತ್ತು.  ಉಸಿರಾಡಲು ಕಷ್ಟಪಡಲು ಪ್ರಾರಂಭಿಸಿದಳು. ನಾವು ಅಲ್ಟ್ರಾಸೌಂಡ್ ಮತ್ತು ಹೊಟ್ಟೆಯ ಸಿಟಿ ಸ್ಕ್ಯಾನ್ ಮಾಡಿದ್ದೇವೆ, ಎದೆಯ ಮತ್ತೊಂದು ಸಿಟಿ ಸ್ಕ್ಯಾನ್ ಮಾಡಿದ್ದೇವೆ. ಇದರಿಂದ ಸಮಸ್ಯೆ ಶ್ವಾಸಕೋಶದಿಂದ ಬರುತ್ತಿದೆ ಎಂದು ಗೊತ್ತಾಯಿತು. ಇದಾದ ಬಳಿಕ ನಾವು ಆಕೆಯನ್ನು ಐಸಿಯುಗೆ ದಾಖಲು ಮಾಡಿದ್ದೇವೆ. ಆದರೆ ಕೆಲ ಗಂಟೆಗಳ ಬಳಿ ಆಕೆ ಕಾರ್ಡಿಯಾಕ್‌ ಅರೆಸ್ಟ್‌ ನಿಂದ ಮೃತಪಟ್ಟಳು” ಎಂದು ಡಾ. ಸಿಕರೆಲ್ಲಿ ಹೇಳಿದ್ದಾರೆ ಎಂದು ʼದಿ ಸನ್‌ʼ ವರದಿ ತಿಳಿಸಿದೆ.

“ಅಲೆಸ್ಸಿಯಾ ಯಾವಾಗಲೂ ತನ್ನ ಚಿಕ್ಕ ಸ್ತನಗಳ ದೂರು ಹೇಳುತ್ತಿದ್ದಳು. ಆದರೆ  ಅವುಗಳು ನಿಜವಾಗಿಯೂ ಚಿಕ್ಕದಾಗಿರಲಿಲ್ಲ. ಅವಳು ನಮ್ಮ ಸಲಹೆಗಳನ್ನು ಕೇಳುತ್ತಿರಲಿಲ್ಲ. ಅವಳ ಪ್ರಿಯಕರನ ಮಾತನ್ನು ಸಹ ಅವಳ ಕೇಳುತ್ತಿರಲಿಲ್ಲ ಎಂದು ಆಕೆಯ ಸ್ನೇಹಿತರು ಹೇಳುತ್ತಾರೆ.

ಸದ್ಯ ಮೃತಳ ಪೋಷಕರು ಈ ಬಗ್ಗೆ ದೂರು ದಾಖಲಿಸಿದ್ದು, ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಯಾವುದೇ ತಪ್ಪುಗಳಿಂದ ತಮ್ಮ ಮಗಳು ಸಾಯಲಿಲ್ಲ ಎಂದು ಖಚಿತಪಡಿಸಿಕೊಳ್ಳಲು ನಾವು ಬಯಸುತ್ತೇವೆ. ಒಂದು ವೇಳೆ ತಪ್ಪುಗಳಾಗಿದ್ದರೆ ಅದು ಬೆಳಕಿಗೆ ಬರಬೇಕು. ವೈದ್ಯರಿಂದಾಗಿ ಅಲೆಸಿಯಾ ಸಾವನ್ನಪ್ಪಿದ್ದರೆ, ನಮಗೆ ನ್ಯಾಯ ಬೇಕೆಂದು ಅವಳ ಪೋಷಕರು ಹೇಳುತ್ತಾರೆ.

ಟಾಪ್ ನ್ಯೂಸ್

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.