ವಲಸಿಗ ಮಕ್ಕಳನ್ನು ಪ್ರತ್ಯೇಕಗೊಳಿಸುವ ನಿಯಮಕ್ಕೆ ತಡೆ


Team Udayavani, Jun 22, 2018, 8:30 AM IST

donald-trumph-600.jpg

ವಾಷಿಂಗ್ಟನ್‌: ಪೋಷಕರಿಂದ ಮಕ್ಕಳನ್ನು ಬೇರ್ಪಡಿಸುವ ಅಮೆರಿಕದ ಝೀರೋ ಟಾಲರೆನ್ಸ್‌ ನೀತಿ ವಿರುದ್ಧ ಇಡೀ ಜಾಗತಿಕ ಸಮುದಾಯ ತಿರುಗಿಬಿದ್ದ ಹಿನ್ನೆಲೆಯಲ್ಲಿ ತನ್ನದೇ ಆದೇಶವನ್ನು ಮಾರ್ಪಾಡು ಮಾಡಿರುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಇನ್ನು ಮುಂದೆ ಇವರ್ಯಾರನ್ನೂ ಬೇರ್ಪಡಿಸುವುದಿಲ್ಲ ಎಂದು ಹೇಳಿದ್ದಾರೆ.

ಅಮೆರಿಕ – ಮೆಕ್ಸಿಕೋ ಗಡಿಯಲ್ಲಿನ ನಿರಾಶ್ರಿತರ ಕೇಂದ್ರದಲ್ಲಿ ಸುಮಾರು 2,300 ಮಕ್ಕಳನ್ನು ಪೋಷಕರಿಂದ ಬೇರ್ಪಡಿಸಿ ಕೂಡಿಹಾಕಲಾಗಿತ್ತು. ಅಲ್ಲದೆ ಈ ಮಕ್ಕಳ ಆಕ್ರಂದನ, ಕಣ್ಣೀರಿನ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿಯಾದ ಬಳಿಕ ಪೋಪ್‌ ಫ್ರಾನ್ಸಿಸ್‌, ಬ್ರಿಟನ್‌ ಪ್ರಧಾನಿ ಥೆರೆಸಾ ಮೇ ಸೇರಿದಂತೆ ಜಗತ್ತಿನ ನಾಯಕರೆಲ್ಲರೂ ಟ್ರಂಪ್‌ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಗುರುವಾರ ಬೆಳಗ್ಗೆಯೇ ಅಧ್ಯಾದೇಶ ಹೊರಡಿಸಿದ್ದು ಇನ್ನು ಮುಂದೆ ಪೋಷಕರು ಮತ್ತು ಮಕ್ಕಳನ್ನು ಬೇರೆ ಮಾಡುವುದಿಲ್ಲವೆಂದು ಹೇಳಿದ್ದಾರೆ. ಜತೆಗೆ ಮಕ್ಕಳ ನೋವು ಸಹಿಸಲು ಅಸಾಧ್ಯವಾಗಿತ್ತು ಎಂದೂ ತಿಳಿಸಿದ್ದಾರೆ. 

ಇದರ ಜತೆಯಲ್ಲೇ ಅಕ್ರಮವಾಗಿ ಗಡಿದಾಟುವವರನ್ನು ಸುಮ್ಮನೆ ಬಿಡಲು ಸಾಧ್ಯವಿಲ್ಲ. ಹೀಗಾಗಿ ಝೀರೋ ಟಾಲರೆನ್ಸ್‌ ನೀತಿ ಜಾರಿಯಲ್ಲಿ ಇರುತ್ತದೆ. ಅಕ್ರಮ ವಲಸಿಗರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ವಿಚಾರಣೆಗೊಳಪಡಿಸಲಾಗುತ್ತದೆ ಎಂದು ಎಚ್ಚರಿಕೆಯನ್ನೂ ನೀಡಿದ್ದಾರೆ. ಹೊಸ ಆಧ್ಯಾದೇಶ ಹೊರಬಿದ್ದರೂ ಈ ವಲಸಿಗ ಕುಟುಂಬಗಳಿಗೆ ದೊಡ್ಡ ಸಮಾಧಾನವೇನೂ ಸಿಕ್ಕಿಲ್ಲ. ಇದೀಗ 2,300 ಮಕ್ಕಳನ್ನು ಜೈಲಿನಲ್ಲಿರುವ ಅವರ ಪೋಷಕರ ಜತೆಗೆ ಸೇರಿಸಲಾಗುತ್ತದೆಯಷ್ಟೇ.

ಅಧ್ಯಾದೇಶಕ್ಕೆ ಆಕ್ರೋಶ: ಈ ಮಧ್ಯೆ, ಹೊಸ ಅಧ್ಯಾದೇಶದಿಂದ ಹೆಚ್ಚಿನ ಅನುಕೂಲವೇನೂ ಆಗಿಲ್ಲ ಎಂದು ಅಮೆರಿಕದಲ್ಲಿರುವ ಭಾರತ ಮೂಲದ ಸಂಸದರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಮೆರಿಕ ಕಾಂಗ್ರೆಸ್‌ ಸದಸ್ಯೆ ಪ್ರಮೀಳಾ ಜಯಪಾಲ್‌ ಅವರು, ಇದು ಮಕ್ಕಳನ್ನು ಪೋಷಕರಿಂದ ಬೇರ್ಪಡಿಸುವುದನ್ನು ತಪ್ಪಿಸುತ್ತದೆಯೇ ಹೊರತು, ಬೇರೆ ಅನುಕೂಲವಾಗಲ್ಲ. ಅಲ್ಲದೆ ಪೋಷಕರ ಜತೆ ಮಕ್ಕಳನ್ನೂ ಜೈಲಿನಲ್ಲಿ ಇಟ್ಟು ಹಿಂಸಿಸಲಾಗುತ್ತದೆ. ಹೀಗಾಗಿ ಇಡೀ ಝೀರೋ ಟಾಲರೆನ್ಸ್‌ ನೀತಿಯನ್ನೇ ರದ್ದು ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಇದಕ್ಕೆ ಮತ್ತೂಬ್ಬ ಸಂಸದೆ ಕಮಲಾ ಹ್ಯಾರೀಸ್‌ ಕೂಡ ದನಿಗೂಡಿಸಿದ್ದಾರೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.