ವಿಶ್ವ ವಾಣಿಜ್ಯ ಕೇಂದ್ರದ ಮೇಲಿನ ದಾಳಿಗೆ 20 ವರ್ಷ: ಎರಡು ದಶಕಗಳಲ್ಲಿ ಆಗಿದ್ದೇನು?


Team Udayavani, Sep 11, 2021, 8:44 AM IST

world trade center attack

ನ್ಯೂಯಾರ್ಕ್: ಅಮೆರಿಕದ ವಿಶ್ವ ವಾಣಿಜ್ಯ ಕೇಂದ್ರದ ಎರಡು ಬೃಹತ್ ಕಟ್ಟಡಗಳ ಮೇಲೆ ಆಲ್ ಕೈದಾ ಉಗ್ರರು ದಾಳಿ ನಡೆಸಿ ಇಂದಿಗೆ ಭರ್ತಿ ಎರಡು ದಶಕವಾಗಿದೆ. 2001ರ ಸೆಪ್ಟೆಂಬರ್ 11ರಂದು ಆಲ್ ಕೈದಾ ಉಗ್ರರು ಟ್ವಿನ್ ಟವರ್ ನ ಮೇಲೆ ವಿಮಾನದಿಂದ ದಾಳಿ ನಡೆಸಿದ್ದರು.

ನ್ಯೂಯಾರ್ಕ್‌ನಲ್ಲಿನ ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡಗಳ ಮೇಲಿನ ದಾಳಿಯಲ್ಲಿ ಸುಮಾರು 3 ಸಾವಿರ ಜನರು ಮೃತಪಟ್ಟು, 6 ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಒಟ್ಟು 4 ವಿಮಾನ ಅಪಹರಿಸಿದ್ದ 19 ಅಲ್‌ ಕೈದಾ ಉಗ್ರರ ಪಡೆ 110 ಮಹಡಿಗಳ ಅವಳಿ ಗೋಪುರಗಳಿಗೆ ನುಗ್ಗಿಸಿತ್ತು.

ಟ್ವಿನ್ ಟವರ್ ಮೇಲೆ ನಡೆದ ದಾಳಿಗೆ ಸೇಡು ತೀರಿಸಿಕೊಳ್ಳಲು ಅಂದಿನ ಅಮೆರಿಕ ಅಧ್ಯಕ್ಷ ಜಾರ್ಜ್ ಡಬ್ಲ್ಯೂ ಬುಷ್ ನಿರ್ಧಾರ ಕೈಗೊಂಡರು. 2001ರ ಅಕ್ಟೋಬರ್ 7ರಂದು ಬ್ರಿಟನ್ ಸಹಾಯದೊಂದಿಗೆ ಅಮೆರಿಕ ಸೇನೆಯು ಆಲ್ ಕೈದಾ ಮತ್ತು ತಾಲಿಬಾನ್ ಪಡೆಗಳ ವಿರುದ್ಧ ಅಫ್ಗಾನಿಸ್ತಾನದಲ್ಲಿ ದಾಳಿ ಆರಂಭಿಸಿತು. ಅಮೆರಿಕ ಈ ಕಾರ್ಯಾಚರಣೆಯನ್ನು ‘ಆಪರೇಷನ್ ಎಂಡ್ಯೂರಿಂಗ್ ಫ್ರೀಡಮ್’ ಎಂದು ಕರೆದಿತ್ತು. ಕೆನಡಾ, ಆಸ್ಟ್ರೇಲಿಯಾ, ಜರ್ಮನಿ ಹಾಗೂ ಫ್ರಾನ್ಸ್ ಸಹ ಇದಕ್ಕೆ ಬೆಂಬಲ ನೀಡಿದ್ದವು.

