ಉದ್ಯೋಗಿಗಳ ವಜಾ: ಯೂಟರ್ನ್ ಹೊಡೆದ ಟ್ವಿಟರ್‌


Team Udayavani, Nov 8, 2022, 7:30 AM IST

ಉದ್ಯೋಗಿಗಳ ವಜಾ: ಯೂಟರ್ನ್ ಹೊಡೆದ ಟ್ವಿಟರ್‌

ಬೋಸ್ಟನ್‌: ಎಲಾನ್‌ ಮಸ್ಕ್ ಒಡೆತನದ ಟ್ವಿಟರ್‌ ಶೇ.50ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಿದ ನಂತರ ಈಗ ಯೂಟರ್ನ್ ಹೊಡೆದಿದೆ. ವಜಾಗೊಂಡವರ ಪೈಕಿ ಕೆಲ ಉದ್ಯೋಗಿಗಳನ್ನು ವಾಪಸು ಕೆಲಸಕ್ಕೆ ಹಿಂತಿರುಗುವಂತೆ ಟ್ವಿಟರ್‌ ಮನವಿ ಮಾಡಿದೆ.

“ಕೆಲವರನ್ನು ತಪ್ಪಾಗಿ ಕೆಲಸದಿಂದ ತೆಗೆದುಹಾಕಲಾಗಿದೆ. ಮಸ್ಕ್ ಅವರ ಆಲೋಚನೆಗಳಿಗೆ ತಕ್ಕಂತೆ ಹೊಸ ವೈಶಿಷ್ಟ್ಯಗಳನ್ನು ರೂಪಿಸಲು ಅವರ ಕೆಲಸ ಮತ್ತು ಅನುಭವದ ಅಗತ್ಯವಿದೆ ಎಂದು ಮ್ಯಾನೇಜ್ಮೆಂಟ್ ಗೆ ಅರಿವಾಗುವ ಮೊದಲೇ ಅವರನ್ನು ವಜಾಗೊಳಿಸಲಾಗಿತ್ತು,’ ಎಂದು ಟ್ವಿಟರ್‌ನ ಉನ್ನತ ಮೂಲಗಳು ತಿಳಿಸಿವೆ.

ಕಳೆದ ಶುಕ್ರವಾರ ಟ್ವಿಟರ್‌ ನಿರ್ದಯವಾಗಿ 3,700 ಮಂದಿಯನ್ನು ವಜಾಗೊಳಿಸಿತ್ತು. ಭಾರತದ 230 ಉದ್ಯೋಗಿಗಳ ಪೈಕಿ 180 ಉದ್ಯೋಗಿಗಳನ್ನು ಕಿತ್ತುಹಾಕಿತ್ತು.

ನಕಲು ಹೆಸರಿರುವ ಖಾತೆಗಳ ಅಮಾನತು:
“ಟ್ವಿಟರ್‌ನಲ್ಲಿ ಮತ್ತೊಬ್ಬರನ್ನು ನಕಲು ಮಾಡಿದರೆ, ತಮ್ಮ ಖಾತೆಗಳಿಗೆ ಬೇರೆಯವರ ಹೆಸರು ಮತ್ತು ಪ್ರೊಫೈಲ್‌ ಚಿತ್ರಗಳನ್ನು ಹಾಕಿದರೆ ಅಂಥವರ ಖಾತೆಗಳನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗುವುದು,’ ಎಂದು ಮಸ್ಕ್ ಎಚ್ಚರಿಸಿದ್ದಾರೆ.

“ವಿಡಂಬನೆ ಎಂದು ಪೋಸ್ಟ್‌ನಲ್ಲಿ ಸ್ಟಷ್ಟವಾಗಿ ಉಲ್ಲೇಖಿಸಬೇಕು. ಇಲ್ಲದಿದ್ದರೆ ಅಂಥ ಟ್ವಿಟರ್‌ ಖಾತೆಗಳನ್ನು ಶಾಶ್ವತವಾಗಿ ಅಮಾನತುಗೊಳಿಸಲಾಗುವುದು,’ ಎಂದು ಹೇಳಿದ್ದಾರೆ.

