ಇಂಡೋನೇಷ್ಯಾದಲ್ಲಿ ಸುನಾಮಿ: 222 ಬಲಿ


Team Udayavani, Dec 24, 2018, 6:00 AM IST

ap12232018000071a.jpg

ಜಕಾರ್ತ: ಇದೇ ವರ್ಷ ಐದು ಬಾರಿ ಭೂಕಂಪಕ್ಕೆ ತುತ್ತಾಗಿರುವ ಇಂಡೋನೇಷ್ಯಾದಲ್ಲಿ ನಿಸರ್ಗ ಮತ್ತೂಮ್ಮೆ ರುದ್ರತಾಂಡವವಾಡಿದೆ. ಸುಮಾತ್ರಾ ಹಾಗೂ ಜಾವಾ ದ್ವೀಪಗಳ ನಡುವಿನ ಸುಂಡಾ ಜಲಸಂಧಿಯಲ್ಲಿ ಶನಿವಾರ ರಾತ್ರಿ ಸ್ಥಳೀಯ ಕಾಲಮಾನ 9:27ರ ಸುಮಾರಿಗೆ ಉಂಟಾದ ಸುನಾಮಿಗೆ 222 ಮಂದಿ ಸಾವನ್ನಪ್ಪಿದ್ದು, 800ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ. ಅಂದಾಜು 50 ಜನರು ಕಾಣೆಯಾಗಿದ್ದಾರೆ. ಪರಿಹಾರ ಕಾರ್ಯಾಚರಣೆಗಳು ಸಮರೋಪಾದಿಯಲ್ಲಿ ಸಾಗುತ್ತಿವೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಆತಂಕವಿದೆ.
 
ಹೇಗಾಯ್ತು ಸುನಾಮಿ?
ಸುಂಡಾ ಜಲಸಂಧಿಯಲ್ಲಿ ಅನಕ್‌ ಕ್ರಟಾಟೌ ಎಂಬ ದ್ವೀಪವಿದೆ. ಇದಕ್ಕೆ ಜ್ವಾಲಾಮುಖೀಗಳ ದ್ವೀಪವೆಂದೇ ಹೆಸರು. ಇದರಲ್ಲಿನ ಕ್ರಟಾಟೌ ಜ್ವಾಲಾಮುಖೀ ಏಕಾಏಕಿ ಭುಗಿಲೆದ್ದಿದ್ದರಿಂದ ಅದರ ಪಕ್ಕದಲ್ಲಿದ್ದ ಸಾಗರದಲ್ಲಿ ಭೂಕಂಪವಾಗಿದೆ. ಸಾಗರ ತಳದಲ್ಲಿ ಹಠಾತ್ತನೆ ಏರುಪೇರಾಗಿದ್ದರಿಂದ ಸಮುದ್ರದ ನೀರು ಮುಗಿಲೆತ್ತರಕ್ಕೆ ಚಿಮ್ಮಿ ಸುನಾಮಿ ಉಂಟಾಗಿದೆ. ಶನಿವಾರ ಹುಣ್ಣಿಮೆಯೂ ಇದ್ದಿದ್ದರಿಂದ ಸಾಗರದಲ್ಲಿ ಅಲೆಗಳ ಏರಿಳಿತ ಸಾಮಾನ್ಯ ದಿನಗಳಿಗಿಂತಲೂ ಹೆಚ್ಚಾಗಿಯೇ ಇತ್ತು. ಸುನಾಮಿ ಸಂಭವಿಸುತ್ತಲೇ ಅಲೆಗಳು ರಕ್ಕಸ ಸ್ವರೂಪ ಪಡೆದು ಬಂದು ಸಾಗರ ತೀರಗಳಿಗೆ ಅಪ್ಪಳಿಸಿದೆ ಎಂದು ಹೇಳಲಾಗಿದೆ.  

ರಸನಿಮಿಷಗಳ ಜಲಸಮಾಧಿ
ಸುಮಾತ್ರಾ, ಜಾವಾ ದ್ವೀಪಗಳ ನಡುವಿನ ಜಾಗದಲ್ಲಿ ಹಿಂದೂ ಮಹಾ ಸಾಗರ ಹಾಗೂ ಜಾವಾ ಸಮುದ್ರಗಳು ಪರಸ್ಪರ ಒಂದನ್ನೊಂದು ಸೇರುತ್ತವೆ. ಇದನ್ನೇ ಸುಂಡಾ ಜಲಸಂಧಿ ಎಂದು ಕರೆಯುತ್ತಾರೆ. ಇಲ್ಲಿ ಚಿಕ್ಕಪುಟ್ಟ ದ್ವೀಪಗಳಿದ್ದು, ಪ್ರವಾಸಿಗರ ಅಚ್ಚುಮೆಚ್ಚಿನ ತಾಣವಾಗಿವೆ. ಈ ದ್ವೀಪಗಳ ತುಂಬೆಲ್ಲಾ ರೆಸ್ಟೋರೆಂಟ್‌ಗಳು, ಬಾರ್‌-ಪಬ್‌ಗಳು ಸೇರಿದಂತೆ ಹಲವಾರು ಪ್ರೇಕ್ಷಣೀಯ ಸ್ಥಳಗಳಿವೆ. ಈ ಬಾರಿಯ ವೀಕೆಂಡ್‌ ಹಾಗೂ ಕ್ರಿಸ್‌ಮಸ್‌ ರಜಾದಿನಗಳ ಹಿನ್ನೆಲೆಯಲ್ಲಿ ಹೆಚ್ಚು ಜನರು ಇಲ್ಲಿ ಜಮಾಯಿಸಿದ್ದರು. ಹಾಗಾಗಿಯೇ ಸಾವಿನ ಸಂಖ್ಯೆ ಏರುವ ಭೀತಿ ಎದುರಾಗಿದೆ.

