ಟ್ವಿಟರ್‌, ಫೇಸ್‌ಬುಕ್‌ನಲ್ಲಿ ಅಮೆರಿಕ ಜರೆದರೆ ವೀಸಾ ಸಿಗೋದು ಡೌಟು!


Team Udayavani, Jan 31, 2017, 3:45 AM IST

172301_em_trumpcut.jpg

ವಾಷಿಂಗ್ಟನ್‌: ಅಮೆರಿಕದಲ್ಲಿ ವಲಸಿಗರ ನಿರ್ಬಂಧದ ಬಿಸಿ ಭಾರತೀಯರಿಗೂ ತಟ್ಟುವ ಎಲ್ಲ ಅಪಾಯಗಳಿವೆ. ಭಾರತ ಸೇರಿದಂತೆ ಯಾವುದೇ ದೇಶದಿಂದ  ಯಾರೇ ಅಮೆರಿಕಕ್ಕೆ ಹೋಗುವುದಾದರೂ ಅವರ ಫೇಸ್‌ಬುಕ್‌, ಗೂಗಲ್‌, ಇನ್‌ಸ್ಟಗ್ರಾಮ್‌, ಯೂಟ್ಯೂಬ್‌ ಖಾತೆಯ ಮಾಹಿತಿ, ವಾಟ್ಸಾéಪ್‌ ಸಂದೇಶದ ವಿವರಗಳು, ಮೊಬೈಲ್‌ನಲ್ಲಿರುವ ಸಂಪರ್ಕ ಸಂಖ್ಯೆಗಳನ್ನೂ ಅಮೆರಿಕ ಸರ್ಕಾರದ ಮುಂದಿಡಬೇಕಾಗುತ್ತದೆ.

ಭಾರತ ಸೇರಿದಂತೆ ಎಲ್ಲ ವಿದೇಶಿಗರಿಗೂ ಈ ಹೊಸ ಕಾನೂನು ಅನ್ವಯಿಸಲಿದೆ. ಈಗಾಗಲೇ ಡಿಸೆಂಬರ್‌ನಲ್ಲಿ ಅಮೆರಿಕಕ್ಕೆ ತೆರಳಿರುವ ಮಂದಿಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆ ವಿವರ ಹಾಗೂ ಮೊಬೈಲ್‌ ಸಂಪರ್ಕದ ಮಾಹಿತಿಗಳನ್ನು ಕೇಳಲು ಟ್ರಂಪ್‌ ಸರ್ಕಾರ ಮುಂದಾಗಿದೆ.

ವಲಸೆ ನಿಷೇಧಕ್ಕೆ ತೇಪೆ: ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಆದೇಶಿಸಿರುವ ವಲಸೆ ನೀತಿ ವಿಶ್ವದಾದ್ಯಂತ ಕೆಂಗಣ್ಣಿಗೆ ಗುರಿಯಾದ ಹಿನ್ನೆಲೆಯಲ್ಲಿ, ರಿಪಬ್ಲಿಕನ್‌ ಸರ್ಕಾರ ಇದಕ್ಕೆ ತೇಪೆ ಹಚ್ಚಲು ಯತ್ನಿಸುತ್ತಿದೆ. “ಇದು ಮುಸ್ಲಿಮರ ಮೇಲಿನ ನಿಷೇಧವಲ್ಲ’ ಎಂದು ಡೊನಾಲ್ಡ್‌ ಟ್ರಂಪ್‌ ಹೇಳಿದ್ದಾರೆ.

“ಸ್ಪಷ್ಟವಾಗಿ ಹೇಳುತ್ತೇನೆ, ಮುಸ್ಲಿಮರ ಮೇಲಿನ ನಿಷೇಧ ಇದಲ್ಲ. ನನ್ನ ನೀತಿಯನ್ನು ಮಾಧ್ಯಮಗಳು ತಪ್ಪಾಗಿ ಅರ್ಥೈಸುತ್ತಿವೆ. ಒಂದು ಧರ್ಮದ ಮೇಲಿನ ವಿರೋಧವೂ ಇದಲ್ಲ. ಇದು ಕೇವಲ ಅಮೆರಿಕವನ್ನು ಉಳಿಸಲು ಜಾರಿಗೆ ತಂದಿರುವ ಉಗ್ರವಾದದ ನಿಷೇಧ’ ಎಂದು ಸಮರ್ಥಿಸಿಕೊಂಡಿದ್ದಾರೆ.