8 ಡಾಲರ್‌ ಪಾವತಿಸಿ:
ಅಮೆರಿಕದ ಕಾಮಿಡಿಯನ್‌ ಕ್ಯಾಥಿ ಗ್ರಿಫಿನ್‌ ಅವರು ತಮ್ಮ ಟ್ವಿಟರ್‌ ಖಾತೆಯ ಸ್ಕ್ರೀನ್‌ ಹೆಸರನ್ನು “ಮಸ್ಕ್’ ಎಂದು ಹಾಕಿಕೊಂಡಿದ್ದರು. ಅಲ್ಲದೇ ಮಾಸಿಕ 8 ಡಾಲರ್‌ ವಿಧಿಸುವ ಮಸ್ಕ್ ಅವರ ನಿರ್ಧಾರದ ಬಗ್ಗೆ ವ್ಯಂಗ್ಯ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಅವರ ಖಾತೆಯನ್ನು ಅಮಾನತುಗೊಳಿಸಲಾಗಿದೆ. ಖಾತೆ ಪುನಃ ಸಕ್ರಿಯವಾಗಬೇಕಾದರೆ 8 ಡಾಲರ್‌ ಪಾವತಿಸಿ ಎಂದು ಅವರಿಗೆ ಸೂಚಿಸಲಾಗಿದೆ.

ಇನ್ನೊಂದೆಡೆ, ಮೆಲ್ಬೋರ್ನ್ನ ಲಾ ಟ್ರೋಬ್‌ ವಿಶ್ವವಿದ್ಯಾಲಯದ ಹಿಂದಿ ಪ್ರೊಫೆಸರ್‌ ಇಯಾನ್‌ ವೂಲೊ#àರ್ಡ್‌, ಮಸ್ಕ್ ಅವರ ಚಿತ್ರವನ್ನು ಪ್ರೊಫೈಲ್‌ ಪೋಟೋ ಆಗಿ ಬಳಸಿದ್ದರು. ಅಲ್ಲದೇ ಹಿಂದಿಯಲ್ಲಿ ಜೋಕ್‌ಗಳನ್ನು ಹಾಕಿದ್ದರು. ಅವರ ಖಾತೆಯನ್ನು ಸಹ ಅಮಾನತುಗೊಳಿಸಲಾಗಿದೆ.

ಫೇಸ್‌ಬುಕ್‌ ಉದ್ಯೋಗಿಗಳ ವಜಾ?:
ಟ್ವಿಟರ್‌ ನಂತರ ಈಗ ಉದ್ಯೋಗ ಕಡಿತದ ಸರದಿ ಫೇಸ್‌ಬುಕ್‌ದ್ದಾಗಿದೆ. ಮೆಟಾ ಕಂಪನಿಯು ದೊಡ್ಡ ಮಟ್ಟದಲ್ಲಿ ತನ್ನ ಫೇಸ್‌ಬುಕ್‌ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಲು ಸಿದ್ಧವಾಗಿದೆ. ಈ ಕುರಿತು ಈ ವಾರದಲ್ಲೇ ಕಂಪನಿಯು ನಿರ್ಧಾರ ಪ್ರಕಟಿಸಲಿದೆ ಎಂದು ವರದಿಗಳು ತಿಳಿಸಿದೆ. ಪ್ರಸ್ತುತ ಮೆಟಾ ಕಂಪನಿಯಲ್ಲಿ 87,000ಕ್ಕೂ ಅಧಿಕ ಉದ್ಯೋಗಿಗಳು ಕೆಲಸ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

man hits his wife because he could not afford the treatment!

ಚಿಕಿತ್ಸೆ ವೆಚ್ಚ ಭರಿಸಲಾಗದೆ ಹೆಂಡತಿಯನ್ನೇ ಕೊಂದ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.