ವರ್ಷಾಂತ್ಯಕ್ಕೂ ಭೂಕಂಪಕ್ಕೂ ವಿಚಿತ್ರ ನಂಟು!
ವರ್ಷಾಂತ್ಯಕ್ಕೂ ಇಂಡೋನೇಷ್ಯಾ ಸುನಾಮಿಗೂ ನಂಟು ಇದ್ದಂತಿದೆ. 2004ರ ಡಿ. 26ರಂದು ಸುಮಾತ್ರಾದ ಸಾಗರದಾಳದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಉಂಟಾದ ಮಹಾಸುನಾಮಿಯಿಂದ ಹಿಂದೂ ಮಹಾಸಾಗರಕ್ಕೆ ಆತುಕೊಂಡಿರುವ ಎಲ್ಲಾ ದೇಶಗಳಲ್ಲಿ ಒಟ್ಟಾರೆ 2,20,000 ಜನರು ಸಾವನ್ನಪ್ಪಿದ್ದರು. ಇಂಡೋನೇಷ್ಯಾದಲ್ಲೇ 1,68,000 ಜನ ಸಾವಿಗೀಡಾಗಿದ್ದರು. 

ನೇಪಾಳದಲ್ಲಿ ಲಘು ಭೂಕಂಪ 
ಇಂಡೋನೇಷ್ಯಾದಲ್ಲಿ ಸುನಾಮಿ ಸಂಭವಿಸಿದ ಬೆನ್ನಲ್ಲೇ, ಭಾರತದ ನೆರೆ ದೇಶ ನೇಪಾಳದ ರಾಜಧಾನಿ ಕಠ್ಮಂಡುವಿನಿಂದ 80 ಕಿ.ಮೀ. ದೂರದಲ್ಲಿರುವ ಸಿಂಧುಪಾಲ್‌ ಚೌಕ್‌ ಎಂಬ ಜಿಲ್ಲೆಯಲ್ಲಿ ಭಾನುವಾರ ಬೆಳಗಿನ ಜಾವ 5:06ರ ಹೊತ್ತಿಗೆ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್‌ ಮಾಪಕದಲ್ಲಿ ಇದರ ತೀವ್ರತೆ 4.7ರಷ್ಟಿತ್ತು ಎಂದು ಹೇಳಲಾಗಿದೆ. 

50ರಿಂದ 70 ಅಡಿಯ ಅಲೆ!
ಅಲ್ಲಿನ ಬೀಚ್‌ ರೆಸ್ಟೋರೆಂಟ್‌ ಒಂದರಲ್ಲಿ ಸಂಗೀತ ಬ್ಯಾಂಡ್‌ ಒಂದರಿಂದ ಸಂಗೀತ ಕಾರ್ಯಕ್ರಮ ನಡೆಯುತ್ತಿರುವಾಗಲೇ ಸುನಾಮಿ ಅಪ್ಪಳಿಸಿದ್ದು ಈ ಕಾರ್ಯಕ್ರಮದ ವಿಡಿಯೋ ಚಿತ್ರೀಕರಿಸುತ್ತಿದ್ದ ಪ್ರವಾಸಿಗರೊಬ್ಬರ ಮೊಬೈಲಿನಲ್ಲಿ ದಾಖಲೆಯಾಗಿದೆ. ಆ ವಿಡಿಯೋ ಕ್ಲಿಪ್‌ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಸುನಾಮಿಯಿಂದ ಎದ್ದ ದೈತ್ಯ ಅಲೆ ಸುಮಾರು 50ರಿಂದ 70 ಅಡಿಗಳಷ್ಟಿತ್ತು. ಆ ಅಲೆಯ ಬಡಿತಕ್ಕೆ ಇಡೀ ದ್ವೀಪದ ಅಂದ-ಚೆಂದ, ಪ್ರವಾಸಿಗರ ಸಡಗರ, ಗಾನ-ಪಾನಗಳೆಲ್ಲವೂ ಕ್ಷಣಾರ್ಧದಲ್ಲಿ ಕೊಚ್ಚಿ ಹೋದವು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ. 

ಅಂಕಿ-ಅಂಶ: 
800 – ಗಂಭೀರವಾಗಿ ಗಾಯಗೊಂಡವರ ಸಂಖ್ಯೆ 
50 – ಸುನಾಮಿಯಲ್ಲಿ ಕಾಣೆಯಾದವರ ಸಂಖ್ಯೆ 
50ರಿಂದ 70 ಅಡಿ – ಸುನಾಮಿ ಅಲೆಯ ಅಂದಾಜು ಎತ್ತರ 
6 – ಈ ವರ್ಷ ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೂಕಂಪಗಳ ಸಂಖ್ಯೆ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.