ಇದನ್ನೂ ಓದಿ:ಮೆಗಾ ಅಭಿಮಾನಿಗಳಿಗೆ ಶಾಕಿಂಗ್ : ನಟ ಸಾಯಿ ಧರ್ಮತೇಜ್ ಬೈಕ್ ಅಪಘಾತ, ಆಸ್ಪತ್ರೆಗೆ ದಾಖಲು

2001ರ ನ. 9ರಂದು ತಾಲಿಬಾನ್ ಮಜರ್-ಇ-ಷರೀಫ್‌ನಲ್ಲಿ ಅಮೆರಿಕ ಪಡೆಗಳಿಗೆ ಶರಣಾಯಿತು. 2001ರ ನ. 11ರಂದು ಬಾಮಿಯಾನ್ ನಗರ, ನ. 12ರಂದು ಹೆರಾತ್, ನ. 13ರಂದು ಕಾಬೂಲ್ ನಗರಗಳಲ್ಲಿ ತಾಲಿಬಾನ್ ಹಿಡಿತ ಕೊನೆಯಾಯಿತು. ಇನ್ನು ಅಂತಿಮವಾಗಿ 2001ರ ನ. 14ರಂದು ಜಲಾಲಾಬಾದ್ ನಗರ ಕೂಡ ತಾಲಿಬಾನ್ ಕೈಬಿಟ್ಟು ಹೋಯಿತು. 2 ವಾರ ನಡೆದ ಈ ಭೀಕರ ಯುದ್ದದಲ್ಲಿ ಸಾವಿರಾರು ಜನ ಅಸುನೀಗಿದ್ದರು. ನಂತರ ಅಮೆರಿಕ ಸಹಾಯದಿಂದ ಅಫ್ಘಾನ್ ನಲ್ಲಿ ನೂತನ ಸರ್ಕಾರ ರಚನೆಯಾಯಿತು.

ಟ್ವಿನ್ ಟವರ್ ದಾಳಿಯ ಪ್ರಮುಖ ರೂವಾರಿ ಅಲ್ ಕೈದಾ ಉಗ್ರ ಒಸಾಮಾ ಬಿನ್ ಲಾಡೆನ್ ಗಾಗಿ ಹುಡುಕಾಟ ನಡೆದೇ ಇತ್ತು. ಸುಮಾರು ಒಂದು ದಶಕದ ಬಳಿಕ 2011ರ ಮೇ 1ರಂದು ಪಾಕಿಸ್ಥಾನದಲ್ಲಿ ಅಡಗಿದ್ದ ಉಗ್ರ ಲಾಡೆನ್ ನನ್ನು ಅಮೆರಿಕ ಪಡೆ ಕೊಂದು ಹಾಕಿತ್ತು.

ಸದ್ಯ ಎರಡು ದಶಕದ ಬಳಿಕ ಅಮೆರಿಕವು ಅಫ್ಘಾನ್ ನಲ್ಲಿದ್ದ ತನ್ನ ಪಡೆಯನ್ನು ವಾಪಾಸ್ ಕರೆಸಿಕೊಂಡಿದೆ. ಯುಎಸ್ ಪಡೆ ಮರಳಿ ಹೋಗುತ್ತಿದ್ದಂತೆ ತಾಲಿಬಾನ್ ಗಳ ಅಟ್ಟಹಾಸ ಆರಂಭವಾಗಿದೆ. ಸದ್ಯ ಸಂಪೂರ್ಣ ಅಫ್ಘಾನಿಸ್ಥಾನವನ್ನು ವಶಕ್ಕೆ ಪಡೆದಿರುವ ತಾಲಿಬಾನ್ ಅಲ್ಲಿ ತನ್ನದೇ ಸರ್ಕಾರವನ್ನು ರಚಿಸಿದೆ.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

ISREL

Hamas ದಾಳಿ ತಡೆಗೆ ವಿಫ‌ಲ: ಇಸ್ರೇಲ್‌ ಸೇನಾ ಗುಪ್ತಚರ ಮುಖ್ಯಸ್ಥ ರಾಜೀನಾಮೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.