ಇರಾನ್‌, ಇರಾಕ್‌, ಸಿರಿಯಾ, ಲಿಬಿಯಾ, ಸುಡಾನ್‌, ಯೆಮನ್‌ ಮತ್ತು ಸೊಮಾಲಿಯಾ ದೇಶಗಳ ವಲಸಿಗರನ್ನು ಅಮೆರಿಕ ನಿಷೇಧಿಸಿತ್ತು. ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜರು ಸೇರಿದಂತೆ ವಿಶ್ವದ ಗಣ್ಯಾತಿಗಣ್ಯರು ಈ ವಲಸೆ ವಿರೋಧಿ ನೀತಿಯನ್ನು ಖಂಡಿಸಿದ್ದರು. ನಿಷೇಧ ಹೊರಡಿಸಿ ಮೂರನೇ ದಿನ ಎಚ್ಚೆತ್ತುಕೊಂಡಿರುವ ಟ್ರಂಪ್‌, “ಸಿರಿಯಾದ ಈಗಿನ ಪರಿಸ್ಥಿತಿ ಎಷ್ಟು ಕೆಟ್ಟದಾಗಿದೆ ಎನ್ನುವುದು ಗೊತ್ತು. ದೇಶದಿಂದ ಹೊರಗೆ ಹೋಗುತ್ತಿರುವ ಸಿರಿಯಾ ಮಂದಿ ಮೇಲೆ ನನಗೂ ಅನುಕಂಪವಿದೆ. ಆದರೆ, ಅಮೆರಿಕ ರಕ್ಷಣೆಗಾಗಿ ಈ ಕ್ರಮ ಕೈಗೊಳ್ಳಲೇಬೇಕಿದೆ’ ಎಂದು ಹೇಳಿದ್ದಾರೆ.

ಫ್ರಾನ್ಸ್‌, ಜರ್ಮನಿ ವಿರೋಧ: ಫ್ರಾನ್ಸ್‌ ಅಧ್ಯಕ್ಷ ಫ್ರಾಂಕೋಯಿಸ್‌ ಹೊಲಾಂಡ್‌, “ಟ್ರಂಪ್‌ ಘೋಷಿಸಿರುವ ಈ ಖಾಸಗಿ ಹಿತಾಸಕ್ತಿಯ ನಿರ್ಧಾರದಿಂದ ನಮ್ಮಂಥ ರಾಷ್ಟ್ರಗಳು ಪರಿಣಾಮ ಎದುರಿಸಲಿವೆ. ಸಿರಿಯಾದಲ್ಲಿ ಯುದ್ಧವಾದಾಗ ನಿಜಕ್ಕೂ ವಲಸಿಗರ ಸಮಸ್ಯೆ ಅನುಭವಿಸಿದ್ದು ಫ್ರಾನ್ಸ್‌ ಮತ್ತು ಜರ್ಮನಿ. ಆದರೆ, ನಾವ್ಯಾರೂ ಅವರನ್ನು ವಿರೋಧಿಸಲು ಹೋಗಲಿಲ್ಲ’ ಎಂದಿದ್ದಾರೆ. ಜರ್ಮನಿ ಚಾನ್ಸೆಲರ್‌ ಏಂಜೆಲಾ ಮಾರ್ಕೆಲ್‌, “ಜನರನ್ನು ಧರ್ಮದ ಆಧಾರದಲ್ಲಿ ನಿರ್ಬಂಧಿಸುವುದು ತಪ್ಪು’ ಎಂದು ಟ್ರಂಪ್‌ಗೆ ಕಿವಿಮಾತು ಹೇಳಿದ್ದಾರೆ.

ಅಮೆರಿಕಾದ್ಯಂತ ಪ್ರತಿಭಟನೆ: ವಲಸೆ ನೀತಿಯನ್ನು ಖಂಡಿಸಿ, ವೈಟ್‌ಹೌಸ್‌ ಮುಂದೆ, ಅಮೆರಿಕ ಏರ್‌ಪೋರ್ಟ್‌ಗಳಲ್ಲಿ ಸಾವಿರಾರು ವಲಸಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. “ನಾವೆಲ್ಲ ಒಗ್ಗಟ್ಟಿದ್ದೇವೆ. ಜನರನ್ನು ಒಡೆಯಲು ಸಾಧ್ಯವಿಲ್ಲ’ ಎಂಬ ಫ‌ಲಕಗಳನ್ನು ಹಿಡಿದಿದ್ದರು. ಇವರನ್ನು ಬೆಂಬಲಿಸಿದ ಕೆಲವು ಸಂಘಟನೆಗಳು, “ಹೆದರಬೇಡಿ, ಎಲ್ಲ ನಿರಾಶ್ರಿತರು ಅಮೆರಿಕಕ್ಕೆ ಬನ್ನಿ’ ಎಂದು ಆಗ್ರಹಿಸುತ್ತಿದ್ದರು. ದಲ್ಲಾಸ್‌ ವಿಮಾನ ನಿಲ್ದಾಣದಲ್ಲಿ ಪ್ರತಿಭಟನೆಗೆ ಮುಂದಾಗ 50 ಮಂದಿಯನ್ನು ಬಂಧಿಸಲಾಗಿದೆ.

ಟಾಪ್ ನ್ಯೂಸ್

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.